ಮತ್ತೆ ಮುನ್ನೆಲೆಗೆ ಬಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೇಂದ್ರ ಸ್ಥಾನ ಕೂಗು

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಷಯವಾಗಿ ಚರ್ಚಿಸುತ್ತಾ, ದೊಡ್ಡಬಳ್ಳಾಪುರವನ್ನು ಕೇಂದ್ರ ಸ್ಥಾನವಾಗಿಸಿಕೊಂಡು ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲ, ಒಳಗೊಂಡಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಂಬ ಹೆಸರನ್ನು ಉಳಿಸಿಕೊಳ್ಳಲಾಯಿತು ಎಂದು ತಿಳಿಸಿರುತ್ತಾರೆ.

ಅವರು ಯಾವ ದೃಷ್ಟಿಕೋನದಿಂದ ಈ ರೀತಿಯ ಹೇಳಿಕೆಯನ್ನು ನೀಡಿದ್ದಾರೆಂದು ತಿಳಿದಿಲ್ಲ, ಆದರೆ ಈಗಾಗಲೇ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ದೇವನಹಳ್ಳಿಯನ್ನು ಜಿಲ್ಲಾ ಕೇಂದ್ರವನ್ನಾಗಿಸಬೇಕೆಂಬುದು ನಮ್ಮ ಬೇಡಿಕೆಯಾಗಿತ್ತು ಮತ್ತು ಇದಕ್ಕೆ ಈ ಹಿಂದಿನ ಸರ್ಕಾರವೂ ಸಹ ಒಪ್ಪಿಗೆ ಸೂಚಿಸಿತ್ತು ಈ ವಿಷಯವಾಗಿ ಅಂದಿನ ಜಿಲ್ಲಾ ಉಸ್ತುವಾರಿ ಸಚಿವರು ಬಹಿರಂಗವಾಗಿಯೇ ದೇವನಹಳ್ಳಿಯನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡುವ ಬಗ್ಗೆ ಅಧಿಕೃತ ಹೇಳಿಕೆಯನ್ನು ಸಹ ನೀಡಿದ್ದರು ಎಂದು ದೇವನಹಳ್ಳಿ ಮಾಜಿ ಶಾಸಕ ನಿಸರ್ಗ‌ ನಾರಾಯಣಸ್ವಾಮಿ ಅವರು ತಿಳಿಸಿದ್ದಾರೆ.

ಈಗಾಗಲೇ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಎಲ್ಲ ಆಡಳಿತಾತ್ಮಕ ಕಚೇರಿಗಳು ದೇವನಹಳ್ಳಿಯಲ್ಲಿಯೇ ಇದ್ದು, ಭೌಗೋಳಿಕವಾಗಿಯೂ ಸಹ ದೇವನಹಳ್ಳಿ ಸೂಕ್ತ ಸ್ಥಳದಲ್ಲಿದೆ. ಇದೀಗ ಉಪಮುಖ್ಯಮಂತ್ರಿಗಳು ದೊಡ್ಡಬಳ್ಳಾಪುರವನ್ನು ಜಿಲ್ಲಾ ಕೇಂದ್ರವನ್ನಾಗಿಸುವ ಬಗ್ಗೆ ಮಾತನಾಡಿರುವುದು ಸಮಂಜಸವಲ್ಲ ಮತ್ತು ಇದು ಜನತೆಯಲ್ಲಿ ಗೊಂದಲವನ್ನುಂಟು ಮಾಡಲಿದ್ದು ಈ ಬಗ್ಗೆ ಉಪಮುಖ್ಯಮಂತ್ರಿಗಳು ಕೂಡಲೇ ಸ್ಪಷ್ಟನೆಯನ್ನು ನೀಡಬೇಕೆಂದು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ನಾಳೆ(ಮಾರ್ಚ್ 11ರಿಂದ) ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ‌ ಮುಷ್ಕರ: ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತ ಸಾಧ್ಯತೆ

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…

2 hours ago

ಮಾ.19 ರಿಂದ ಮಾ.22ರವರೆಗೆ ಮೇಲಿನ ಜೂಗಾನಹಳ್ಳಿಯಲ್ಲಿ ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್‌ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…

3 hours ago

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

5 hours ago

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರ: ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…

5 hours ago

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

15 hours ago