ಮತ ಎಣಿಕೆ ಕಾರ್ಯಕ್ಕೆ ಸಕಲ ಸಿದ್ಧತೆ: ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ 2023ರ ಮೇ.10 ರಂದು ಮತದಾನ ಪ್ರಕ್ರಿಯೆ ನಡೆದಿದ್ದು, ಮೇ.13 ರಂದು ದೇವನಹಳ್ಳಿಯ ಪ್ರಸನ್ನಹಳ್ಳಿಯಲ್ಲಿರುವ ಆಕಾಶ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ, ನಡೆಯಲಿರುವ ಮತ ಎಣಿಕೆ ಕಾರ್ಯಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ  ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದರು.

2023ರ ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಮೇ.10ರಂದು ನಡೆದ ಮತದಾನದಲ್ಲಿ ಶೇಕಡ 85.06 ರಷ್ಟು ಮತ ಚಲಾವಣೆಯಾಗಿರುತ್ತದೆ.

ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯಲ್ಲಿ ಒಟ್ಟಾರೆ 8,77,890 ಮತದಾರರಿದ್ದು, ಅದರಲ್ಲಿ  4,35,835 ಪುರುಷ ಮತದಾರರು, 4,41,907 ಮಹಿಳಾ ಮತದಾರರು ಹಾಗೂ 148 ಇತರೆ ಮತದಾರರಿದ್ದಾರೆ.

ಒಟ್ಟು 7,46,873(ಶೇ.85.08) ಮತದಾರರು ಮತ ಚಲಾಯಿಸಿದ್ದಾರೆ. ಅದರಲ್ಲಿ 3,74,588 ಪುರುಷ ಮತದಾರರು, 3,72,230 ಮಹಿಳಾ ಮತದಾರರು, 55 ಇತರೆ ಮತದಾರರು ಮತದಾನ ಮಾಡಿದ್ದಾರೆ.

ಮತದಾನ ನಡೆದ 1,137 ಮತಗಟ್ಟೆಗಳ ಇವಿಎಂ ಹಾಗೂ ವಿವಿಪ್ಯಾಟ್ ಯಂತ್ರಗಳನ್ನು ಮತ ಎಣಿಕೆ ಕೇಂದ್ರದ ಭದ್ರತಾ ಕೊಠಡಿಯಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ನಲ್ಲಿ ಇರಿಸಲಾಗಿದೆ.

ಮತ ಎಣಿಕೆ ಕಾರ್ಯವನ್ನು ಮೇ.13ರಂದು ಬೆಳಿಗ್ಗೆ 8 ಗಂಟೆಗೆ ಪ್ರಾರಂಭಿಸಲಾಗುವುದು ಹಾಗೂ ನಾಲ್ಕು ಕೊಠಡಿಯಲ್ಲಿ ನಡೆಸಲಾಗುವುದು. ಮತ ಎಣಿಕೆ ಕಾರ್ಯಗಳು 21 ಹಾಗೂ 20 ಸುತ್ತುಗಳು ನಡೆಯಲಿವೆ.

ಪ್ರತಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯಕ್ಕಾಗಿ 14 ಟೇಬಲ್ ಗಳನ್ನು ನಿಗದಿಪಡಿಸಲಾಗಿದ್ದು, ಪ್ರತಿ ಟೇಬಲ್ ಗೆ ಒಬ್ಬ ಎಣಿಕೆ ಮೇಲ್ವಿಚಾರಕರು, ಎಣಿಕೆ ಸಹಾಯಕರು ಮತ್ತು ಮೈಕ್ರೋ ಅಬ್ಸರ್ವರ್‌ಅನ್ನು ನೇಮಕ ಮಾಡಲಾಗಿದೆ.

ಅಂಚೆ ಮತ ಎಣಿಕೆ ಕಾರ್ಯಕ್ಕಾಗಿ 1 ಪ್ರತ್ಯೇಕ ಟೇಬಲ್ ನ್ನು ನಿಗದಿಪಡಿಸಲಾಗಿದ್ದು, ಸದರಿ ಟೇಬಲ್ ಗೆ ಒಬ್ಬ ಎಣಿಕೆ ಮೇಲ್ವಿಚಾರಕರು, ಎಣಿಕೆ ಸಹಾಯಕರು ಮತ್ತು ಮೈಕ್ರೋ ಅಬ್ಸರ್ವರ್‌ಅನ್ನು ನೇಮಕ ಮಾಡಲಾಗಿದೆ.

130 ಸೇವಾ ಮತದಾರರಿಗೆ ಅಂಚೆ ಮತ ಪತ್ರವನ್ನ ಇಟಿಪಿಬಿಎಸ್ ತಂತ್ರಾಂಶ ಮುಖಾಂತರ ರವಾನಿಸಲಾಗಿದ್ದು, ಸದರಿ ಮತಪತ್ರಗಳ ಎಣಿಕೆ ಕಾರ್ಯವನ್ನು ಮೊದಲು  ಕೈಗೊಳ್ಳಲಾಗುವುದು.

74 ಸಾಮಾನ್ಯ ಮತದಾರರಿಗೆ (ಕರ್ತವ್ಯ ನಿರತ ಚುನಾವಣಾ ಸಿಬ್ಬಂದಿಗೆ) ಅಂಚೆ ಮತ ಪತ್ರವನ್ನು ವಿತರಿಸಲಾಗಿದ್ದು, ಈವರೆಗೆ 74 ಅಂಚೆ ಮತ ಪತ್ರಗಳು ಸ್ವೀಕೃತವಾಗಿವೆ. ಇವಿಯಂ ಯಂತ್ರಗಳ ಮತ ಎಣಿಕೆ ಮುಗಿದ ನಂತರ 5 ಮತಗಟ್ಟೆಗಳ ವಿವಿಪ್ಯಾಟ್ ಯಂತ್ರದಲ್ಲಿರುವ ಸ್ಲಿಪ್‌ಗಳ ಎಣಿಕೆ ಕಾರ್ಯವನ್ನು ನಡೆಸಲಾಗುವುದು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 56 ಅಭ್ಯರ್ಥಿಗಳಿದ್ದು ಮತ ಎಣಿಕೆ ಕಾರ್ಯ ನಡೆಯಲಿದೆ.

ಮತ ಎಣಿಕೆ ಕೇಂದ್ರದಲ್ಲಿ ಚುನಾವಣಾ ವೀಕ್ಷಕರು, ಮಾಧ್ಯಮ ಪ್ರತಿನಿಧಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ.

ಮತ ಎಣಿಕೆ ಕಾರ್ಯವು ಎಂಕೋರ್ ತಂತ್ರಾಂಶ ಮುಖಾಂತರ ನಡೆಯಲಿದ್ದು, ಮತ ಎಣಿಕೆ ಕೇಂದ್ರದಲ್ಲಿ ಸೂಕ್ತ ಮೂಲಭೂತ ಸೌಕರ್ಯಗಳ ಏರ್ಪಾಟು ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಮಾಹಿತಿ ನೀಡಿದ್ದಾರೆ.

Ramesh Babu

Journalist

Recent Posts

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

2 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

2 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

6 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

8 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

11 hours ago

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…

15 hours ago