ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2024 ಪ್ರಕಟ: ಅರ್ಹ ಮತದಾರರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿ-ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮತದಾರರ ಕರಡು ಪಟ್ಟಿಯನ್ನು ನಾಲ್ಕು ತಾಲೂಕುಗಳ ಮತಗಟ್ಟೆ, ಮತದಾರ ನೋಂದಣಾಧಿಕಾರಿ ಕಚೇರಿ, ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿಗಳಲ್ಲಿ ಸಾರ್ವಜನಿಕರ ಮಾಹಿತಿಗೆ ಪ್ರಕಟಿಸಲಾಗಿದೆ.

ಈ ಸಂಬಂಧ ಸಾರ್ವಜನಿಕರು ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಹಕ್ಕು ಮತ್ತು ಆಕ್ಷೇಪಣೆಗಳನ್ನು (ಮತದಾರರ ಪಟ್ಟಿಯಲ್ಲಿ ಅರ್ಹ ಮತದಾರರ ಹೆಸರುಗಳ ಸೇರ್ಪಡೆ, ತಿದ್ದುಪಡಿ, ಬಿಡತಕ್ಕದ್ದು, ವರ್ಗಾವಣೆ) ಸಲ್ಲಿಸಲು ನವೆಂಬರ್ 30 ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್.ಶಿವಶಂಕರ್ ಅವರು ತಿಳಿಸಿದ್ದಾರೆ.

2024ರ ವಾರ್ಷಿಕ ಮತದಾರರ ಪಟ್ಟಿಯ ಪರಿಷ್ಕರಣೆ ಸಂದರ್ಭದಲ್ಲಿ 1ನೇ ಜನವರಿ, 1ನೇ ಏಪ್ರಿಲ್, 1ನೇ ಜುಲೈ ಮತ್ತು 1ನೇ ಅಕ್ಟೋಬರ್-2024ಕ್ಕೆ 18 ವರ್ಷ ತುಂಬುವ ಯುವ ಮತದಾರರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ಮುಂಗಡ ಅರ್ಜಿ ಸಲ್ಲಿಸಲು ಅವಕಾಶವಿದೆ. ಮತದಾರರ ಗುರುತಿನ ಚೀಟಿಯನ್ನು ಸಂಬಂಧಪಟ್ಟ ಮತದಾರರಿಗೆ ನೇರವಾಗಿ ಅಂಚೆ ಮೂಲಕ ಕಳುಹಿಸಲಾಗುವುದು ಎಂದು ಹೇಳಿದ್ದಾರೆ.

ಚುನಾವಣಾ ಆಯೋಗದಿಂದ ಇತ್ತೀಚಿನ ನಿರ್ದೇಶನದಂತೆ ಮತದಾರರ ನೋಂದಣಿಗಾಗಿ ಸರಳೀಕರಿಸಿದ ನಮೂನೆ-6 ರ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಮತದಾರರ ಪಟ್ಟಿಯಲ್ಲಿ ಮತದಾರರ ಹೆಸರಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು ಸಲ್ಲಿಸಲು ಹಾಗೂ ಒಂದೇ ತರಹದ ಹೆಸರು / ಭಾವಚಿತ್ರ ನಮೂದುಗಳನ್ನು ಹೊಂದಿರುವ ಮತದಾರರ ಪರಿಶೀಲನೆಗೆ ಮತ್ತು ಕೈಬಿಡಲು ಪರಿಷ್ಕೃತ ನಮೂನೆ-7ನ್ನು ನೀಡಲು ಅವಕಾಶ ಕಲ್ಪಿಸಲಾಗಿದೆ. ಮತದಾರರ ಪಟ್ಟಿಯ ಹೆಸರು, ಇನ್ನಿತರ ತಿದ್ದುಪಡಿಗಳಿಗಾಗಿ ನಮೂನೆ-8ರ ಅರ್ಜಿಯಲ್ಲಿ ಸಲ್ಲಿಸಬಹುದಾಗಿದೆ.

ರಾಜಕೀಯ ಪಕ್ಷಗಳಿಗೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳು, ಮಾನ್ಯತೆ ಪಡೆದ ರಾಜಕೀಯ ಪಕ್ಷಗಳು, ಬೂತ್ ಲೆವೆಲ್ ಏಜೆಂಟ್ (BLA) ಗಳನ್ನು ನೇಮಿಸಲು ಅಗತ್ಯ ಕ್ರಮಕೈಗೊಳ್ಳಬೇಕಾಗಿದೆ. ಬೂತ್ ಲೆವೆಲ್ ಏಜೆಂಟ್‌ಗಳು ಸಂಬಂಧಪಟ್ಟ ಮತಗಟ್ಟೆ ಹಂತದ ಅಧಿಕಾರಿ (BLO)ಗೆ ಪ್ರತಿ ದಿನ 10 ನಮೂನೆಗಳನ್ನು ನಿರಂತರ ಪರಿಷ್ಕರಣೆ ಸಲ್ಲಿಸಲು ಅವಕಾಶವಿದೆ. ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ನಿಗದಿಪಡಿಸಿರುವ ಅವಧಿಯಲ್ಲಿ ಒಬ್ಬ ಬೂತ್‌ ಲೆವೆಲ್ ಏಜೆಂಟ್, 30ಕ್ಕಿಂತ ಹೆಚ್ಚು ನಮೂನೆಗಳನ್ನು ಸಲ್ಲಿಸಿದ್ದಲ್ಲಿ ಸಂಬಂಧಪಟ್ಟ ಮತದಾರರ ನೋಂದಣಾಧಿಕಾರಿ/ಸಹಾಯಕ ಮತದಾರರ ನೋಂದಣಾಧಿಕಾರಿ ಸ್ವತಃ ಪರಿಶೀಲನೆ ಮಾಡುವುದಾಗಿರುತ್ತದೆ. ಬೂತ್ ಲೆವೆಲ್ ಏಜೆಂಟ್ ರವರು ನಮೂನೆಗಳ ಅರ್ಜಿ ಸಹಿತ ತಾನು ನೀಡಿರುವ ಅರ್ಜಿಗಳನ್ನು ಸ್ವತಃ ಪರಿಶೀಲನೆ ಮಾಡಿರುವುದಾಗಿ ದೃಢೀಕರಣ ಸಲ್ಲಿಸಬೇಕು‌.

ಮತದಾರರು ಹಾಗೂ ರಾಜಕೀಯ ಪಕ್ಷಗಳ ಮುಖಂಡರಿಂದ ಬಂದಿರುವ ಆಕ್ಷೇಪಣೆಗಳನ್ನು ಡಿಸೆಂಬರ್ 26ರ ಒಳಗೆ ಇತ್ಯರ್ಥಗೊಳಿಸಲಾಗುವುದು. ಅಂತಿಮ ಮತದಾರರ ಪಟ್ಟಿಯನ್ನು 2024ರ ಜನವರಿ 5 ರಂದು ಪ್ರಕಟಿಸಲಾಗುವುದು ಎಂದರು.

ಜಿಲ್ಲೆಯಲ್ಲಿ ಈಗ ಪ್ರಕಟಿಸಲಾಗಿರುವ ಕರಡು ಮತದಾರರ ಪಟ್ಟಿಯಲ್ಲಿ ಜಿಲ್ಲೆಯ ನಾಲ್ಕು ತಾಲೂಕುಗಳಿಂದ 8,81,961 ಮತದಾರರು ಇದ್ದಾರೆ. ಇದರಲ್ಲಿ 4,37,579 ಪುರುಷರು, 4,44,237 ಮಹಿಳೆಯರು ಹಾಗೂ 145 ಜನ ಇತರೆ ಮತದಾರರು ಇದ್ದಾರೆ.

ಒಟ್ಟು ಮತದಾರರ ಸಂಖ್ಯೆಯಲ್ಲಿ 80 ವರ್ಷ ಮೇಲ್ಪಟ್ಟ ಮತದಾರರು 20,144. ಅಗವಿಕಲ ಮತದಾರರು 12,624 ಹಾಗೂ ಸೇವಾ ಮತದಾರರು 128 ಇದ್ದಾರೆ ಎಂದರು. ಜಿಲ್ಲೆಯ 4 ತಾಲೂಕುಗಳಲ್ಲಿನ ಮತದಾರರ ಪೈಕಿ ಹೆಚ್ಚಿನ ಪ್ರಮಾಣದಲ್ಲಿ ಮಹಿಳಾ ಮತದಾರರೇ ಇದ್ದಾರೆ.

ದೊಡ್ಡಬಳ್ಳಾಪುರದಲ್ಲಿ ಒಟ್ಟು 2,15,282 ಮತದಾರರಿದ್ದು, ಅದರಲ್ಲಿ 1,08,248 ಮಹಿಳಾ ಮತದಾರರು ಹಾಗೂ 1,07,033 ಪುರುಷ ಮತದಾರರಿದ್ದಾರೆ.

ಹೊಸಕೋಟೆಯಲ್ಲಿ ಒಟ್ಟು 2,34,936 ಮತದಾರರಿದ್ದು, ಅದರಲ್ಲಿ 1,18,224 ಮಹಿಳೆ ಹಾಗೂ 1,16, 681 ಪುರುಷ ಮತದಾರರು ಇದ್ದಾರೆ.

ದೇವನಹಳ್ಳಿಯಲ್ಲಿ ಒಟ್ಟು 2,13,381 ಮತದಾರರಿದ್ದು, 1,07,345 ಮಹಿಳಾ ಹಾಗೂ 1,06,018 ಪುರುಷ ಮತದಾರರಿದ್ದಾರೆ.

ನೆಲಮಂಗಲದಲ್ಲಿ 2,18,372 ಮತದಾರರ ಪೈಕಿ 1,10,420 ಮಹಿಳೆ ಹಾಗೂ 1,07,847 ಪುರುಷ ಮತದಾರರಿದ್ದಾರೆ.

ಜಿಲ್ಲೆಯಲ್ಲಿ ಮತದಾರರ ಲಿಂಗಾನುಪಾತದಲ್ಲಿ 1 ಸಾವಿರ ಪುರುಷರಿಗೆ 1016 ಮಹಿಳೆಯರಿದ್ದಾರೆ. ಅದರಲ್ಲಿ ದೊಡ್ಡಬಳ್ಳಾಪುರದಲ್ಲಿ 1011, ಹೊಸಕೋಟೆಯಲ್ಲಿ 1013, ದೇವನಹಳ್ಳಿ 1013 ಹಾಗೂ ನೆಲಮಂಗಲದಲ್ಲಿ ಅತಿ ಹೆಚ್ಚು 1025 ಲಿಂಗಾನುಪಾತ ಕಂಡುಬಂದಿದೆ.

ಜಿಲ್ಲೆಯಲ್ಲಿ 4 ವಿಧಾನಸಭಾ ಕ್ಷೇತ್ರಗಳಿವೆ. ಇದರಲ್ಲಿ ಒಟ್ಟಾಗಿ 1137 ಮತಗಟ್ಟೆಗಳಿವೆ. ಅದರಲ್ಲಿ ದೊಡ್ಡಬಳ್ಳಾಪುರ 276, ಹೊಸಕೋಟೆ 293, ದೇವನಹಳ್ಳಿ 292 ಹಾಗೂ ನೆಲಮಂಗಲದಲ್ಲಿ 276 ಮತಗಟ್ಟೆಗಳಿದೆ.

ಜಿಲ್ಲೆಯಲ್ಲಿ ದೊಡ್ಡಬಳ್ಳಾಪುರ 3350, ಹೊಸಕೋಟೆ 3482, ದೇವನಹಳ್ಳಿ 3484 ಹಾಗೂ ನೆಲಮಂಗಲದಲ್ಲಿ 2308 ಸೇರಿದಂತೆ ಒಟ್ಟು 12,624 ಮಂದಿ ವಿಶೇಷಚೇತನ ಮತದಾರರಿದ್ದಾರೆ. 20,144 ಮಂದಿ 80 ವರ್ಷ ಮೇಲ್ಪಟ್ಟವರಿದ್ದಾರೆ. ಇನ್ನು ಸೇವಾ ಮತದಾರರು 128 ಮಂದಿ ಇದ್ದಾರೆ ಎಂದು ಮಾಹಿತಿ ನೀಡಿದರು.

Ramesh Babu

Journalist

Recent Posts

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

4 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

6 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

8 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

11 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

22 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

22 hours ago