ಮತ್ತೆ ಮುನ್ನೆಲೆಗೆ ಬಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೇಂದ್ರ ಸ್ಥಾನ ಕೂಗು

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಷಯವಾಗಿ ಚರ್ಚಿಸುತ್ತಾ, ದೊಡ್ಡಬಳ್ಳಾಪುರವನ್ನು ಕೇಂದ್ರ ಸ್ಥಾನವಾಗಿಸಿಕೊಂಡು ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲ, ಒಳಗೊಂಡಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಂಬ ಹೆಸರನ್ನು ಉಳಿಸಿಕೊಳ್ಳಲಾಯಿತು ಎಂದು ತಿಳಿಸಿರುತ್ತಾರೆ.

ಅವರು ಯಾವ ದೃಷ್ಟಿಕೋನದಿಂದ ಈ ರೀತಿಯ ಹೇಳಿಕೆಯನ್ನು ನೀಡಿದ್ದಾರೆಂದು ತಿಳಿದಿಲ್ಲ, ಆದರೆ ಈಗಾಗಲೇ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ದೇವನಹಳ್ಳಿಯನ್ನು ಜಿಲ್ಲಾ ಕೇಂದ್ರವನ್ನಾಗಿಸಬೇಕೆಂಬುದು ನಮ್ಮ ಬೇಡಿಕೆಯಾಗಿತ್ತು ಮತ್ತು ಇದಕ್ಕೆ ಈ ಹಿಂದಿನ ಸರ್ಕಾರವೂ ಸಹ ಒಪ್ಪಿಗೆ ಸೂಚಿಸಿತ್ತು ಈ ವಿಷಯವಾಗಿ ಅಂದಿನ ಜಿಲ್ಲಾ ಉಸ್ತುವಾರಿ ಸಚಿವರು ಬಹಿರಂಗವಾಗಿಯೇ ದೇವನಹಳ್ಳಿಯನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡುವ ಬಗ್ಗೆ ಅಧಿಕೃತ ಹೇಳಿಕೆಯನ್ನು ಸಹ ನೀಡಿದ್ದರು ಎಂದು ದೇವನಹಳ್ಳಿ ಮಾಜಿ ಶಾಸಕ ನಿಸರ್ಗ‌ ನಾರಾಯಣಸ್ವಾಮಿ ಅವರು ತಿಳಿಸಿದ್ದಾರೆ.

ಈಗಾಗಲೇ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಎಲ್ಲ ಆಡಳಿತಾತ್ಮಕ ಕಚೇರಿಗಳು ದೇವನಹಳ್ಳಿಯಲ್ಲಿಯೇ ಇದ್ದು, ಭೌಗೋಳಿಕವಾಗಿಯೂ ಸಹ ದೇವನಹಳ್ಳಿ ಸೂಕ್ತ ಸ್ಥಳದಲ್ಲಿದೆ. ಇದೀಗ ಉಪಮುಖ್ಯಮಂತ್ರಿಗಳು ದೊಡ್ಡಬಳ್ಳಾಪುರವನ್ನು ಜಿಲ್ಲಾ ಕೇಂದ್ರವನ್ನಾಗಿಸುವ ಬಗ್ಗೆ ಮಾತನಾಡಿರುವುದು ಸಮಂಜಸವಲ್ಲ ಮತ್ತು ಇದು ಜನತೆಯಲ್ಲಿ ಗೊಂದಲವನ್ನುಂಟು ಮಾಡಲಿದ್ದು ಈ ಬಗ್ಗೆ ಉಪಮುಖ್ಯಮಂತ್ರಿಗಳು ಕೂಡಲೇ ಸ್ಪಷ್ಟನೆಯನ್ನು ನೀಡಬೇಕೆಂದು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

18 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

23 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago