ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ 11 ದಿನಗಳ ಅವಧಿಯಲ್ಲಿ ನಾಲ್ಕನೇ ಬಾರಿ ಇಂಧನ ದರ ಹೆಚ್ಚಳ ಮಾಡಿದ್ದು, ಪರಿಷ್ಕೃತ ದರಗಳು ತಕ್ಷಣದಿಂದಲೇ ಜಾರಿಗೆ ಬಂದಿವೆ.
ಈ ಬಾರಿ ಪೆಟ್ರೋಲ್ ದರವನ್ನು ಲೀಟರ್ಗೆ ರೂ.2.61 ಹಾಗೂ ಡೀಸೆಲ್ ದರವನ್ನು ಲೀಟರ್ಗೆ ರೂ.2.71 ಹೆಚ್ಚಳ ಮಾಡಲಾಗಿದೆ. ನಿರಂತರವಾಗಿ ಏರಿಕೆಯಾಗುತ್ತಿರುವ ಇಂಧನ ದರಗಳಿಂದ ಸಾರ್ವಜನಿಕರಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.
ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್ಗೆ ರೂ.102.12ಕ್ಕೆ ಏರಿಕೆಯಾಗಿ ಮೊದಲ ಬಾರಿಗೆ 100 ರೂಪಾಯಿ ಗಡಿ ದಾಟಿದೆ. ಅಲ್ಲದೆ ಡೀಸೆಲ್ ದರ ಲೀಟರ್ಗೆ ರೂ.95.20 ಆಗಿದೆ.
ಇನ್ನು ಬೆಂಗಳೂರಿನಲ್ಲಿ ಇಂದು ಪೆಟ್ರೋಲ್ ದರ ಲೀಟರ್ಗೆ ರೂ.110.61 ಆಗಿದ್ದರೆ, ಡೀಸೆಲ್ ದರ ರೂ.98.54ಕ್ಕೆ ಏರಿಕೆಯಾಗಿದೆ. ಇಂಧನ ದರ ಏರಿಕೆಯಿಂದ ಸಾರಿಗೆ ವೆಚ್ಚ ಹೆಚ್ಚುವ ಸಾಧ್ಯತೆ ಇದ್ದು, ಅಗತ್ಯ ವಸ್ತುಗಳ ಬೆಲೆಯ ಮೇಲೂ ಪರಿಣಾಮ ಬೀರುವ ಆತಂಕ ಎದುರಾಗಿದೆ.
ಪೆಟ್ರೋಲ್ ಮತ್ತು ಡೀಸೆಲ್ ದರಗಳ ನಿರಂತರ ಏರಿಕೆಯಿಂದ ಸಾಮಾನ್ಯ ಜನತೆ ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ದರ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…