ಮತ ಎಣಿಕೆ ಕಾರ್ಯಕ್ಕೆ ಸಕಲ ಸಿದ್ಧತೆ: ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ 2023ರ ಮೇ.10 ರಂದು ಮತದಾನ ಪ್ರಕ್ರಿಯೆ ನಡೆದಿದ್ದು, ಮೇ.13 ರಂದು ದೇವನಹಳ್ಳಿಯ ಪ್ರಸನ್ನಹಳ್ಳಿಯಲ್ಲಿರುವ ಆಕಾಶ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ, ನಡೆಯಲಿರುವ ಮತ ಎಣಿಕೆ ಕಾರ್ಯಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ  ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದರು.

2023ರ ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಮೇ.10ರಂದು ನಡೆದ ಮತದಾನದಲ್ಲಿ ಶೇಕಡ 85.06 ರಷ್ಟು ಮತ ಚಲಾವಣೆಯಾಗಿರುತ್ತದೆ.

ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯಲ್ಲಿ ಒಟ್ಟಾರೆ 8,77,890 ಮತದಾರರಿದ್ದು, ಅದರಲ್ಲಿ  4,35,835 ಪುರುಷ ಮತದಾರರು, 4,41,907 ಮಹಿಳಾ ಮತದಾರರು ಹಾಗೂ 148 ಇತರೆ ಮತದಾರರಿದ್ದಾರೆ.

ಒಟ್ಟು 7,46,873(ಶೇ.85.08) ಮತದಾರರು ಮತ ಚಲಾಯಿಸಿದ್ದಾರೆ. ಅದರಲ್ಲಿ 3,74,588 ಪುರುಷ ಮತದಾರರು, 3,72,230 ಮಹಿಳಾ ಮತದಾರರು, 55 ಇತರೆ ಮತದಾರರು ಮತದಾನ ಮಾಡಿದ್ದಾರೆ.

ಮತದಾನ ನಡೆದ 1,137 ಮತಗಟ್ಟೆಗಳ ಇವಿಎಂ ಹಾಗೂ ವಿವಿಪ್ಯಾಟ್ ಯಂತ್ರಗಳನ್ನು ಮತ ಎಣಿಕೆ ಕೇಂದ್ರದ ಭದ್ರತಾ ಕೊಠಡಿಯಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ನಲ್ಲಿ ಇರಿಸಲಾಗಿದೆ.

ಮತ ಎಣಿಕೆ ಕಾರ್ಯವನ್ನು ಮೇ.13ರಂದು ಬೆಳಿಗ್ಗೆ 8 ಗಂಟೆಗೆ ಪ್ರಾರಂಭಿಸಲಾಗುವುದು ಹಾಗೂ ನಾಲ್ಕು ಕೊಠಡಿಯಲ್ಲಿ ನಡೆಸಲಾಗುವುದು. ಮತ ಎಣಿಕೆ ಕಾರ್ಯಗಳು 21 ಹಾಗೂ 20 ಸುತ್ತುಗಳು ನಡೆಯಲಿವೆ.

ಪ್ರತಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯಕ್ಕಾಗಿ 14 ಟೇಬಲ್ ಗಳನ್ನು ನಿಗದಿಪಡಿಸಲಾಗಿದ್ದು, ಪ್ರತಿ ಟೇಬಲ್ ಗೆ ಒಬ್ಬ ಎಣಿಕೆ ಮೇಲ್ವಿಚಾರಕರು, ಎಣಿಕೆ ಸಹಾಯಕರು ಮತ್ತು ಮೈಕ್ರೋ ಅಬ್ಸರ್ವರ್‌ಅನ್ನು ನೇಮಕ ಮಾಡಲಾಗಿದೆ.

ಅಂಚೆ ಮತ ಎಣಿಕೆ ಕಾರ್ಯಕ್ಕಾಗಿ 1 ಪ್ರತ್ಯೇಕ ಟೇಬಲ್ ನ್ನು ನಿಗದಿಪಡಿಸಲಾಗಿದ್ದು, ಸದರಿ ಟೇಬಲ್ ಗೆ ಒಬ್ಬ ಎಣಿಕೆ ಮೇಲ್ವಿಚಾರಕರು, ಎಣಿಕೆ ಸಹಾಯಕರು ಮತ್ತು ಮೈಕ್ರೋ ಅಬ್ಸರ್ವರ್‌ಅನ್ನು ನೇಮಕ ಮಾಡಲಾಗಿದೆ.

130 ಸೇವಾ ಮತದಾರರಿಗೆ ಅಂಚೆ ಮತ ಪತ್ರವನ್ನ ಇಟಿಪಿಬಿಎಸ್ ತಂತ್ರಾಂಶ ಮುಖಾಂತರ ರವಾನಿಸಲಾಗಿದ್ದು, ಸದರಿ ಮತಪತ್ರಗಳ ಎಣಿಕೆ ಕಾರ್ಯವನ್ನು ಮೊದಲು  ಕೈಗೊಳ್ಳಲಾಗುವುದು.

74 ಸಾಮಾನ್ಯ ಮತದಾರರಿಗೆ (ಕರ್ತವ್ಯ ನಿರತ ಚುನಾವಣಾ ಸಿಬ್ಬಂದಿಗೆ) ಅಂಚೆ ಮತ ಪತ್ರವನ್ನು ವಿತರಿಸಲಾಗಿದ್ದು, ಈವರೆಗೆ 74 ಅಂಚೆ ಮತ ಪತ್ರಗಳು ಸ್ವೀಕೃತವಾಗಿವೆ. ಇವಿಯಂ ಯಂತ್ರಗಳ ಮತ ಎಣಿಕೆ ಮುಗಿದ ನಂತರ 5 ಮತಗಟ್ಟೆಗಳ ವಿವಿಪ್ಯಾಟ್ ಯಂತ್ರದಲ್ಲಿರುವ ಸ್ಲಿಪ್‌ಗಳ ಎಣಿಕೆ ಕಾರ್ಯವನ್ನು ನಡೆಸಲಾಗುವುದು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 56 ಅಭ್ಯರ್ಥಿಗಳಿದ್ದು ಮತ ಎಣಿಕೆ ಕಾರ್ಯ ನಡೆಯಲಿದೆ.

ಮತ ಎಣಿಕೆ ಕೇಂದ್ರದಲ್ಲಿ ಚುನಾವಣಾ ವೀಕ್ಷಕರು, ಮಾಧ್ಯಮ ಪ್ರತಿನಿಧಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ.

ಮತ ಎಣಿಕೆ ಕಾರ್ಯವು ಎಂಕೋರ್ ತಂತ್ರಾಂಶ ಮುಖಾಂತರ ನಡೆಯಲಿದ್ದು, ಮತ ಎಣಿಕೆ ಕೇಂದ್ರದಲ್ಲಿ ಸೂಕ್ತ ಮೂಲಭೂತ ಸೌಕರ್ಯಗಳ ಏರ್ಪಾಟು ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಮಾಹಿತಿ ನೀಡಿದ್ದಾರೆ.

Ramesh Babu

Journalist

Recent Posts

How To Choose The Best Real Money Casino Sites And Utilize Them

There are many benefits to playing at real money casino sites. Whether you are looking…

4 hours ago

ವಿಧಾನಸೌಧದಲ್ಲಿ ಐತಿಹಾಸಿಕ ತೀರ್ಮಾನ: ಒಳಮೀಸಲಾತಿ ಜಾರಿಗೆ ಸಚಿವ ಸಂಪುಟ ಒಪ್ಪಿಗೆ- ಸಚಿವ ಕೆ.ಎಚ್ ಮುನಿಯಪ್ಪ

ವಿಧಾನಸೌಧದಲ್ಲಿ ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ…

6 hours ago

ನಟಸಾರ್ವಭೌಮ ಡಾ.ರಾಜ್ ಉದ್ಯಾನ ಜನಾರ್ಪಣೆಗೊಳಿಸಿದ ಸಚಿವ ಕೆ.ಜೆ ಜಾರ್ಜ್

ಕನ್ನಡದ ಕಣ್ಮಣಿ ಡಾ.ರಾಜ್‌ಕುಮಾರ್ ಅವರು ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಹಸಿರಾಗಿ, ಜನರ ಉಸಿರಾಗಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.…

6 hours ago

ಪೌರ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಡಾ. ಪಿ.ಪಾಂಡುಸಿಂಧೆ ಆಯ್ಕೆ

ಕರ್ನಾಟಕ ರಾಜ್ಯ ಪೌರನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷರಾಗಿ ನಗರಸಭೆಯ ಲೆಕ್ಕಾಧಿಕಾರಿ ಡಾ. ಪಿ.ಪಾಂಡುಸಿಂಧೆ ಎರಡನೇ ಬಾರಿಗೆ ಅವಿರೋಧವಾಗಿ…

6 hours ago

ರಾಷ್ಟ್ರೀಯ ಪಂಚಾಯತ್ ರಾಜ್ ದಿನ ಆಚರಣೆ: ಅತಿ ಹೆಚ್ಚು ತೆರಿಗೆ ವಸೂಲಾತಿ ಮಾಡಿದ ಕಾಡನೂರು ಗ್ರಾ.ಪಂ ಗೆ ಬಹುಮಾನ ವಿತರಣೆ

ಗ್ರಾಮೀಣ ಪ್ರದೇಶದ ಜನರ ಆಶೋತ್ತರಗಳಿಗೆ ಧ್ವನಿಯಾಗಿ ಪಂಚಾಯತ್ ರಾಜ್ ಇಲಾಖೆಯು ಕೆಲಸ ನಿರ್ವಹಿಸುತ್ತಿದೆ. ಪಾರದರ್ಶಕವಾಗಿ ಸ್ಥಳೀಯ ಆಡಳಿತ ವ್ಯವಸ್ಥೆ ನಡೆಯುತ್ತಾ,…

7 hours ago

ಜೆಡಿಎಸ್ ತಾಲೂಕು ಅಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

ಜೆಡಿಎಸ್ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಹರೀಶ್ ಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನಲ್ಲಿರುವ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ನಡೆದ ಜೆಡಿಎಸ್…

9 hours ago