ಮತದಾನ ಬಹಿಷ್ಕಾರ ತೀರ್ಮಾನ ತಾತ್ಕಾಲಿಕ ಸ್ಥಗಿತ: ಕುಡಿಯಲು ಜಕ್ಕಲಮಡಗು ನೀರು ನೀಡುವ ಭರವಸೆ ನೀಡಿದ ಚುನಾವಣಾಧಿಕಾರಿ

ನಗರಸಭೆ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಒಳಚರಂಡಿ ನೀರು, ಕೈಗಾರಿಕಾ ಪ್ರದೇಶದ ಕಾರ್ಖಾನೆಗಳ‌ ರಾಸಾಯನಿಕ ಯುಕ್ತ ತ್ಯಾಜ್ಯ ನೀರು ಸೇರಿದಂತೆ ಇತರೆ ತ್ಯಾಜ್ಯ ನೇರವಾಗಿ ಅರ್ಕಾವತಿ ನದಿ ಪಾತ್ರದ ಕೆರೆಗಳ ಒಡಲು ಸೇರಿ ಸಂಪೂರ್ಣ ಕಲುಷಿತಗೊಂಡಿವೆ.

ಈ ಕೆರೆಗಳ ನೀರನ್ನು ಬಳಿಸಿದ ಜನ ರೋಗಪೀಡಿತರಾಗುತ್ತಿದ್ದಾರೆ. ಪ್ರಾಣಿ ಪಕ್ಷಿಗಳು, ಜಲಚರಗಳು ಸಾವನ್ನಪ್ಪುತ್ತಿವೆ. ಆದ್ದರಿಂದ ಕೆರೆ ಸಂರಕ್ಷಣೆಗೆ, ಕೆರೆ ಶುದ್ಧೀಕರಣಕ್ಕೆ ಈಗಾಗಲೇ ಹಲವು ಮನವಿ, ಹೋರಾಟ, ಪ್ರತಿಭಟನೆ ಸೇರಿದಂತೆ ನಾನಾ ಪ್ರಯತ್ನ ಮಾಡಿದರೂ ಸಮಸ್ಯೆ ಬಗೆಹರಿಯಲಿಲ್ಲ. ಆದರೆ ಪಟ್ಟು ಬಿಡದೇ ಕೆರೆ ಶುದ್ದೀಕರಣ, ಸಂರಕ್ಷಣೆಗೆ ಹೋರಾಟ ಮುಂದುವರಿಸಿದ ಕೆರೆ ಹೋರಾಟ ಸಮಿತಿ ಮುಖಂಡರು, ಗ್ರಾಮಸ್ಥರು.

ಕೆರೆ ಉಳಿವಿಗಾಗಿ 2023ರ ಸಾರ್ವತ್ರಿಕ ಚುನಾವಣೆ ಬಹಿಷ್ಕರಿಸಲು ತೀರ್ಮಾನಿಸಿರುವ ಗ್ರಾಮಸ್ಥರು, ಈ‌ ಹಿನ್ನೆಲೆ ಈಗಾಗಲೇ ಮತದಾನ ಬಹಿಷ್ಕಾರಕ್ಕೆ ಒಪ್ಪಿ ಸಹಿ ಅಕ್ಕಪಕ್ಕದ ಊರಿನ ಗ್ರಾಮಸ್ಥರು ಸಹಿ ಸಂಗ್ರಹ ಕೂಡ ಮಾಡಲಾಗಿದೆ. ಈ ಸಹಿ ಸಂಗ್ರಹ ಪತ್ರವನ್ನು ಚುನಾವಣಾಧಿಕಾರಿಗೆ ತಲುಪಿಸಿದ ಕೆರೆ ಹೋರಾಟ ಸಮಿತಿ ಸದಸ್ಯರು.

ದೊಡ್ಡ ತುಮಕೂರು ಗ್ರಾಮ ಪಂಚಾಯಿತಿ ಮತ್ತು ಮಜುರಾಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಹಳ್ಳಿಗಳಲ್ಲಿ ಸದ್ಯ ಕುಡಿಯಲು ನೀರು ಇಲ್ಲದೆ ಪರಿತಪಿಸುತ್ತಿರುವ ಗ್ರಾಮಸ್ಥರು, ಇದನ್ನು ಚುನಾವಣಾಧಿಕಾರಿ ಗಮನಕ್ಕೆ ತಂದ ಕೆರೆ ಹೋರಾಟ ಸಮಿತಿ ಸದಸ್ಯರು. ಎಲ್ಲಾ ಸಮಸ್ಯೆಗಳನ್ನು ಆಲಿಸಿ ತಾತ್ಕಾಲಿಕವಾಗಿ ಜಕ್ಕಲಮಡಗು ಜಲಾಶಯದಿಂದ ಶುದ್ಧೀಕರಣದ ನೀರನ್ನು ನೀಡುವುದಾಗಿ ಹಾಗೂ ಎಲ್ಲಾ ಹಳ್ಳಿಗಳಲ್ಲಿ ಆರೋಗ್ಯ ಶಿಬಿರ ಏರ್ಪಡಿಸಿ ತಪಾಸಣೆ ಮಾಡಲಾಗುವುದು ಎಂದು ಭರವಸೆ ನೀಡಿದ ಚುನಾವಣಾಧಿಕಾರಿ.

ಈ ಭರವಸೆಗೆ ಒಪ್ಪಿ ಚುನಾವಣಾ ಬಹಿಷ್ಕಾರದ ತೀರ್ಮಾನ ಸದ್ಯ ಸ್ಥಗಿತಗೊಳಿಸಿದ ಹೋರಾಟ ಸಮಿತಿ, ಇನ್ನೇರೆಡು ದಿನಗಳಲ್ಲಿ ಗ್ರಾಮಗಳಿಗೆ ವೈದ್ಯರು, ಕುಡಿಯುವ ನೀರು ಬರದೇ ಹೋದ ಪಕ್ಷದಲ್ಲಿ ಮತ್ತೆ ಮತದಾನ ಬಹಿಷ್ಕಾರ ತೀರ್ಮಾನ ಮುನ್ನೆಲೆಗೆ ತರಲಾಗುವುದು ಎಂದು ಎಚ್ಚರಿಸಿದ ಹೋರಾಟ ಸಮಿತಿ ಮುಖಂಡರು.

ಈ ವೇಳೆ ಕೆರೆ ಸಂರಕ್ಷಣಾ ವೇದಿಕೆಯ ಮುಖಂಡರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ….

ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…

2 hours ago

ಹವಾಮಾನ ವೈಪರಿತ್ಯಕ್ಕೆ ತತ್ತರಿಸಿದ ಕೃಷಿ: ಮಾವು, ದ್ರಾಕ್ಷಿ, ತರಕಾರಿ ಬೆಳೆಗಳಿಗೆ ಭಾರೀ ಹೊಡೆತ

ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…

4 hours ago

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

15 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

20 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

22 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

23 hours ago