ಇತ್ತೀಚೆಗೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ಉದ್ಯೋಗದ ನೆಪದಲ್ಲಿ ಹೆಣ್ಣುಮಕ್ಕಳನ್ನು ಬಲವಂತಾಗಿ ಮತಾಂತರ ಮಾಡುವ ವಿಚಾರ ದೊಡ್ಡ ದುರಂತ ಪ್ರಕರಣವಾಗಿದೆ. ಇದರ ವಿರುದ್ಧ ದೇಶಾದ್ಯಂತ ಕಂಪನಿಗಳಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ವಿಶ್ವ ಹಿಂದು ಪರಿಷತ್ ಕೇಂದ್ರೀಯ ಸಂಘಟನಾ ಕಾರ್ಯದರ್ಶಿ ಮಿಲಿಂದ್ ಪಾರಂಡೆ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಮತಾಂತರ ಮಾಡುವ ಜಾಲಗಳು ಹೆಚ್ಚಾಗುತ್ತಿದ್ದು, ಇದರ ವಿರುದ್ಧ ಹಿಂದೂ ಸಮಾಜ ಎಚ್ಚೆತ್ತುಕೊಳ್ಳಬೇಕಿದೆ ಎಂದರು.
ಪೆಹಲ್ಗಾಮ್ ಹತ್ಯಾಕಾಂಡ ನಡೆದು ಒಂದು ವರ್ಷ ಕಳೆದಿದೆ. ಹತ್ಯಾಕಾಂಡದ ವೇಳೆ ನೀನು ಹಿಂದು ನಾ ಎಂದು ಕೇಳಿ ದಾಳಿ ಮಾಡಲಾಗಿತ್ತು. ಹೀಗಾಗಿ ಮುಸ್ಲಿಂ ಬಾಂಧವರ ಯುವ ಪಿಳೀಗೆಗೆ ಉತ್ತಮ ನಡವಳಿಕೆ, ಸಂಸ್ಕಾರ ನೀಡುವಂತ ಕಾರ್ಯ ಆಗಬೇಕಿದೆ ಎಂದರು.
ಇನ್ನೂ ಗೋವುಗಳ ಸಂತತಿ ಕಡಿಮೆಯಾಗುತ್ತಿದೆ. ಗೋವುಗಳ ಸ್ಮಗ್ಲಿಂಗ್ ಹೆಚ್ಚಾಗಿ ನಡೆಯುತ್ತಿದೆ. ಇದರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಒತ್ತಾಯಿಸಲಾಗುತ್ತಿದೆ. ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರನ್ನ ದುರುದ್ದೇಶಪೂರ್ವಕವಾಗಿ ಗುರಿಯಾಗಿಸಿ ಪ್ರಕರಣಗಳನ್ನು ದಾಖಲು ಮಾಡಲಾಗುತ್ತಿದೆ. ಪೊಲೀಸ್ ಇಲಾಖೆ ಮೇಲೆ ಒತ್ತಡ ಹೇರಿ ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ಗಳನ್ನು ಹಾಕಲಾಗುತ್ತಿದೆ. ಇಂತಹ ದ್ವೇಷ ಕೆಲಸವನ್ನು ಬಿಡಬೇಕು. ಮುಂದಿನ ನವೆಂಬರ್ ನಲ್ಲಿ ಒಂದು ಕೋಟಿ ಹಿಂದು ಕಾರ್ಯಕರ್ತರ ನೊಂದಣಿ ಕಾರ್ಯ ಮಾಡಲಾಗುತ್ತಿದೆ ಎಂದು ತಿಳಿಸಿದರು.
ವಿಹಿಂಪ ದಕ್ಷಿಣ ಪ್ರಾಂತ ಅಧ್ಯಕ್ಷ ದೀಪಕ್ ರಾಜ್ ಗೋಪಾಲ್, ದಕ್ಷಿಣ ಪ್ರಾಂತ ಕಾರ್ಯದರ್ಶಿ ಬಿ.ಇ ಸುರೇಶ್, ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ ವೆಲ್, ಕೋಲಾರ ವಿಭಾಗ ಅಧ್ಯಕ್ಷ ಮಂಜುನಾಥ್, ಕಾರ್ಯದರ್ಶಿ ಗೌರಿ ಶಂಕರ್ ಮತ್ತಿತ್ತರರು ಇದ್ದರು.
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…
ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…
ದೊಡ್ಡಬಳ್ಳಾಪುರ: ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಸಂಚರಿಸುವ ಸಾರಿಗೆ ಬಸ್ಗಳು ಪದೇ ಪದೇ ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.…
ಭಾರತದ ನೆಲದಲ್ಲಿ, ತಮ್ಮ ವ್ಯಕ್ತಿತ್ವದ ರೂಪದಲ್ಲಿ ಅತ್ಯಂತ ಹೆಚ್ಚು ಪರಿಣಾಮ ಬೀರಿದ ನಾಲ್ಕು ಪಾತ್ರಗಳೆಂದರೆ ಕೃಷ್ಣ, ರಾಮ, ಗಾಂಧಿ, ಮತ್ತು…
ಚಿಕ್ಕನಾಯಕನಹಳ್ಳಿ: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…