ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ 2023ರ ಮೇ.10 ರಂದು ಮತದಾನ ಪ್ರಕ್ರಿಯೆ ನಡೆದಿದ್ದು, ಮೇ.13 ರಂದು ದೇವನಹಳ್ಳಿಯ ಪ್ರಸನ್ನಹಳ್ಳಿಯಲ್ಲಿರುವ ಆಕಾಶ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ, ನಡೆಯಲಿರುವ ಮತ ಎಣಿಕೆ ಕಾರ್ಯಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದರು.
2023ರ ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಮೇ.10ರಂದು ನಡೆದ ಮತದಾನದಲ್ಲಿ ಶೇಕಡ 85.06 ರಷ್ಟು ಮತ ಚಲಾವಣೆಯಾಗಿರುತ್ತದೆ.
ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯಲ್ಲಿ ಒಟ್ಟಾರೆ 8,77,890 ಮತದಾರರಿದ್ದು, ಅದರಲ್ಲಿ 4,35,835 ಪುರುಷ ಮತದಾರರು, 4,41,907 ಮಹಿಳಾ ಮತದಾರರು ಹಾಗೂ 148 ಇತರೆ ಮತದಾರರಿದ್ದಾರೆ.
ಒಟ್ಟು 7,46,873(ಶೇ.85.08) ಮತದಾರರು ಮತ ಚಲಾಯಿಸಿದ್ದಾರೆ. ಅದರಲ್ಲಿ 3,74,588 ಪುರುಷ ಮತದಾರರು, 3,72,230 ಮಹಿಳಾ ಮತದಾರರು, 55 ಇತರೆ ಮತದಾರರು ಮತದಾನ ಮಾಡಿದ್ದಾರೆ.
ಮತದಾನ ನಡೆದ 1,137 ಮತಗಟ್ಟೆಗಳ ಇವಿಎಂ ಹಾಗೂ ವಿವಿಪ್ಯಾಟ್ ಯಂತ್ರಗಳನ್ನು ಮತ ಎಣಿಕೆ ಕೇಂದ್ರದ ಭದ್ರತಾ ಕೊಠಡಿಯಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ನಲ್ಲಿ ಇರಿಸಲಾಗಿದೆ.
ಮತ ಎಣಿಕೆ ಕಾರ್ಯವನ್ನು ಮೇ.13ರಂದು ಬೆಳಿಗ್ಗೆ 8 ಗಂಟೆಗೆ ಪ್ರಾರಂಭಿಸಲಾಗುವುದು ಹಾಗೂ ನಾಲ್ಕು ಕೊಠಡಿಯಲ್ಲಿ ನಡೆಸಲಾಗುವುದು. ಮತ ಎಣಿಕೆ ಕಾರ್ಯಗಳು 21 ಹಾಗೂ 20 ಸುತ್ತುಗಳು ನಡೆಯಲಿವೆ.
ಪ್ರತಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯಕ್ಕಾಗಿ 14 ಟೇಬಲ್ ಗಳನ್ನು ನಿಗದಿಪಡಿಸಲಾಗಿದ್ದು, ಪ್ರತಿ ಟೇಬಲ್ ಗೆ ಒಬ್ಬ ಎಣಿಕೆ ಮೇಲ್ವಿಚಾರಕರು, ಎಣಿಕೆ ಸಹಾಯಕರು ಮತ್ತು ಮೈಕ್ರೋ ಅಬ್ಸರ್ವರ್ಅನ್ನು ನೇಮಕ ಮಾಡಲಾಗಿದೆ.
ಅಂಚೆ ಮತ ಎಣಿಕೆ ಕಾರ್ಯಕ್ಕಾಗಿ 1 ಪ್ರತ್ಯೇಕ ಟೇಬಲ್ ನ್ನು ನಿಗದಿಪಡಿಸಲಾಗಿದ್ದು, ಸದರಿ ಟೇಬಲ್ ಗೆ ಒಬ್ಬ ಎಣಿಕೆ ಮೇಲ್ವಿಚಾರಕರು, ಎಣಿಕೆ ಸಹಾಯಕರು ಮತ್ತು ಮೈಕ್ರೋ ಅಬ್ಸರ್ವರ್ಅನ್ನು ನೇಮಕ ಮಾಡಲಾಗಿದೆ.
130 ಸೇವಾ ಮತದಾರರಿಗೆ ಅಂಚೆ ಮತ ಪತ್ರವನ್ನ ಇಟಿಪಿಬಿಎಸ್ ತಂತ್ರಾಂಶ ಮುಖಾಂತರ ರವಾನಿಸಲಾಗಿದ್ದು, ಸದರಿ ಮತಪತ್ರಗಳ ಎಣಿಕೆ ಕಾರ್ಯವನ್ನು ಮೊದಲು ಕೈಗೊಳ್ಳಲಾಗುವುದು.
74 ಸಾಮಾನ್ಯ ಮತದಾರರಿಗೆ (ಕರ್ತವ್ಯ ನಿರತ ಚುನಾವಣಾ ಸಿಬ್ಬಂದಿಗೆ) ಅಂಚೆ ಮತ ಪತ್ರವನ್ನು ವಿತರಿಸಲಾಗಿದ್ದು, ಈವರೆಗೆ 74 ಅಂಚೆ ಮತ ಪತ್ರಗಳು ಸ್ವೀಕೃತವಾಗಿವೆ. ಇವಿಯಂ ಯಂತ್ರಗಳ ಮತ ಎಣಿಕೆ ಮುಗಿದ ನಂತರ 5 ಮತಗಟ್ಟೆಗಳ ವಿವಿಪ್ಯಾಟ್ ಯಂತ್ರದಲ್ಲಿರುವ ಸ್ಲಿಪ್ಗಳ ಎಣಿಕೆ ಕಾರ್ಯವನ್ನು ನಡೆಸಲಾಗುವುದು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 56 ಅಭ್ಯರ್ಥಿಗಳಿದ್ದು ಮತ ಎಣಿಕೆ ಕಾರ್ಯ ನಡೆಯಲಿದೆ.
ಮತ ಎಣಿಕೆ ಕೇಂದ್ರದಲ್ಲಿ ಚುನಾವಣಾ ವೀಕ್ಷಕರು, ಮಾಧ್ಯಮ ಪ್ರತಿನಿಧಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ.
ಮತ ಎಣಿಕೆ ಕಾರ್ಯವು ಎಂಕೋರ್ ತಂತ್ರಾಂಶ ಮುಖಾಂತರ ನಡೆಯಲಿದ್ದು, ಮತ ಎಣಿಕೆ ಕೇಂದ್ರದಲ್ಲಿ ಸೂಕ್ತ ಮೂಲಭೂತ ಸೌಕರ್ಯಗಳ ಏರ್ಪಾಟು ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಮಾಹಿತಿ ನೀಡಿದ್ದಾರೆ.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…