ಮತ್ತೆ ಮುನ್ನೆಲೆಗೆ ಬಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೇಂದ್ರ ಸ್ಥಾನ ಕೂಗು

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಷಯವಾಗಿ ಚರ್ಚಿಸುತ್ತಾ, ದೊಡ್ಡಬಳ್ಳಾಪುರವನ್ನು ಕೇಂದ್ರ ಸ್ಥಾನವಾಗಿಸಿಕೊಂಡು ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲ, ಒಳಗೊಂಡಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಂಬ ಹೆಸರನ್ನು ಉಳಿಸಿಕೊಳ್ಳಲಾಯಿತು ಎಂದು ತಿಳಿಸಿರುತ್ತಾರೆ.

ಅವರು ಯಾವ ದೃಷ್ಟಿಕೋನದಿಂದ ಈ ರೀತಿಯ ಹೇಳಿಕೆಯನ್ನು ನೀಡಿದ್ದಾರೆಂದು ತಿಳಿದಿಲ್ಲ, ಆದರೆ ಈಗಾಗಲೇ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ದೇವನಹಳ್ಳಿಯನ್ನು ಜಿಲ್ಲಾ ಕೇಂದ್ರವನ್ನಾಗಿಸಬೇಕೆಂಬುದು ನಮ್ಮ ಬೇಡಿಕೆಯಾಗಿತ್ತು ಮತ್ತು ಇದಕ್ಕೆ ಈ ಹಿಂದಿನ ಸರ್ಕಾರವೂ ಸಹ ಒಪ್ಪಿಗೆ ಸೂಚಿಸಿತ್ತು ಈ ವಿಷಯವಾಗಿ ಅಂದಿನ ಜಿಲ್ಲಾ ಉಸ್ತುವಾರಿ ಸಚಿವರು ಬಹಿರಂಗವಾಗಿಯೇ ದೇವನಹಳ್ಳಿಯನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡುವ ಬಗ್ಗೆ ಅಧಿಕೃತ ಹೇಳಿಕೆಯನ್ನು ಸಹ ನೀಡಿದ್ದರು ಎಂದು ದೇವನಹಳ್ಳಿ ಮಾಜಿ ಶಾಸಕ ನಿಸರ್ಗ‌ ನಾರಾಯಣಸ್ವಾಮಿ ಅವರು ತಿಳಿಸಿದ್ದಾರೆ.

ಈಗಾಗಲೇ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಎಲ್ಲ ಆಡಳಿತಾತ್ಮಕ ಕಚೇರಿಗಳು ದೇವನಹಳ್ಳಿಯಲ್ಲಿಯೇ ಇದ್ದು, ಭೌಗೋಳಿಕವಾಗಿಯೂ ಸಹ ದೇವನಹಳ್ಳಿ ಸೂಕ್ತ ಸ್ಥಳದಲ್ಲಿದೆ. ಇದೀಗ ಉಪಮುಖ್ಯಮಂತ್ರಿಗಳು ದೊಡ್ಡಬಳ್ಳಾಪುರವನ್ನು ಜಿಲ್ಲಾ ಕೇಂದ್ರವನ್ನಾಗಿಸುವ ಬಗ್ಗೆ ಮಾತನಾಡಿರುವುದು ಸಮಂಜಸವಲ್ಲ ಮತ್ತು ಇದು ಜನತೆಯಲ್ಲಿ ಗೊಂದಲವನ್ನುಂಟು ಮಾಡಲಿದ್ದು ಈ ಬಗ್ಗೆ ಉಪಮುಖ್ಯಮಂತ್ರಿಗಳು ಕೂಡಲೇ ಸ್ಪಷ್ಟನೆಯನ್ನು ನೀಡಬೇಕೆಂದು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

7 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

9 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

9 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

10 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

14 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

16 hours ago