Categories: ಲೇಖನ

ಮತದಾನ – ಸರ್ವಶ್ರೇಷ್ಠ ದಾನ…..ನಿಮ್ಮ ಮತ ದೇಶಕ್ಕೆ ಹಿತ

ಬಿಸಿಲಿರಲಿ, ಮಳೆಯಿರಲಿ, ಬಿರುಗಾಳಿಯಿರಲಿ, ನಡುಗುವ ಚಳಿಯಿರಲಿ, ಜಗ್ಗದೆ, ಕುಗ್ಗದೆ, ಬಗ್ಗದೆ, ಮತದಾನ ಮಾಡಿ,……

ಜ್ವರವಿರಲಿ,
ನೆಗಡಿಯಿರಲಿ,
ಕೆಮ್ಮಿರಲಿ,
ತಲೆ ನೋವಿರಲಿ,
ಗ್ಯಾಸ್ಟ್ರಿಕ್ ಇರಲಿ,
ಮರೆಯದೆ ಮತದಾನ ಮಾಡಿ,…….

ಕೆಲಸವಿರಲಿ,
ಇಲ್ಲದಿರಲಿ,
ಕ್ಯೂ ಇರಲಿ,
ಖಾಲಿ ಇರಲಿ,
ದೂರವಿರಲಿ,
ಹತ್ತಿರವಿರಲಿ,
ತಾಳ್ಮೆಯಿಂದ ನಿಂತು, ಮತದಾನ ಮಾಡಿ,…..

ಮತದಾನ ಎಲ್ಲ ದಾನಕ್ಕಿಂತ ಶ್ರೇಷ್ಠ ದಾನ,
ನಿಮ್ಮ ಮತ ದೇಶಕ್ಕೆ ಹಿತ,
ನಿಮ್ಮ ರಕ್ಷಣೆಗಾಗಿ ಮತದಾನ ಮಾಡಿ,
ಪ್ರಜಾಪ್ರಭುತ್ವ ಉಳಿಸಲು ಮತದಾನ ಮಾಡಿ,….

ನಿಮ್ಮ ಪ್ರತಿನಿಧಿಯಾಗಿ ನನ್ನನ್ನು ಚುನಾಯಿಸಲು ಮತದಾನ ಮಾಡಿ,
ಆಮೇಲೆ ಮಂತ್ರಿಯಾಗಲು ಲಾಬಿ ನಾನು ಮಾಡುವೆನು,….

ನೀವು ನೋಡನೋಡುತ್ತಿದ್ದಂತೆ ನಿಮ್ಮ ಭೇಟಿಯ ಅನುಕೂಲಕ್ಕಾಗಿ,
ಒಂದು ಬೃಹತ್ ಬಂಗಲೆ ನಾನು ಮಾಡುತ್ತೇನೆ,
ನನ್ನ ನಂತರ ನಿಮ್ಮ ಸೇವೆಗಾಗಿ ನನ್ನ ಮಗ/ಮಗಳನ್ನು ವಿದ್ಯಾಭ್ಯಾಸಕ್ಕಾಗಿ
ವಿದೇಶಕ್ಕೆ ಕಳಿಸುತ್ತೇನೆ,….

ಗಣೇಶ, ಅಣ್ಣಮ್ಮ, ರಾಜ್ಯೋತ್ಸವದ ನಿಮ್ಮ ಉತ್ಸವಕ್ಕೆ, ಹಣ ಹೊಂದಿಸಲು
ತಿಂಗಳ ಆದಾಯಕ್ಕಾಗಿ
COMMERCIAL COMPLEX ಕಟ್ಟಿಸಿ ಬಾಡಿಗೆ ಬಿಡುತ್ತೇನೆ,……

ನನ್ನ ಸುತ್ತಮುತ್ತಲ ಜನರಿಗೆ ಬೇರೆ ಬೇರೆ CONTRACT ಕೊಡಿಸಿ,
ಮುಂದಿನ ಚುನಾವಣೆಗಾಗಿ ಹಣ ಮಾಡುತ್ತೇನೆ,….

ಯಾವುದಕ್ಕೂ ಇರಲಿ ಎಂದು ಎಲ್ಲಾ ಪಕ್ಷಗಳ ನಾಯಕರ ಜೊತೆಗೂ
CONTACT ನಲ್ಲಿರುತ್ತೇನೆ,
ಸಂಬಂಧ ಬೆಳೆಸುತ್ತೇನೆ…..

ನಿಮ್ಮ ಸಮಸ್ಯೆಗಳನ್ನು ಹಾಗೆಯೇ ಉಳಿಸುತ್ತೇನೆ,
ಏಕೆಂದರೆ PROBLEMS
ಇದ್ದರೇನೆ ನಿಮಗೆ ನನ್ನ ನೆನಪಾಗುವುದು,….

ನಿಮ್ಮಿಂದಲೇ ನಾವು,
ನಿಮ್ಮ ಒಂದು ಮತ,
ನನಗಷ್ಟೇ ಅಲ್ಲದೆ,
ಮಾಧ್ಯಮದವರು, ಕಾಂಟ್ರಾಕ್ಟರ್ ಗಳು, ಅಧಿಕಾರಿಗಳು,
ಪುಢಾರಿಗಳು,
ಎಲ್ಲರನ್ನೂ ಚೆನ್ನಾಗಿಟ್ಟಿರುತ್ತದೆ,……

ಇದರಲ್ಲಿ ಮುಚ್ಚುಮರೆ ಏನೂ ಇಲ್ಲ,
ನನ್ನದು ನೇರವಾದ ಮಾತು, ಸತ್ಯವಾದ ಮಾತು,
ಬೇಕಾದರೆ ಇನ್ನೊಂದು 1000 ರೂಪಾಯಿ ಹೆಚ್ಚಿಗೆ ತೆಗೆದುಕೊಳ್ಳಿ,…..

ಆದರೆ,
ಮತದಾರ ಬಂಧುಗಳೇ,
ಮತದಾನ ಮಾಡಿ ಪ್ರಜಾಪ್ರಭುತ್ವ ಉಳಿಸಿ,…..

Public ಆಗಿ ಯಾರಿಗೂ ಹೇಳಬೇಡಿ, ನಿಮ್ಮಲ್ಲೇ ಇರಲಿ,
ಚುನಾವಣಾಧಿಕಾರಿಗಳು ಕೇಳಿಸಿಕೊಂಡಾರು…………

ಇದು ನನ್ನ – ನಿಮ್ಮ ನಡುವಿನ ವ್ಯವಹಾರ….

ವಂದೇ ಮಾತರಂ,
ಜೈಹಿಂದ್,
ಬೋಲೋ ಭಾರತ್ ಮಾತಾ ಕೀ ಜೈ……..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ- ವಿವೇಕಾನಂದ. ಎಚ್.ಕೆ.

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

3 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

6 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

8 hours ago

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…

13 hours ago

ಉಪರಾಷ್ಟ್ರಪತಿ‌ ಚುನಾವಣೆ: ಎನ್‌ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರಿಗೆ ಭರ್ಜರಿ ಗೆಲುವು

ಮಂಗಳವಾರ ನಡೆದ ಉಪರಾಷ್ಟ್ರಪತಿ‌ ಚುನಾವಣೆಯಲ್ಲಿ ಎನ್‌ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್‌ ಅವರು ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಉಪರಾಷ್ಟ್ರಪತಿ…

24 hours ago

40 ಕೋಟಿ ಮೌಲ್ಯದ 6 ಎಕರೆ ಸರ್ಕಾರಿ ಆಸ್ತಿ ಸರ್ಕಾರದ ವಶ: ಡಿಸಿ ಕ್ರಮಕ್ಕೆ ಪ್ರಬುದ್ಧ ಕರ್ನಾಟಕ ಭೀಮ ಸೇನೆ ಅಭಿನಂದನೆ ಸಲ್ಲಿಕೆ

ದೊಡ್ಡಬಳ್ಳಾಪುರ : 40 ಕೋಟಿ ಮೌಲ್ಯದ ಸರ್ಕಾರಿ ಆಸ್ತಿಯನ್ನ ಸರ್ಕಾರದ ವಶಕ್ಕೆ ಪಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜುರವರ…

1 day ago