Categories: ಲೇಖನ

ಮತದಾನ – ಸರ್ವಶ್ರೇಷ್ಠ ದಾನ…..ನಿಮ್ಮ ಮತ ದೇಶಕ್ಕೆ ಹಿತ

ಬಿಸಿಲಿರಲಿ, ಮಳೆಯಿರಲಿ, ಬಿರುಗಾಳಿಯಿರಲಿ, ನಡುಗುವ ಚಳಿಯಿರಲಿ, ಜಗ್ಗದೆ, ಕುಗ್ಗದೆ, ಬಗ್ಗದೆ, ಮತದಾನ ಮಾಡಿ,……

ಜ್ವರವಿರಲಿ,
ನೆಗಡಿಯಿರಲಿ,
ಕೆಮ್ಮಿರಲಿ,
ತಲೆ ನೋವಿರಲಿ,
ಗ್ಯಾಸ್ಟ್ರಿಕ್ ಇರಲಿ,
ಮರೆಯದೆ ಮತದಾನ ಮಾಡಿ,…….

ಕೆಲಸವಿರಲಿ,
ಇಲ್ಲದಿರಲಿ,
ಕ್ಯೂ ಇರಲಿ,
ಖಾಲಿ ಇರಲಿ,
ದೂರವಿರಲಿ,
ಹತ್ತಿರವಿರಲಿ,
ತಾಳ್ಮೆಯಿಂದ ನಿಂತು, ಮತದಾನ ಮಾಡಿ,…..

ಮತದಾನ ಎಲ್ಲ ದಾನಕ್ಕಿಂತ ಶ್ರೇಷ್ಠ ದಾನ,
ನಿಮ್ಮ ಮತ ದೇಶಕ್ಕೆ ಹಿತ,
ನಿಮ್ಮ ರಕ್ಷಣೆಗಾಗಿ ಮತದಾನ ಮಾಡಿ,
ಪ್ರಜಾಪ್ರಭುತ್ವ ಉಳಿಸಲು ಮತದಾನ ಮಾಡಿ,….

ನಿಮ್ಮ ಪ್ರತಿನಿಧಿಯಾಗಿ ನನ್ನನ್ನು ಚುನಾಯಿಸಲು ಮತದಾನ ಮಾಡಿ,
ಆಮೇಲೆ ಮಂತ್ರಿಯಾಗಲು ಲಾಬಿ ನಾನು ಮಾಡುವೆನು,….

ನೀವು ನೋಡನೋಡುತ್ತಿದ್ದಂತೆ ನಿಮ್ಮ ಭೇಟಿಯ ಅನುಕೂಲಕ್ಕಾಗಿ,
ಒಂದು ಬೃಹತ್ ಬಂಗಲೆ ನಾನು ಮಾಡುತ್ತೇನೆ,
ನನ್ನ ನಂತರ ನಿಮ್ಮ ಸೇವೆಗಾಗಿ ನನ್ನ ಮಗ/ಮಗಳನ್ನು ವಿದ್ಯಾಭ್ಯಾಸಕ್ಕಾಗಿ
ವಿದೇಶಕ್ಕೆ ಕಳಿಸುತ್ತೇನೆ,….

ಗಣೇಶ, ಅಣ್ಣಮ್ಮ, ರಾಜ್ಯೋತ್ಸವದ ನಿಮ್ಮ ಉತ್ಸವಕ್ಕೆ, ಹಣ ಹೊಂದಿಸಲು
ತಿಂಗಳ ಆದಾಯಕ್ಕಾಗಿ
COMMERCIAL COMPLEX ಕಟ್ಟಿಸಿ ಬಾಡಿಗೆ ಬಿಡುತ್ತೇನೆ,……

ನನ್ನ ಸುತ್ತಮುತ್ತಲ ಜನರಿಗೆ ಬೇರೆ ಬೇರೆ CONTRACT ಕೊಡಿಸಿ,
ಮುಂದಿನ ಚುನಾವಣೆಗಾಗಿ ಹಣ ಮಾಡುತ್ತೇನೆ,….

ಯಾವುದಕ್ಕೂ ಇರಲಿ ಎಂದು ಎಲ್ಲಾ ಪಕ್ಷಗಳ ನಾಯಕರ ಜೊತೆಗೂ
CONTACT ನಲ್ಲಿರುತ್ತೇನೆ,
ಸಂಬಂಧ ಬೆಳೆಸುತ್ತೇನೆ…..

ನಿಮ್ಮ ಸಮಸ್ಯೆಗಳನ್ನು ಹಾಗೆಯೇ ಉಳಿಸುತ್ತೇನೆ,
ಏಕೆಂದರೆ PROBLEMS
ಇದ್ದರೇನೆ ನಿಮಗೆ ನನ್ನ ನೆನಪಾಗುವುದು,….

ನಿಮ್ಮಿಂದಲೇ ನಾವು,
ನಿಮ್ಮ ಒಂದು ಮತ,
ನನಗಷ್ಟೇ ಅಲ್ಲದೆ,
ಮಾಧ್ಯಮದವರು, ಕಾಂಟ್ರಾಕ್ಟರ್ ಗಳು, ಅಧಿಕಾರಿಗಳು,
ಪುಢಾರಿಗಳು,
ಎಲ್ಲರನ್ನೂ ಚೆನ್ನಾಗಿಟ್ಟಿರುತ್ತದೆ,……

ಇದರಲ್ಲಿ ಮುಚ್ಚುಮರೆ ಏನೂ ಇಲ್ಲ,
ನನ್ನದು ನೇರವಾದ ಮಾತು, ಸತ್ಯವಾದ ಮಾತು,
ಬೇಕಾದರೆ ಇನ್ನೊಂದು 1000 ರೂಪಾಯಿ ಹೆಚ್ಚಿಗೆ ತೆಗೆದುಕೊಳ್ಳಿ,…..

ಆದರೆ,
ಮತದಾರ ಬಂಧುಗಳೇ,
ಮತದಾನ ಮಾಡಿ ಪ್ರಜಾಪ್ರಭುತ್ವ ಉಳಿಸಿ,…..

Public ಆಗಿ ಯಾರಿಗೂ ಹೇಳಬೇಡಿ, ನಿಮ್ಮಲ್ಲೇ ಇರಲಿ,
ಚುನಾವಣಾಧಿಕಾರಿಗಳು ಕೇಳಿಸಿಕೊಂಡಾರು…………

ಇದು ನನ್ನ – ನಿಮ್ಮ ನಡುವಿನ ವ್ಯವಹಾರ….

ವಂದೇ ಮಾತರಂ,
ಜೈಹಿಂದ್,
ಬೋಲೋ ಭಾರತ್ ಮಾತಾ ಕೀ ಜೈ……..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ- ವಿವೇಕಾನಂದ. ಎಚ್.ಕೆ.

Ramesh Babu

Journalist

Recent Posts

ಮದುವೆಯಾದ 45 ದಿನಕ್ಕೆ ಲವರ್​​ ಜೊತೆ ಯುವತಿ ಎಸ್ಕೇಪ್​​: ಪತಿ, ಸೋದರ ಮಾವ ಸೂಸೈಡ್

  ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…

6 hours ago

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…

8 hours ago

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…

8 hours ago

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

9 hours ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

10 hours ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

15 hours ago