ಮತ ಎಣಿಕೆ ಕಾರ್ಯಕ್ಕೆ ಸಕಲ ಸಿದ್ಧತೆ: ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ 2023ರ ಮೇ.10 ರಂದು ಮತದಾನ ಪ್ರಕ್ರಿಯೆ ನಡೆದಿದ್ದು, ಮೇ.13 ರಂದು ದೇವನಹಳ್ಳಿಯ ಪ್ರಸನ್ನಹಳ್ಳಿಯಲ್ಲಿರುವ ಆಕಾಶ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ, ನಡೆಯಲಿರುವ ಮತ ಎಣಿಕೆ ಕಾರ್ಯಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ  ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದರು.

2023ರ ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಮೇ.10ರಂದು ನಡೆದ ಮತದಾನದಲ್ಲಿ ಶೇಕಡ 85.06 ರಷ್ಟು ಮತ ಚಲಾವಣೆಯಾಗಿರುತ್ತದೆ.

ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯಲ್ಲಿ ಒಟ್ಟಾರೆ 8,77,890 ಮತದಾರರಿದ್ದು, ಅದರಲ್ಲಿ  4,35,835 ಪುರುಷ ಮತದಾರರು, 4,41,907 ಮಹಿಳಾ ಮತದಾರರು ಹಾಗೂ 148 ಇತರೆ ಮತದಾರರಿದ್ದಾರೆ.

ಒಟ್ಟು 7,46,873(ಶೇ.85.08) ಮತದಾರರು ಮತ ಚಲಾಯಿಸಿದ್ದಾರೆ. ಅದರಲ್ಲಿ 3,74,588 ಪುರುಷ ಮತದಾರರು, 3,72,230 ಮಹಿಳಾ ಮತದಾರರು, 55 ಇತರೆ ಮತದಾರರು ಮತದಾನ ಮಾಡಿದ್ದಾರೆ.

ಮತದಾನ ನಡೆದ 1,137 ಮತಗಟ್ಟೆಗಳ ಇವಿಎಂ ಹಾಗೂ ವಿವಿಪ್ಯಾಟ್ ಯಂತ್ರಗಳನ್ನು ಮತ ಎಣಿಕೆ ಕೇಂದ್ರದ ಭದ್ರತಾ ಕೊಠಡಿಯಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ನಲ್ಲಿ ಇರಿಸಲಾಗಿದೆ.

ಮತ ಎಣಿಕೆ ಕಾರ್ಯವನ್ನು ಮೇ.13ರಂದು ಬೆಳಿಗ್ಗೆ 8 ಗಂಟೆಗೆ ಪ್ರಾರಂಭಿಸಲಾಗುವುದು ಹಾಗೂ ನಾಲ್ಕು ಕೊಠಡಿಯಲ್ಲಿ ನಡೆಸಲಾಗುವುದು. ಮತ ಎಣಿಕೆ ಕಾರ್ಯಗಳು 21 ಹಾಗೂ 20 ಸುತ್ತುಗಳು ನಡೆಯಲಿವೆ.

ಪ್ರತಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯಕ್ಕಾಗಿ 14 ಟೇಬಲ್ ಗಳನ್ನು ನಿಗದಿಪಡಿಸಲಾಗಿದ್ದು, ಪ್ರತಿ ಟೇಬಲ್ ಗೆ ಒಬ್ಬ ಎಣಿಕೆ ಮೇಲ್ವಿಚಾರಕರು, ಎಣಿಕೆ ಸಹಾಯಕರು ಮತ್ತು ಮೈಕ್ರೋ ಅಬ್ಸರ್ವರ್‌ಅನ್ನು ನೇಮಕ ಮಾಡಲಾಗಿದೆ.

ಅಂಚೆ ಮತ ಎಣಿಕೆ ಕಾರ್ಯಕ್ಕಾಗಿ 1 ಪ್ರತ್ಯೇಕ ಟೇಬಲ್ ನ್ನು ನಿಗದಿಪಡಿಸಲಾಗಿದ್ದು, ಸದರಿ ಟೇಬಲ್ ಗೆ ಒಬ್ಬ ಎಣಿಕೆ ಮೇಲ್ವಿಚಾರಕರು, ಎಣಿಕೆ ಸಹಾಯಕರು ಮತ್ತು ಮೈಕ್ರೋ ಅಬ್ಸರ್ವರ್‌ಅನ್ನು ನೇಮಕ ಮಾಡಲಾಗಿದೆ.

130 ಸೇವಾ ಮತದಾರರಿಗೆ ಅಂಚೆ ಮತ ಪತ್ರವನ್ನ ಇಟಿಪಿಬಿಎಸ್ ತಂತ್ರಾಂಶ ಮುಖಾಂತರ ರವಾನಿಸಲಾಗಿದ್ದು, ಸದರಿ ಮತಪತ್ರಗಳ ಎಣಿಕೆ ಕಾರ್ಯವನ್ನು ಮೊದಲು  ಕೈಗೊಳ್ಳಲಾಗುವುದು.

74 ಸಾಮಾನ್ಯ ಮತದಾರರಿಗೆ (ಕರ್ತವ್ಯ ನಿರತ ಚುನಾವಣಾ ಸಿಬ್ಬಂದಿಗೆ) ಅಂಚೆ ಮತ ಪತ್ರವನ್ನು ವಿತರಿಸಲಾಗಿದ್ದು, ಈವರೆಗೆ 74 ಅಂಚೆ ಮತ ಪತ್ರಗಳು ಸ್ವೀಕೃತವಾಗಿವೆ. ಇವಿಯಂ ಯಂತ್ರಗಳ ಮತ ಎಣಿಕೆ ಮುಗಿದ ನಂತರ 5 ಮತಗಟ್ಟೆಗಳ ವಿವಿಪ್ಯಾಟ್ ಯಂತ್ರದಲ್ಲಿರುವ ಸ್ಲಿಪ್‌ಗಳ ಎಣಿಕೆ ಕಾರ್ಯವನ್ನು ನಡೆಸಲಾಗುವುದು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 56 ಅಭ್ಯರ್ಥಿಗಳಿದ್ದು ಮತ ಎಣಿಕೆ ಕಾರ್ಯ ನಡೆಯಲಿದೆ.

ಮತ ಎಣಿಕೆ ಕೇಂದ್ರದಲ್ಲಿ ಚುನಾವಣಾ ವೀಕ್ಷಕರು, ಮಾಧ್ಯಮ ಪ್ರತಿನಿಧಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ.

ಮತ ಎಣಿಕೆ ಕಾರ್ಯವು ಎಂಕೋರ್ ತಂತ್ರಾಂಶ ಮುಖಾಂತರ ನಡೆಯಲಿದ್ದು, ಮತ ಎಣಿಕೆ ಕೇಂದ್ರದಲ್ಲಿ ಸೂಕ್ತ ಮೂಲಭೂತ ಸೌಕರ್ಯಗಳ ಏರ್ಪಾಟು ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಮಾಹಿತಿ ನೀಡಿದ್ದಾರೆ.

Ramesh Babu

Journalist

Recent Posts

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

11 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

11 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

14 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

1 day ago

“ವಿಬಿ-ಜಿ ರಾಮ್ ಜಿ” ಯೋಜನೆಗೆ ಚಾಲನೆ

"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…

1 day ago

ಕಳುವಾಗಿದ್ದ ಚಿನ್ನಾಭರಣ, ನಗದು ದೂರುದಾರರಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…

2 days ago