Categories: ಲೇಖನ

ಮತದಾನ – ಸರ್ವಶ್ರೇಷ್ಠ ದಾನ…..ನಿಮ್ಮ ಮತ ದೇಶಕ್ಕೆ ಹಿತ

ಬಿಸಿಲಿರಲಿ, ಮಳೆಯಿರಲಿ, ಬಿರುಗಾಳಿಯಿರಲಿ, ನಡುಗುವ ಚಳಿಯಿರಲಿ, ಜಗ್ಗದೆ, ಕುಗ್ಗದೆ, ಬಗ್ಗದೆ, ಮತದಾನ ಮಾಡಿ,……

ಜ್ವರವಿರಲಿ,
ನೆಗಡಿಯಿರಲಿ,
ಕೆಮ್ಮಿರಲಿ,
ತಲೆ ನೋವಿರಲಿ,
ಗ್ಯಾಸ್ಟ್ರಿಕ್ ಇರಲಿ,
ಮರೆಯದೆ ಮತದಾನ ಮಾಡಿ,…….

ಕೆಲಸವಿರಲಿ,
ಇಲ್ಲದಿರಲಿ,
ಕ್ಯೂ ಇರಲಿ,
ಖಾಲಿ ಇರಲಿ,
ದೂರವಿರಲಿ,
ಹತ್ತಿರವಿರಲಿ,
ತಾಳ್ಮೆಯಿಂದ ನಿಂತು, ಮತದಾನ ಮಾಡಿ,…..

ಮತದಾನ ಎಲ್ಲ ದಾನಕ್ಕಿಂತ ಶ್ರೇಷ್ಠ ದಾನ,
ನಿಮ್ಮ ಮತ ದೇಶಕ್ಕೆ ಹಿತ,
ನಿಮ್ಮ ರಕ್ಷಣೆಗಾಗಿ ಮತದಾನ ಮಾಡಿ,
ಪ್ರಜಾಪ್ರಭುತ್ವ ಉಳಿಸಲು ಮತದಾನ ಮಾಡಿ,….

ನಿಮ್ಮ ಪ್ರತಿನಿಧಿಯಾಗಿ ನನ್ನನ್ನು ಚುನಾಯಿಸಲು ಮತದಾನ ಮಾಡಿ,
ಆಮೇಲೆ ಮಂತ್ರಿಯಾಗಲು ಲಾಬಿ ನಾನು ಮಾಡುವೆನು,….

ನೀವು ನೋಡನೋಡುತ್ತಿದ್ದಂತೆ ನಿಮ್ಮ ಭೇಟಿಯ ಅನುಕೂಲಕ್ಕಾಗಿ,
ಒಂದು ಬೃಹತ್ ಬಂಗಲೆ ನಾನು ಮಾಡುತ್ತೇನೆ,
ನನ್ನ ನಂತರ ನಿಮ್ಮ ಸೇವೆಗಾಗಿ ನನ್ನ ಮಗ/ಮಗಳನ್ನು ವಿದ್ಯಾಭ್ಯಾಸಕ್ಕಾಗಿ
ವಿದೇಶಕ್ಕೆ ಕಳಿಸುತ್ತೇನೆ,….

ಗಣೇಶ, ಅಣ್ಣಮ್ಮ, ರಾಜ್ಯೋತ್ಸವದ ನಿಮ್ಮ ಉತ್ಸವಕ್ಕೆ, ಹಣ ಹೊಂದಿಸಲು
ತಿಂಗಳ ಆದಾಯಕ್ಕಾಗಿ
COMMERCIAL COMPLEX ಕಟ್ಟಿಸಿ ಬಾಡಿಗೆ ಬಿಡುತ್ತೇನೆ,……

ನನ್ನ ಸುತ್ತಮುತ್ತಲ ಜನರಿಗೆ ಬೇರೆ ಬೇರೆ CONTRACT ಕೊಡಿಸಿ,
ಮುಂದಿನ ಚುನಾವಣೆಗಾಗಿ ಹಣ ಮಾಡುತ್ತೇನೆ,….

ಯಾವುದಕ್ಕೂ ಇರಲಿ ಎಂದು ಎಲ್ಲಾ ಪಕ್ಷಗಳ ನಾಯಕರ ಜೊತೆಗೂ
CONTACT ನಲ್ಲಿರುತ್ತೇನೆ,
ಸಂಬಂಧ ಬೆಳೆಸುತ್ತೇನೆ…..

ನಿಮ್ಮ ಸಮಸ್ಯೆಗಳನ್ನು ಹಾಗೆಯೇ ಉಳಿಸುತ್ತೇನೆ,
ಏಕೆಂದರೆ PROBLEMS
ಇದ್ದರೇನೆ ನಿಮಗೆ ನನ್ನ ನೆನಪಾಗುವುದು,….

ನಿಮ್ಮಿಂದಲೇ ನಾವು,
ನಿಮ್ಮ ಒಂದು ಮತ,
ನನಗಷ್ಟೇ ಅಲ್ಲದೆ,
ಮಾಧ್ಯಮದವರು, ಕಾಂಟ್ರಾಕ್ಟರ್ ಗಳು, ಅಧಿಕಾರಿಗಳು,
ಪುಢಾರಿಗಳು,
ಎಲ್ಲರನ್ನೂ ಚೆನ್ನಾಗಿಟ್ಟಿರುತ್ತದೆ,……

ಇದರಲ್ಲಿ ಮುಚ್ಚುಮರೆ ಏನೂ ಇಲ್ಲ,
ನನ್ನದು ನೇರವಾದ ಮಾತು, ಸತ್ಯವಾದ ಮಾತು,
ಬೇಕಾದರೆ ಇನ್ನೊಂದು 1000 ರೂಪಾಯಿ ಹೆಚ್ಚಿಗೆ ತೆಗೆದುಕೊಳ್ಳಿ,…..

ಆದರೆ,
ಮತದಾರ ಬಂಧುಗಳೇ,
ಮತದಾನ ಮಾಡಿ ಪ್ರಜಾಪ್ರಭುತ್ವ ಉಳಿಸಿ,…..

Public ಆಗಿ ಯಾರಿಗೂ ಹೇಳಬೇಡಿ, ನಿಮ್ಮಲ್ಲೇ ಇರಲಿ,
ಚುನಾವಣಾಧಿಕಾರಿಗಳು ಕೇಳಿಸಿಕೊಂಡಾರು…………

ಇದು ನನ್ನ – ನಿಮ್ಮ ನಡುವಿನ ವ್ಯವಹಾರ….

ವಂದೇ ಮಾತರಂ,
ಜೈಹಿಂದ್,
ಬೋಲೋ ಭಾರತ್ ಮಾತಾ ಕೀ ಜೈ……..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ- ವಿವೇಕಾನಂದ. ಎಚ್.ಕೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

18 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

23 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

2 days ago