ಮತ ಎಣಿಕೆ ಕಾರ್ಯಕ್ಕೆ ಸಕಲ ಸಿದ್ಧತೆ: ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ 2023ರ ಮೇ.10 ರಂದು ಮತದಾನ ಪ್ರಕ್ರಿಯೆ ನಡೆದಿದ್ದು, ಮೇ.13 ರಂದು ದೇವನಹಳ್ಳಿಯ ಪ್ರಸನ್ನಹಳ್ಳಿಯಲ್ಲಿರುವ ಆಕಾಶ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ, ನಡೆಯಲಿರುವ ಮತ ಎಣಿಕೆ ಕಾರ್ಯಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ  ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದರು.

2023ರ ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಮೇ.10ರಂದು ನಡೆದ ಮತದಾನದಲ್ಲಿ ಶೇಕಡ 85.06 ರಷ್ಟು ಮತ ಚಲಾವಣೆಯಾಗಿರುತ್ತದೆ.

ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯಲ್ಲಿ ಒಟ್ಟಾರೆ 8,77,890 ಮತದಾರರಿದ್ದು, ಅದರಲ್ಲಿ  4,35,835 ಪುರುಷ ಮತದಾರರು, 4,41,907 ಮಹಿಳಾ ಮತದಾರರು ಹಾಗೂ 148 ಇತರೆ ಮತದಾರರಿದ್ದಾರೆ.

ಒಟ್ಟು 7,46,873(ಶೇ.85.08) ಮತದಾರರು ಮತ ಚಲಾಯಿಸಿದ್ದಾರೆ. ಅದರಲ್ಲಿ 3,74,588 ಪುರುಷ ಮತದಾರರು, 3,72,230 ಮಹಿಳಾ ಮತದಾರರು, 55 ಇತರೆ ಮತದಾರರು ಮತದಾನ ಮಾಡಿದ್ದಾರೆ.

ಮತದಾನ ನಡೆದ 1,137 ಮತಗಟ್ಟೆಗಳ ಇವಿಎಂ ಹಾಗೂ ವಿವಿಪ್ಯಾಟ್ ಯಂತ್ರಗಳನ್ನು ಮತ ಎಣಿಕೆ ಕೇಂದ್ರದ ಭದ್ರತಾ ಕೊಠಡಿಯಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ನಲ್ಲಿ ಇರಿಸಲಾಗಿದೆ.

ಮತ ಎಣಿಕೆ ಕಾರ್ಯವನ್ನು ಮೇ.13ರಂದು ಬೆಳಿಗ್ಗೆ 8 ಗಂಟೆಗೆ ಪ್ರಾರಂಭಿಸಲಾಗುವುದು ಹಾಗೂ ನಾಲ್ಕು ಕೊಠಡಿಯಲ್ಲಿ ನಡೆಸಲಾಗುವುದು. ಮತ ಎಣಿಕೆ ಕಾರ್ಯಗಳು 21 ಹಾಗೂ 20 ಸುತ್ತುಗಳು ನಡೆಯಲಿವೆ.

ಪ್ರತಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯಕ್ಕಾಗಿ 14 ಟೇಬಲ್ ಗಳನ್ನು ನಿಗದಿಪಡಿಸಲಾಗಿದ್ದು, ಪ್ರತಿ ಟೇಬಲ್ ಗೆ ಒಬ್ಬ ಎಣಿಕೆ ಮೇಲ್ವಿಚಾರಕರು, ಎಣಿಕೆ ಸಹಾಯಕರು ಮತ್ತು ಮೈಕ್ರೋ ಅಬ್ಸರ್ವರ್‌ಅನ್ನು ನೇಮಕ ಮಾಡಲಾಗಿದೆ.

ಅಂಚೆ ಮತ ಎಣಿಕೆ ಕಾರ್ಯಕ್ಕಾಗಿ 1 ಪ್ರತ್ಯೇಕ ಟೇಬಲ್ ನ್ನು ನಿಗದಿಪಡಿಸಲಾಗಿದ್ದು, ಸದರಿ ಟೇಬಲ್ ಗೆ ಒಬ್ಬ ಎಣಿಕೆ ಮೇಲ್ವಿಚಾರಕರು, ಎಣಿಕೆ ಸಹಾಯಕರು ಮತ್ತು ಮೈಕ್ರೋ ಅಬ್ಸರ್ವರ್‌ಅನ್ನು ನೇಮಕ ಮಾಡಲಾಗಿದೆ.

130 ಸೇವಾ ಮತದಾರರಿಗೆ ಅಂಚೆ ಮತ ಪತ್ರವನ್ನ ಇಟಿಪಿಬಿಎಸ್ ತಂತ್ರಾಂಶ ಮುಖಾಂತರ ರವಾನಿಸಲಾಗಿದ್ದು, ಸದರಿ ಮತಪತ್ರಗಳ ಎಣಿಕೆ ಕಾರ್ಯವನ್ನು ಮೊದಲು  ಕೈಗೊಳ್ಳಲಾಗುವುದು.

74 ಸಾಮಾನ್ಯ ಮತದಾರರಿಗೆ (ಕರ್ತವ್ಯ ನಿರತ ಚುನಾವಣಾ ಸಿಬ್ಬಂದಿಗೆ) ಅಂಚೆ ಮತ ಪತ್ರವನ್ನು ವಿತರಿಸಲಾಗಿದ್ದು, ಈವರೆಗೆ 74 ಅಂಚೆ ಮತ ಪತ್ರಗಳು ಸ್ವೀಕೃತವಾಗಿವೆ. ಇವಿಯಂ ಯಂತ್ರಗಳ ಮತ ಎಣಿಕೆ ಮುಗಿದ ನಂತರ 5 ಮತಗಟ್ಟೆಗಳ ವಿವಿಪ್ಯಾಟ್ ಯಂತ್ರದಲ್ಲಿರುವ ಸ್ಲಿಪ್‌ಗಳ ಎಣಿಕೆ ಕಾರ್ಯವನ್ನು ನಡೆಸಲಾಗುವುದು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 56 ಅಭ್ಯರ್ಥಿಗಳಿದ್ದು ಮತ ಎಣಿಕೆ ಕಾರ್ಯ ನಡೆಯಲಿದೆ.

ಮತ ಎಣಿಕೆ ಕೇಂದ್ರದಲ್ಲಿ ಚುನಾವಣಾ ವೀಕ್ಷಕರು, ಮಾಧ್ಯಮ ಪ್ರತಿನಿಧಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ.

ಮತ ಎಣಿಕೆ ಕಾರ್ಯವು ಎಂಕೋರ್ ತಂತ್ರಾಂಶ ಮುಖಾಂತರ ನಡೆಯಲಿದ್ದು, ಮತ ಎಣಿಕೆ ಕೇಂದ್ರದಲ್ಲಿ ಸೂಕ್ತ ಮೂಲಭೂತ ಸೌಕರ್ಯಗಳ ಏರ್ಪಾಟು ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಮಾಹಿತಿ ನೀಡಿದ್ದಾರೆ.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

10 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

13 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

14 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

17 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago