Categories: ಲೇಖನ

ಮತದಾನ – ಸರ್ವಶ್ರೇಷ್ಠ ದಾನ…..ನಿಮ್ಮ ಮತ ದೇಶಕ್ಕೆ ಹಿತ

ಬಿಸಿಲಿರಲಿ, ಮಳೆಯಿರಲಿ, ಬಿರುಗಾಳಿಯಿರಲಿ, ನಡುಗುವ ಚಳಿಯಿರಲಿ, ಜಗ್ಗದೆ, ಕುಗ್ಗದೆ, ಬಗ್ಗದೆ, ಮತದಾನ ಮಾಡಿ,……

ಜ್ವರವಿರಲಿ,
ನೆಗಡಿಯಿರಲಿ,
ಕೆಮ್ಮಿರಲಿ,
ತಲೆ ನೋವಿರಲಿ,
ಗ್ಯಾಸ್ಟ್ರಿಕ್ ಇರಲಿ,
ಮರೆಯದೆ ಮತದಾನ ಮಾಡಿ,…….

ಕೆಲಸವಿರಲಿ,
ಇಲ್ಲದಿರಲಿ,
ಕ್ಯೂ ಇರಲಿ,
ಖಾಲಿ ಇರಲಿ,
ದೂರವಿರಲಿ,
ಹತ್ತಿರವಿರಲಿ,
ತಾಳ್ಮೆಯಿಂದ ನಿಂತು, ಮತದಾನ ಮಾಡಿ,…..

ಮತದಾನ ಎಲ್ಲ ದಾನಕ್ಕಿಂತ ಶ್ರೇಷ್ಠ ದಾನ,
ನಿಮ್ಮ ಮತ ದೇಶಕ್ಕೆ ಹಿತ,
ನಿಮ್ಮ ರಕ್ಷಣೆಗಾಗಿ ಮತದಾನ ಮಾಡಿ,
ಪ್ರಜಾಪ್ರಭುತ್ವ ಉಳಿಸಲು ಮತದಾನ ಮಾಡಿ,….

ನಿಮ್ಮ ಪ್ರತಿನಿಧಿಯಾಗಿ ನನ್ನನ್ನು ಚುನಾಯಿಸಲು ಮತದಾನ ಮಾಡಿ,
ಆಮೇಲೆ ಮಂತ್ರಿಯಾಗಲು ಲಾಬಿ ನಾನು ಮಾಡುವೆನು,….

ನೀವು ನೋಡನೋಡುತ್ತಿದ್ದಂತೆ ನಿಮ್ಮ ಭೇಟಿಯ ಅನುಕೂಲಕ್ಕಾಗಿ,
ಒಂದು ಬೃಹತ್ ಬಂಗಲೆ ನಾನು ಮಾಡುತ್ತೇನೆ,
ನನ್ನ ನಂತರ ನಿಮ್ಮ ಸೇವೆಗಾಗಿ ನನ್ನ ಮಗ/ಮಗಳನ್ನು ವಿದ್ಯಾಭ್ಯಾಸಕ್ಕಾಗಿ
ವಿದೇಶಕ್ಕೆ ಕಳಿಸುತ್ತೇನೆ,….

ಗಣೇಶ, ಅಣ್ಣಮ್ಮ, ರಾಜ್ಯೋತ್ಸವದ ನಿಮ್ಮ ಉತ್ಸವಕ್ಕೆ, ಹಣ ಹೊಂದಿಸಲು
ತಿಂಗಳ ಆದಾಯಕ್ಕಾಗಿ
COMMERCIAL COMPLEX ಕಟ್ಟಿಸಿ ಬಾಡಿಗೆ ಬಿಡುತ್ತೇನೆ,……

ನನ್ನ ಸುತ್ತಮುತ್ತಲ ಜನರಿಗೆ ಬೇರೆ ಬೇರೆ CONTRACT ಕೊಡಿಸಿ,
ಮುಂದಿನ ಚುನಾವಣೆಗಾಗಿ ಹಣ ಮಾಡುತ್ತೇನೆ,….

ಯಾವುದಕ್ಕೂ ಇರಲಿ ಎಂದು ಎಲ್ಲಾ ಪಕ್ಷಗಳ ನಾಯಕರ ಜೊತೆಗೂ
CONTACT ನಲ್ಲಿರುತ್ತೇನೆ,
ಸಂಬಂಧ ಬೆಳೆಸುತ್ತೇನೆ…..

ನಿಮ್ಮ ಸಮಸ್ಯೆಗಳನ್ನು ಹಾಗೆಯೇ ಉಳಿಸುತ್ತೇನೆ,
ಏಕೆಂದರೆ PROBLEMS
ಇದ್ದರೇನೆ ನಿಮಗೆ ನನ್ನ ನೆನಪಾಗುವುದು,….

ನಿಮ್ಮಿಂದಲೇ ನಾವು,
ನಿಮ್ಮ ಒಂದು ಮತ,
ನನಗಷ್ಟೇ ಅಲ್ಲದೆ,
ಮಾಧ್ಯಮದವರು, ಕಾಂಟ್ರಾಕ್ಟರ್ ಗಳು, ಅಧಿಕಾರಿಗಳು,
ಪುಢಾರಿಗಳು,
ಎಲ್ಲರನ್ನೂ ಚೆನ್ನಾಗಿಟ್ಟಿರುತ್ತದೆ,……

ಇದರಲ್ಲಿ ಮುಚ್ಚುಮರೆ ಏನೂ ಇಲ್ಲ,
ನನ್ನದು ನೇರವಾದ ಮಾತು, ಸತ್ಯವಾದ ಮಾತು,
ಬೇಕಾದರೆ ಇನ್ನೊಂದು 1000 ರೂಪಾಯಿ ಹೆಚ್ಚಿಗೆ ತೆಗೆದುಕೊಳ್ಳಿ,…..

ಆದರೆ,
ಮತದಾರ ಬಂಧುಗಳೇ,
ಮತದಾನ ಮಾಡಿ ಪ್ರಜಾಪ್ರಭುತ್ವ ಉಳಿಸಿ,…..

Public ಆಗಿ ಯಾರಿಗೂ ಹೇಳಬೇಡಿ, ನಿಮ್ಮಲ್ಲೇ ಇರಲಿ,
ಚುನಾವಣಾಧಿಕಾರಿಗಳು ಕೇಳಿಸಿಕೊಂಡಾರು…………

ಇದು ನನ್ನ – ನಿಮ್ಮ ನಡುವಿನ ವ್ಯವಹಾರ….

ವಂದೇ ಮಾತರಂ,
ಜೈಹಿಂದ್,
ಬೋಲೋ ಭಾರತ್ ಮಾತಾ ಕೀ ಜೈ……..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ- ವಿವೇಕಾನಂದ. ಎಚ್.ಕೆ.

Ramesh Babu

Journalist

Recent Posts

Ставки на спорт в Украине_ основы и стратегии(1)

Ставки на спорт UA: советы и стратегии для успеха Ставки на спорт в Украине: основы…

1 hour ago

ದೊಡ್ಡಬಳ್ಳಾಪುರ ನೂತನ ಉಪವಿಭಾಗಾಧಿಕಾರಿಯಾಗಿ ಮಂಜುನಾಥ್ ಟಿ.ಆರ್ ಅಧಿಕಾರ ಸ್ವೀಕಾರ

ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿಯಾಗಿದ್ದ ಎನ್ ದುರ್ಗಶ್ರೀ ಅವರನ್ನು ಇಂದು ವರ್ಗಾವಣೆ ಮಾಡಲಾಗಿತ್ತು. ಇವರ ಜಾಗಕ್ಕೆ ಮಂಜುನಾಥ್ ಟಿ.ಆರ್ ಅವರನ್ನು ನೇಮಕ ಮಾಡಿ…

4 hours ago

ನಾಳೆ (ಏ.23) SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ

ನಾಳೆ (ಏ.23) ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು…

5 hours ago

ಮತಾಂತರ ವಿರುದ್ಧ ದೇಶಾದ್ಯಂತ ಜಾಗೃತಿ ಕಾರ್ಯಕ್ರಮ

ಇತ್ತೀಚೆಗೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ಉದ್ಯೋಗದ  ನೆಪದಲ್ಲಿ ಹೆಣ್ಣುಮಕ್ಕಳನ್ನು ಬಲವಂತಾಗಿ ಮತಾಂತರ ಮಾಡುವ ವಿಚಾರ ದೊಡ್ಡ ದುರಂತ ಪ್ರಕರಣವಾಗಿದೆ. ಇದರ…

6 hours ago

ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಎನ್ ದುರ್ಗಶ್ರೀ ವರ್ಗಾವಣೆ: ಹೊಸ ಎಸಿ ಯಾರು ಗೊತ್ತಾ…?

ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಎನ್ ದುರ್ಗಶ್ರೀ ಅವರನ್ನು ವರ್ಗಾವಣೆ ಮಾಡಲಾಗಿದೆ. ನೂತನ ಎಸಿಯಾಗಿ ಮಂಜುನಾಥ್ ಟಿ.ಆರ್ ಅವರನ್ನು ನೇಮಕ ಮಾಡಲಾಗಿದೆ...

7 hours ago

ಎಪಿಎಂಸಿ ಗೇಟ್ ಮುಂಭಾಗ ಸರಣಿ ಅಪಘಾತ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಗೇಟ್ ಮುಂಭಾಗ ಸರಣಿ ಅಪಘಾತ ನಡೆದಿದೆ.‌ ಘಟನೆಯಲ್ಲಿ ಬಸ್, ಕಾರುಗಳ ನಡುವೆ ಡಿಕ್ಕಿ ಸಂಭವಿಸಿದೆ. ಅಡ್ಡಬಂದ…

7 hours ago