ಬಿಸಿಲಿರಲಿ, ಮಳೆಯಿರಲಿ, ಬಿರುಗಾಳಿಯಿರಲಿ, ನಡುಗುವ ಚಳಿಯಿರಲಿ, ಜಗ್ಗದೆ, ಕುಗ್ಗದೆ, ಬಗ್ಗದೆ, ಮತದಾನ ಮಾಡಿ,……
ಜ್ವರವಿರಲಿ,
ನೆಗಡಿಯಿರಲಿ,
ಕೆಮ್ಮಿರಲಿ,
ತಲೆ ನೋವಿರಲಿ,
ಗ್ಯಾಸ್ಟ್ರಿಕ್ ಇರಲಿ,
ಮರೆಯದೆ ಮತದಾನ ಮಾಡಿ,…….
ಕೆಲಸವಿರಲಿ,
ಇಲ್ಲದಿರಲಿ,
ಕ್ಯೂ ಇರಲಿ,
ಖಾಲಿ ಇರಲಿ,
ದೂರವಿರಲಿ,
ಹತ್ತಿರವಿರಲಿ,
ತಾಳ್ಮೆಯಿಂದ ನಿಂತು, ಮತದಾನ ಮಾಡಿ,…..
ಮತದಾನ ಎಲ್ಲ ದಾನಕ್ಕಿಂತ ಶ್ರೇಷ್ಠ ದಾನ,
ನಿಮ್ಮ ಮತ ದೇಶಕ್ಕೆ ಹಿತ,
ನಿಮ್ಮ ರಕ್ಷಣೆಗಾಗಿ ಮತದಾನ ಮಾಡಿ,
ಪ್ರಜಾಪ್ರಭುತ್ವ ಉಳಿಸಲು ಮತದಾನ ಮಾಡಿ,….
ನಿಮ್ಮ ಪ್ರತಿನಿಧಿಯಾಗಿ ನನ್ನನ್ನು ಚುನಾಯಿಸಲು ಮತದಾನ ಮಾಡಿ,
ಆಮೇಲೆ ಮಂತ್ರಿಯಾಗಲು ಲಾಬಿ ನಾನು ಮಾಡುವೆನು,….
ನೀವು ನೋಡನೋಡುತ್ತಿದ್ದಂತೆ ನಿಮ್ಮ ಭೇಟಿಯ ಅನುಕೂಲಕ್ಕಾಗಿ,
ಒಂದು ಬೃಹತ್ ಬಂಗಲೆ ನಾನು ಮಾಡುತ್ತೇನೆ,
ನನ್ನ ನಂತರ ನಿಮ್ಮ ಸೇವೆಗಾಗಿ ನನ್ನ ಮಗ/ಮಗಳನ್ನು ವಿದ್ಯಾಭ್ಯಾಸಕ್ಕಾಗಿ
ವಿದೇಶಕ್ಕೆ ಕಳಿಸುತ್ತೇನೆ,….
ಗಣೇಶ, ಅಣ್ಣಮ್ಮ, ರಾಜ್ಯೋತ್ಸವದ ನಿಮ್ಮ ಉತ್ಸವಕ್ಕೆ, ಹಣ ಹೊಂದಿಸಲು
ತಿಂಗಳ ಆದಾಯಕ್ಕಾಗಿ
COMMERCIAL COMPLEX ಕಟ್ಟಿಸಿ ಬಾಡಿಗೆ ಬಿಡುತ್ತೇನೆ,……
ನನ್ನ ಸುತ್ತಮುತ್ತಲ ಜನರಿಗೆ ಬೇರೆ ಬೇರೆ CONTRACT ಕೊಡಿಸಿ,
ಮುಂದಿನ ಚುನಾವಣೆಗಾಗಿ ಹಣ ಮಾಡುತ್ತೇನೆ,….
ಯಾವುದಕ್ಕೂ ಇರಲಿ ಎಂದು ಎಲ್ಲಾ ಪಕ್ಷಗಳ ನಾಯಕರ ಜೊತೆಗೂ
CONTACT ನಲ್ಲಿರುತ್ತೇನೆ,
ಸಂಬಂಧ ಬೆಳೆಸುತ್ತೇನೆ…..
ನಿಮ್ಮ ಸಮಸ್ಯೆಗಳನ್ನು ಹಾಗೆಯೇ ಉಳಿಸುತ್ತೇನೆ,
ಏಕೆಂದರೆ PROBLEMS
ಇದ್ದರೇನೆ ನಿಮಗೆ ನನ್ನ ನೆನಪಾಗುವುದು,….
ನಿಮ್ಮಿಂದಲೇ ನಾವು,
ನಿಮ್ಮ ಒಂದು ಮತ,
ನನಗಷ್ಟೇ ಅಲ್ಲದೆ,
ಮಾಧ್ಯಮದವರು, ಕಾಂಟ್ರಾಕ್ಟರ್ ಗಳು, ಅಧಿಕಾರಿಗಳು,
ಪುಢಾರಿಗಳು,
ಎಲ್ಲರನ್ನೂ ಚೆನ್ನಾಗಿಟ್ಟಿರುತ್ತದೆ,……
ಇದರಲ್ಲಿ ಮುಚ್ಚುಮರೆ ಏನೂ ಇಲ್ಲ,
ನನ್ನದು ನೇರವಾದ ಮಾತು, ಸತ್ಯವಾದ ಮಾತು,
ಬೇಕಾದರೆ ಇನ್ನೊಂದು 1000 ರೂಪಾಯಿ ಹೆಚ್ಚಿಗೆ ತೆಗೆದುಕೊಳ್ಳಿ,…..
ಆದರೆ,
ಮತದಾರ ಬಂಧುಗಳೇ,
ಮತದಾನ ಮಾಡಿ ಪ್ರಜಾಪ್ರಭುತ್ವ ಉಳಿಸಿ,…..
Public ಆಗಿ ಯಾರಿಗೂ ಹೇಳಬೇಡಿ, ನಿಮ್ಮಲ್ಲೇ ಇರಲಿ,
ಚುನಾವಣಾಧಿಕಾರಿಗಳು ಕೇಳಿಸಿಕೊಂಡಾರು…………
ಇದು ನನ್ನ – ನಿಮ್ಮ ನಡುವಿನ ವ್ಯವಹಾರ….
ವಂದೇ ಮಾತರಂ,
ಜೈಹಿಂದ್,
ಬೋಲೋ ಭಾರತ್ ಮಾತಾ ಕೀ ಜೈ……..
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ
ಲೇಖಕ- ವಿವೇಕಾನಂದ. ಎಚ್.ಕೆ.
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…