Categories: ಲೇಖನ

ಮತದಾನ – ಸರ್ವಶ್ರೇಷ್ಠ ದಾನ…..ನಿಮ್ಮ ಮತ ದೇಶಕ್ಕೆ ಹಿತ

ಬಿಸಿಲಿರಲಿ, ಮಳೆಯಿರಲಿ, ಬಿರುಗಾಳಿಯಿರಲಿ, ನಡುಗುವ ಚಳಿಯಿರಲಿ, ಜಗ್ಗದೆ, ಕುಗ್ಗದೆ, ಬಗ್ಗದೆ, ಮತದಾನ ಮಾಡಿ,……

ಜ್ವರವಿರಲಿ,
ನೆಗಡಿಯಿರಲಿ,
ಕೆಮ್ಮಿರಲಿ,
ತಲೆ ನೋವಿರಲಿ,
ಗ್ಯಾಸ್ಟ್ರಿಕ್ ಇರಲಿ,
ಮರೆಯದೆ ಮತದಾನ ಮಾಡಿ,…….

ಕೆಲಸವಿರಲಿ,
ಇಲ್ಲದಿರಲಿ,
ಕ್ಯೂ ಇರಲಿ,
ಖಾಲಿ ಇರಲಿ,
ದೂರವಿರಲಿ,
ಹತ್ತಿರವಿರಲಿ,
ತಾಳ್ಮೆಯಿಂದ ನಿಂತು, ಮತದಾನ ಮಾಡಿ,…..

ಮತದಾನ ಎಲ್ಲ ದಾನಕ್ಕಿಂತ ಶ್ರೇಷ್ಠ ದಾನ,
ನಿಮ್ಮ ಮತ ದೇಶಕ್ಕೆ ಹಿತ,
ನಿಮ್ಮ ರಕ್ಷಣೆಗಾಗಿ ಮತದಾನ ಮಾಡಿ,
ಪ್ರಜಾಪ್ರಭುತ್ವ ಉಳಿಸಲು ಮತದಾನ ಮಾಡಿ,….

ನಿಮ್ಮ ಪ್ರತಿನಿಧಿಯಾಗಿ ನನ್ನನ್ನು ಚುನಾಯಿಸಲು ಮತದಾನ ಮಾಡಿ,
ಆಮೇಲೆ ಮಂತ್ರಿಯಾಗಲು ಲಾಬಿ ನಾನು ಮಾಡುವೆನು,….

ನೀವು ನೋಡನೋಡುತ್ತಿದ್ದಂತೆ ನಿಮ್ಮ ಭೇಟಿಯ ಅನುಕೂಲಕ್ಕಾಗಿ,
ಒಂದು ಬೃಹತ್ ಬಂಗಲೆ ನಾನು ಮಾಡುತ್ತೇನೆ,
ನನ್ನ ನಂತರ ನಿಮ್ಮ ಸೇವೆಗಾಗಿ ನನ್ನ ಮಗ/ಮಗಳನ್ನು ವಿದ್ಯಾಭ್ಯಾಸಕ್ಕಾಗಿ
ವಿದೇಶಕ್ಕೆ ಕಳಿಸುತ್ತೇನೆ,….

ಗಣೇಶ, ಅಣ್ಣಮ್ಮ, ರಾಜ್ಯೋತ್ಸವದ ನಿಮ್ಮ ಉತ್ಸವಕ್ಕೆ, ಹಣ ಹೊಂದಿಸಲು
ತಿಂಗಳ ಆದಾಯಕ್ಕಾಗಿ
COMMERCIAL COMPLEX ಕಟ್ಟಿಸಿ ಬಾಡಿಗೆ ಬಿಡುತ್ತೇನೆ,……

ನನ್ನ ಸುತ್ತಮುತ್ತಲ ಜನರಿಗೆ ಬೇರೆ ಬೇರೆ CONTRACT ಕೊಡಿಸಿ,
ಮುಂದಿನ ಚುನಾವಣೆಗಾಗಿ ಹಣ ಮಾಡುತ್ತೇನೆ,….

ಯಾವುದಕ್ಕೂ ಇರಲಿ ಎಂದು ಎಲ್ಲಾ ಪಕ್ಷಗಳ ನಾಯಕರ ಜೊತೆಗೂ
CONTACT ನಲ್ಲಿರುತ್ತೇನೆ,
ಸಂಬಂಧ ಬೆಳೆಸುತ್ತೇನೆ…..

ನಿಮ್ಮ ಸಮಸ್ಯೆಗಳನ್ನು ಹಾಗೆಯೇ ಉಳಿಸುತ್ತೇನೆ,
ಏಕೆಂದರೆ PROBLEMS
ಇದ್ದರೇನೆ ನಿಮಗೆ ನನ್ನ ನೆನಪಾಗುವುದು,….

ನಿಮ್ಮಿಂದಲೇ ನಾವು,
ನಿಮ್ಮ ಒಂದು ಮತ,
ನನಗಷ್ಟೇ ಅಲ್ಲದೆ,
ಮಾಧ್ಯಮದವರು, ಕಾಂಟ್ರಾಕ್ಟರ್ ಗಳು, ಅಧಿಕಾರಿಗಳು,
ಪುಢಾರಿಗಳು,
ಎಲ್ಲರನ್ನೂ ಚೆನ್ನಾಗಿಟ್ಟಿರುತ್ತದೆ,……

ಇದರಲ್ಲಿ ಮುಚ್ಚುಮರೆ ಏನೂ ಇಲ್ಲ,
ನನ್ನದು ನೇರವಾದ ಮಾತು, ಸತ್ಯವಾದ ಮಾತು,
ಬೇಕಾದರೆ ಇನ್ನೊಂದು 1000 ರೂಪಾಯಿ ಹೆಚ್ಚಿಗೆ ತೆಗೆದುಕೊಳ್ಳಿ,…..

ಆದರೆ,
ಮತದಾರ ಬಂಧುಗಳೇ,
ಮತದಾನ ಮಾಡಿ ಪ್ರಜಾಪ್ರಭುತ್ವ ಉಳಿಸಿ,…..

Public ಆಗಿ ಯಾರಿಗೂ ಹೇಳಬೇಡಿ, ನಿಮ್ಮಲ್ಲೇ ಇರಲಿ,
ಚುನಾವಣಾಧಿಕಾರಿಗಳು ಕೇಳಿಸಿಕೊಂಡಾರು…………

ಇದು ನನ್ನ – ನಿಮ್ಮ ನಡುವಿನ ವ್ಯವಹಾರ….

ವಂದೇ ಮಾತರಂ,
ಜೈಹಿಂದ್,
ಬೋಲೋ ಭಾರತ್ ಮಾತಾ ಕೀ ಜೈ……..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ- ವಿವೇಕಾನಂದ. ಎಚ್.ಕೆ.

Ramesh Babu

Journalist

Recent Posts

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

23 minutes ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

5 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

7 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

10 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

1 day ago