ಮತದಾನ ಬಹಿಷ್ಕಾರ ತೀರ್ಮಾನ ತಾತ್ಕಾಲಿಕ ಸ್ಥಗಿತ: ಕುಡಿಯಲು ಜಕ್ಕಲಮಡಗು ನೀರು ನೀಡುವ ಭರವಸೆ ನೀಡಿದ ಚುನಾವಣಾಧಿಕಾರಿ

ನಗರಸಭೆ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಒಳಚರಂಡಿ ನೀರು, ಕೈಗಾರಿಕಾ ಪ್ರದೇಶದ ಕಾರ್ಖಾನೆಗಳ‌ ರಾಸಾಯನಿಕ ಯುಕ್ತ ತ್ಯಾಜ್ಯ ನೀರು ಸೇರಿದಂತೆ ಇತರೆ ತ್ಯಾಜ್ಯ ನೇರವಾಗಿ ಅರ್ಕಾವತಿ ನದಿ ಪಾತ್ರದ ಕೆರೆಗಳ ಒಡಲು ಸೇರಿ ಸಂಪೂರ್ಣ ಕಲುಷಿತಗೊಂಡಿವೆ.

ಈ ಕೆರೆಗಳ ನೀರನ್ನು ಬಳಿಸಿದ ಜನ ರೋಗಪೀಡಿತರಾಗುತ್ತಿದ್ದಾರೆ. ಪ್ರಾಣಿ ಪಕ್ಷಿಗಳು, ಜಲಚರಗಳು ಸಾವನ್ನಪ್ಪುತ್ತಿವೆ. ಆದ್ದರಿಂದ ಕೆರೆ ಸಂರಕ್ಷಣೆಗೆ, ಕೆರೆ ಶುದ್ಧೀಕರಣಕ್ಕೆ ಈಗಾಗಲೇ ಹಲವು ಮನವಿ, ಹೋರಾಟ, ಪ್ರತಿಭಟನೆ ಸೇರಿದಂತೆ ನಾನಾ ಪ್ರಯತ್ನ ಮಾಡಿದರೂ ಸಮಸ್ಯೆ ಬಗೆಹರಿಯಲಿಲ್ಲ. ಆದರೆ ಪಟ್ಟು ಬಿಡದೇ ಕೆರೆ ಶುದ್ದೀಕರಣ, ಸಂರಕ್ಷಣೆಗೆ ಹೋರಾಟ ಮುಂದುವರಿಸಿದ ಕೆರೆ ಹೋರಾಟ ಸಮಿತಿ ಮುಖಂಡರು, ಗ್ರಾಮಸ್ಥರು.

ಕೆರೆ ಉಳಿವಿಗಾಗಿ 2023ರ ಸಾರ್ವತ್ರಿಕ ಚುನಾವಣೆ ಬಹಿಷ್ಕರಿಸಲು ತೀರ್ಮಾನಿಸಿರುವ ಗ್ರಾಮಸ್ಥರು, ಈ‌ ಹಿನ್ನೆಲೆ ಈಗಾಗಲೇ ಮತದಾನ ಬಹಿಷ್ಕಾರಕ್ಕೆ ಒಪ್ಪಿ ಸಹಿ ಅಕ್ಕಪಕ್ಕದ ಊರಿನ ಗ್ರಾಮಸ್ಥರು ಸಹಿ ಸಂಗ್ರಹ ಕೂಡ ಮಾಡಲಾಗಿದೆ. ಈ ಸಹಿ ಸಂಗ್ರಹ ಪತ್ರವನ್ನು ಚುನಾವಣಾಧಿಕಾರಿಗೆ ತಲುಪಿಸಿದ ಕೆರೆ ಹೋರಾಟ ಸಮಿತಿ ಸದಸ್ಯರು.

ದೊಡ್ಡ ತುಮಕೂರು ಗ್ರಾಮ ಪಂಚಾಯಿತಿ ಮತ್ತು ಮಜುರಾಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಹಳ್ಳಿಗಳಲ್ಲಿ ಸದ್ಯ ಕುಡಿಯಲು ನೀರು ಇಲ್ಲದೆ ಪರಿತಪಿಸುತ್ತಿರುವ ಗ್ರಾಮಸ್ಥರು, ಇದನ್ನು ಚುನಾವಣಾಧಿಕಾರಿ ಗಮನಕ್ಕೆ ತಂದ ಕೆರೆ ಹೋರಾಟ ಸಮಿತಿ ಸದಸ್ಯರು. ಎಲ್ಲಾ ಸಮಸ್ಯೆಗಳನ್ನು ಆಲಿಸಿ ತಾತ್ಕಾಲಿಕವಾಗಿ ಜಕ್ಕಲಮಡಗು ಜಲಾಶಯದಿಂದ ಶುದ್ಧೀಕರಣದ ನೀರನ್ನು ನೀಡುವುದಾಗಿ ಹಾಗೂ ಎಲ್ಲಾ ಹಳ್ಳಿಗಳಲ್ಲಿ ಆರೋಗ್ಯ ಶಿಬಿರ ಏರ್ಪಡಿಸಿ ತಪಾಸಣೆ ಮಾಡಲಾಗುವುದು ಎಂದು ಭರವಸೆ ನೀಡಿದ ಚುನಾವಣಾಧಿಕಾರಿ.

ಈ ಭರವಸೆಗೆ ಒಪ್ಪಿ ಚುನಾವಣಾ ಬಹಿಷ್ಕಾರದ ತೀರ್ಮಾನ ಸದ್ಯ ಸ್ಥಗಿತಗೊಳಿಸಿದ ಹೋರಾಟ ಸಮಿತಿ, ಇನ್ನೇರೆಡು ದಿನಗಳಲ್ಲಿ ಗ್ರಾಮಗಳಿಗೆ ವೈದ್ಯರು, ಕುಡಿಯುವ ನೀರು ಬರದೇ ಹೋದ ಪಕ್ಷದಲ್ಲಿ ಮತ್ತೆ ಮತದಾನ ಬಹಿಷ್ಕಾರ ತೀರ್ಮಾನ ಮುನ್ನೆಲೆಗೆ ತರಲಾಗುವುದು ಎಂದು ಎಚ್ಚರಿಸಿದ ಹೋರಾಟ ಸಮಿತಿ ಮುಖಂಡರು.

ಈ ವೇಳೆ ಕೆರೆ ಸಂರಕ್ಷಣಾ ವೇದಿಕೆಯ ಮುಖಂಡರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

4 hours ago

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

5 hours ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

5 hours ago

ಕರ್ನಾಟಕದ ಶೈಕ್ಷಣಿಕ ಭಾಷಾ ನೀತಿ…..

ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…

9 hours ago

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

20 hours ago

ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

21 hours ago