ಮತದಾನ ಬಹಿಷ್ಕಾರ ತೀರ್ಮಾನ ತಾತ್ಕಾಲಿಕ ಸ್ಥಗಿತ: ಕುಡಿಯಲು ಜಕ್ಕಲಮಡಗು ನೀರು ನೀಡುವ ಭರವಸೆ ನೀಡಿದ ಚುನಾವಣಾಧಿಕಾರಿ

ನಗರಸಭೆ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಒಳಚರಂಡಿ ನೀರು, ಕೈಗಾರಿಕಾ ಪ್ರದೇಶದ ಕಾರ್ಖಾನೆಗಳ‌ ರಾಸಾಯನಿಕ ಯುಕ್ತ ತ್ಯಾಜ್ಯ ನೀರು ಸೇರಿದಂತೆ ಇತರೆ ತ್ಯಾಜ್ಯ ನೇರವಾಗಿ ಅರ್ಕಾವತಿ ನದಿ ಪಾತ್ರದ ಕೆರೆಗಳ ಒಡಲು ಸೇರಿ ಸಂಪೂರ್ಣ ಕಲುಷಿತಗೊಂಡಿವೆ.

ಈ ಕೆರೆಗಳ ನೀರನ್ನು ಬಳಿಸಿದ ಜನ ರೋಗಪೀಡಿತರಾಗುತ್ತಿದ್ದಾರೆ. ಪ್ರಾಣಿ ಪಕ್ಷಿಗಳು, ಜಲಚರಗಳು ಸಾವನ್ನಪ್ಪುತ್ತಿವೆ. ಆದ್ದರಿಂದ ಕೆರೆ ಸಂರಕ್ಷಣೆಗೆ, ಕೆರೆ ಶುದ್ಧೀಕರಣಕ್ಕೆ ಈಗಾಗಲೇ ಹಲವು ಮನವಿ, ಹೋರಾಟ, ಪ್ರತಿಭಟನೆ ಸೇರಿದಂತೆ ನಾನಾ ಪ್ರಯತ್ನ ಮಾಡಿದರೂ ಸಮಸ್ಯೆ ಬಗೆಹರಿಯಲಿಲ್ಲ. ಆದರೆ ಪಟ್ಟು ಬಿಡದೇ ಕೆರೆ ಶುದ್ದೀಕರಣ, ಸಂರಕ್ಷಣೆಗೆ ಹೋರಾಟ ಮುಂದುವರಿಸಿದ ಕೆರೆ ಹೋರಾಟ ಸಮಿತಿ ಮುಖಂಡರು, ಗ್ರಾಮಸ್ಥರು.

ಕೆರೆ ಉಳಿವಿಗಾಗಿ 2023ರ ಸಾರ್ವತ್ರಿಕ ಚುನಾವಣೆ ಬಹಿಷ್ಕರಿಸಲು ತೀರ್ಮಾನಿಸಿರುವ ಗ್ರಾಮಸ್ಥರು, ಈ‌ ಹಿನ್ನೆಲೆ ಈಗಾಗಲೇ ಮತದಾನ ಬಹಿಷ್ಕಾರಕ್ಕೆ ಒಪ್ಪಿ ಸಹಿ ಅಕ್ಕಪಕ್ಕದ ಊರಿನ ಗ್ರಾಮಸ್ಥರು ಸಹಿ ಸಂಗ್ರಹ ಕೂಡ ಮಾಡಲಾಗಿದೆ. ಈ ಸಹಿ ಸಂಗ್ರಹ ಪತ್ರವನ್ನು ಚುನಾವಣಾಧಿಕಾರಿಗೆ ತಲುಪಿಸಿದ ಕೆರೆ ಹೋರಾಟ ಸಮಿತಿ ಸದಸ್ಯರು.

ದೊಡ್ಡ ತುಮಕೂರು ಗ್ರಾಮ ಪಂಚಾಯಿತಿ ಮತ್ತು ಮಜುರಾಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಹಳ್ಳಿಗಳಲ್ಲಿ ಸದ್ಯ ಕುಡಿಯಲು ನೀರು ಇಲ್ಲದೆ ಪರಿತಪಿಸುತ್ತಿರುವ ಗ್ರಾಮಸ್ಥರು, ಇದನ್ನು ಚುನಾವಣಾಧಿಕಾರಿ ಗಮನಕ್ಕೆ ತಂದ ಕೆರೆ ಹೋರಾಟ ಸಮಿತಿ ಸದಸ್ಯರು. ಎಲ್ಲಾ ಸಮಸ್ಯೆಗಳನ್ನು ಆಲಿಸಿ ತಾತ್ಕಾಲಿಕವಾಗಿ ಜಕ್ಕಲಮಡಗು ಜಲಾಶಯದಿಂದ ಶುದ್ಧೀಕರಣದ ನೀರನ್ನು ನೀಡುವುದಾಗಿ ಹಾಗೂ ಎಲ್ಲಾ ಹಳ್ಳಿಗಳಲ್ಲಿ ಆರೋಗ್ಯ ಶಿಬಿರ ಏರ್ಪಡಿಸಿ ತಪಾಸಣೆ ಮಾಡಲಾಗುವುದು ಎಂದು ಭರವಸೆ ನೀಡಿದ ಚುನಾವಣಾಧಿಕಾರಿ.

ಈ ಭರವಸೆಗೆ ಒಪ್ಪಿ ಚುನಾವಣಾ ಬಹಿಷ್ಕಾರದ ತೀರ್ಮಾನ ಸದ್ಯ ಸ್ಥಗಿತಗೊಳಿಸಿದ ಹೋರಾಟ ಸಮಿತಿ, ಇನ್ನೇರೆಡು ದಿನಗಳಲ್ಲಿ ಗ್ರಾಮಗಳಿಗೆ ವೈದ್ಯರು, ಕುಡಿಯುವ ನೀರು ಬರದೇ ಹೋದ ಪಕ್ಷದಲ್ಲಿ ಮತ್ತೆ ಮತದಾನ ಬಹಿಷ್ಕಾರ ತೀರ್ಮಾನ ಮುನ್ನೆಲೆಗೆ ತರಲಾಗುವುದು ಎಂದು ಎಚ್ಚರಿಸಿದ ಹೋರಾಟ ಸಮಿತಿ ಮುಖಂಡರು.

ಈ ವೇಳೆ ಕೆರೆ ಸಂರಕ್ಷಣಾ ವೇದಿಕೆಯ ಮುಖಂಡರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

8 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

19 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

20 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

20 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

22 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

1 day ago