Categories: ಲೇಖನ

ಮತದಾನ – ಸರ್ವಶ್ರೇಷ್ಠ ದಾನ…..ನಿಮ್ಮ ಮತ ದೇಶಕ್ಕೆ ಹಿತ

ಬಿಸಿಲಿರಲಿ, ಮಳೆಯಿರಲಿ, ಬಿರುಗಾಳಿಯಿರಲಿ, ನಡುಗುವ ಚಳಿಯಿರಲಿ, ಜಗ್ಗದೆ, ಕುಗ್ಗದೆ, ಬಗ್ಗದೆ, ಮತದಾನ ಮಾಡಿ,……

ಜ್ವರವಿರಲಿ,
ನೆಗಡಿಯಿರಲಿ,
ಕೆಮ್ಮಿರಲಿ,
ತಲೆ ನೋವಿರಲಿ,
ಗ್ಯಾಸ್ಟ್ರಿಕ್ ಇರಲಿ,
ಮರೆಯದೆ ಮತದಾನ ಮಾಡಿ,…….

ಕೆಲಸವಿರಲಿ,
ಇಲ್ಲದಿರಲಿ,
ಕ್ಯೂ ಇರಲಿ,
ಖಾಲಿ ಇರಲಿ,
ದೂರವಿರಲಿ,
ಹತ್ತಿರವಿರಲಿ,
ತಾಳ್ಮೆಯಿಂದ ನಿಂತು, ಮತದಾನ ಮಾಡಿ,…..

ಮತದಾನ ಎಲ್ಲ ದಾನಕ್ಕಿಂತ ಶ್ರೇಷ್ಠ ದಾನ,
ನಿಮ್ಮ ಮತ ದೇಶಕ್ಕೆ ಹಿತ,
ನಿಮ್ಮ ರಕ್ಷಣೆಗಾಗಿ ಮತದಾನ ಮಾಡಿ,
ಪ್ರಜಾಪ್ರಭುತ್ವ ಉಳಿಸಲು ಮತದಾನ ಮಾಡಿ,….

ನಿಮ್ಮ ಪ್ರತಿನಿಧಿಯಾಗಿ ನನ್ನನ್ನು ಚುನಾಯಿಸಲು ಮತದಾನ ಮಾಡಿ,
ಆಮೇಲೆ ಮಂತ್ರಿಯಾಗಲು ಲಾಬಿ ನಾನು ಮಾಡುವೆನು,….

ನೀವು ನೋಡನೋಡುತ್ತಿದ್ದಂತೆ ನಿಮ್ಮ ಭೇಟಿಯ ಅನುಕೂಲಕ್ಕಾಗಿ,
ಒಂದು ಬೃಹತ್ ಬಂಗಲೆ ನಾನು ಮಾಡುತ್ತೇನೆ,
ನನ್ನ ನಂತರ ನಿಮ್ಮ ಸೇವೆಗಾಗಿ ನನ್ನ ಮಗ/ಮಗಳನ್ನು ವಿದ್ಯಾಭ್ಯಾಸಕ್ಕಾಗಿ
ವಿದೇಶಕ್ಕೆ ಕಳಿಸುತ್ತೇನೆ,….

ಗಣೇಶ, ಅಣ್ಣಮ್ಮ, ರಾಜ್ಯೋತ್ಸವದ ನಿಮ್ಮ ಉತ್ಸವಕ್ಕೆ, ಹಣ ಹೊಂದಿಸಲು
ತಿಂಗಳ ಆದಾಯಕ್ಕಾಗಿ
COMMERCIAL COMPLEX ಕಟ್ಟಿಸಿ ಬಾಡಿಗೆ ಬಿಡುತ್ತೇನೆ,……

ನನ್ನ ಸುತ್ತಮುತ್ತಲ ಜನರಿಗೆ ಬೇರೆ ಬೇರೆ CONTRACT ಕೊಡಿಸಿ,
ಮುಂದಿನ ಚುನಾವಣೆಗಾಗಿ ಹಣ ಮಾಡುತ್ತೇನೆ,….

ಯಾವುದಕ್ಕೂ ಇರಲಿ ಎಂದು ಎಲ್ಲಾ ಪಕ್ಷಗಳ ನಾಯಕರ ಜೊತೆಗೂ
CONTACT ನಲ್ಲಿರುತ್ತೇನೆ,
ಸಂಬಂಧ ಬೆಳೆಸುತ್ತೇನೆ…..

ನಿಮ್ಮ ಸಮಸ್ಯೆಗಳನ್ನು ಹಾಗೆಯೇ ಉಳಿಸುತ್ತೇನೆ,
ಏಕೆಂದರೆ PROBLEMS
ಇದ್ದರೇನೆ ನಿಮಗೆ ನನ್ನ ನೆನಪಾಗುವುದು,….

ನಿಮ್ಮಿಂದಲೇ ನಾವು,
ನಿಮ್ಮ ಒಂದು ಮತ,
ನನಗಷ್ಟೇ ಅಲ್ಲದೆ,
ಮಾಧ್ಯಮದವರು, ಕಾಂಟ್ರಾಕ್ಟರ್ ಗಳು, ಅಧಿಕಾರಿಗಳು,
ಪುಢಾರಿಗಳು,
ಎಲ್ಲರನ್ನೂ ಚೆನ್ನಾಗಿಟ್ಟಿರುತ್ತದೆ,……

ಇದರಲ್ಲಿ ಮುಚ್ಚುಮರೆ ಏನೂ ಇಲ್ಲ,
ನನ್ನದು ನೇರವಾದ ಮಾತು, ಸತ್ಯವಾದ ಮಾತು,
ಬೇಕಾದರೆ ಇನ್ನೊಂದು 1000 ರೂಪಾಯಿ ಹೆಚ್ಚಿಗೆ ತೆಗೆದುಕೊಳ್ಳಿ,…..

ಆದರೆ,
ಮತದಾರ ಬಂಧುಗಳೇ,
ಮತದಾನ ಮಾಡಿ ಪ್ರಜಾಪ್ರಭುತ್ವ ಉಳಿಸಿ,…..

Public ಆಗಿ ಯಾರಿಗೂ ಹೇಳಬೇಡಿ, ನಿಮ್ಮಲ್ಲೇ ಇರಲಿ,
ಚುನಾವಣಾಧಿಕಾರಿಗಳು ಕೇಳಿಸಿಕೊಂಡಾರು…………

ಇದು ನನ್ನ – ನಿಮ್ಮ ನಡುವಿನ ವ್ಯವಹಾರ….

ವಂದೇ ಮಾತರಂ,
ಜೈಹಿಂದ್,
ಬೋಲೋ ಭಾರತ್ ಮಾತಾ ಕೀ ಜೈ……..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ- ವಿವೇಕಾನಂದ. ಎಚ್.ಕೆ.

Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

10 hours ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

1 day ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

1 day ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

1 day ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago