ಮತ ಎಣಿಕೆ ಕಾರ್ಯಕ್ಕೆ ಸಕಲ ಸಿದ್ಧತೆ: ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ 2023ರ ಮೇ.10 ರಂದು ಮತದಾನ ಪ್ರಕ್ರಿಯೆ ನಡೆದಿದ್ದು, ಮೇ.13 ರಂದು ದೇವನಹಳ್ಳಿಯ ಪ್ರಸನ್ನಹಳ್ಳಿಯಲ್ಲಿರುವ ಆಕಾಶ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ, ನಡೆಯಲಿರುವ ಮತ ಎಣಿಕೆ ಕಾರ್ಯಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ  ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದರು.

2023ರ ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಮೇ.10ರಂದು ನಡೆದ ಮತದಾನದಲ್ಲಿ ಶೇಕಡ 85.06 ರಷ್ಟು ಮತ ಚಲಾವಣೆಯಾಗಿರುತ್ತದೆ.

ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯಲ್ಲಿ ಒಟ್ಟಾರೆ 8,77,890 ಮತದಾರರಿದ್ದು, ಅದರಲ್ಲಿ  4,35,835 ಪುರುಷ ಮತದಾರರು, 4,41,907 ಮಹಿಳಾ ಮತದಾರರು ಹಾಗೂ 148 ಇತರೆ ಮತದಾರರಿದ್ದಾರೆ.

ಒಟ್ಟು 7,46,873(ಶೇ.85.08) ಮತದಾರರು ಮತ ಚಲಾಯಿಸಿದ್ದಾರೆ. ಅದರಲ್ಲಿ 3,74,588 ಪುರುಷ ಮತದಾರರು, 3,72,230 ಮಹಿಳಾ ಮತದಾರರು, 55 ಇತರೆ ಮತದಾರರು ಮತದಾನ ಮಾಡಿದ್ದಾರೆ.

ಮತದಾನ ನಡೆದ 1,137 ಮತಗಟ್ಟೆಗಳ ಇವಿಎಂ ಹಾಗೂ ವಿವಿಪ್ಯಾಟ್ ಯಂತ್ರಗಳನ್ನು ಮತ ಎಣಿಕೆ ಕೇಂದ್ರದ ಭದ್ರತಾ ಕೊಠಡಿಯಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ನಲ್ಲಿ ಇರಿಸಲಾಗಿದೆ.

ಮತ ಎಣಿಕೆ ಕಾರ್ಯವನ್ನು ಮೇ.13ರಂದು ಬೆಳಿಗ್ಗೆ 8 ಗಂಟೆಗೆ ಪ್ರಾರಂಭಿಸಲಾಗುವುದು ಹಾಗೂ ನಾಲ್ಕು ಕೊಠಡಿಯಲ್ಲಿ ನಡೆಸಲಾಗುವುದು. ಮತ ಎಣಿಕೆ ಕಾರ್ಯಗಳು 21 ಹಾಗೂ 20 ಸುತ್ತುಗಳು ನಡೆಯಲಿವೆ.

ಪ್ರತಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯಕ್ಕಾಗಿ 14 ಟೇಬಲ್ ಗಳನ್ನು ನಿಗದಿಪಡಿಸಲಾಗಿದ್ದು, ಪ್ರತಿ ಟೇಬಲ್ ಗೆ ಒಬ್ಬ ಎಣಿಕೆ ಮೇಲ್ವಿಚಾರಕರು, ಎಣಿಕೆ ಸಹಾಯಕರು ಮತ್ತು ಮೈಕ್ರೋ ಅಬ್ಸರ್ವರ್‌ಅನ್ನು ನೇಮಕ ಮಾಡಲಾಗಿದೆ.

ಅಂಚೆ ಮತ ಎಣಿಕೆ ಕಾರ್ಯಕ್ಕಾಗಿ 1 ಪ್ರತ್ಯೇಕ ಟೇಬಲ್ ನ್ನು ನಿಗದಿಪಡಿಸಲಾಗಿದ್ದು, ಸದರಿ ಟೇಬಲ್ ಗೆ ಒಬ್ಬ ಎಣಿಕೆ ಮೇಲ್ವಿಚಾರಕರು, ಎಣಿಕೆ ಸಹಾಯಕರು ಮತ್ತು ಮೈಕ್ರೋ ಅಬ್ಸರ್ವರ್‌ಅನ್ನು ನೇಮಕ ಮಾಡಲಾಗಿದೆ.

130 ಸೇವಾ ಮತದಾರರಿಗೆ ಅಂಚೆ ಮತ ಪತ್ರವನ್ನ ಇಟಿಪಿಬಿಎಸ್ ತಂತ್ರಾಂಶ ಮುಖಾಂತರ ರವಾನಿಸಲಾಗಿದ್ದು, ಸದರಿ ಮತಪತ್ರಗಳ ಎಣಿಕೆ ಕಾರ್ಯವನ್ನು ಮೊದಲು  ಕೈಗೊಳ್ಳಲಾಗುವುದು.

74 ಸಾಮಾನ್ಯ ಮತದಾರರಿಗೆ (ಕರ್ತವ್ಯ ನಿರತ ಚುನಾವಣಾ ಸಿಬ್ಬಂದಿಗೆ) ಅಂಚೆ ಮತ ಪತ್ರವನ್ನು ವಿತರಿಸಲಾಗಿದ್ದು, ಈವರೆಗೆ 74 ಅಂಚೆ ಮತ ಪತ್ರಗಳು ಸ್ವೀಕೃತವಾಗಿವೆ. ಇವಿಯಂ ಯಂತ್ರಗಳ ಮತ ಎಣಿಕೆ ಮುಗಿದ ನಂತರ 5 ಮತಗಟ್ಟೆಗಳ ವಿವಿಪ್ಯಾಟ್ ಯಂತ್ರದಲ್ಲಿರುವ ಸ್ಲಿಪ್‌ಗಳ ಎಣಿಕೆ ಕಾರ್ಯವನ್ನು ನಡೆಸಲಾಗುವುದು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 56 ಅಭ್ಯರ್ಥಿಗಳಿದ್ದು ಮತ ಎಣಿಕೆ ಕಾರ್ಯ ನಡೆಯಲಿದೆ.

ಮತ ಎಣಿಕೆ ಕೇಂದ್ರದಲ್ಲಿ ಚುನಾವಣಾ ವೀಕ್ಷಕರು, ಮಾಧ್ಯಮ ಪ್ರತಿನಿಧಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ.

ಮತ ಎಣಿಕೆ ಕಾರ್ಯವು ಎಂಕೋರ್ ತಂತ್ರಾಂಶ ಮುಖಾಂತರ ನಡೆಯಲಿದ್ದು, ಮತ ಎಣಿಕೆ ಕೇಂದ್ರದಲ್ಲಿ ಸೂಕ್ತ ಮೂಲಭೂತ ಸೌಕರ್ಯಗಳ ಏರ್ಪಾಟು ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಮಾಹಿತಿ ನೀಡಿದ್ದಾರೆ.

Ramesh Babu

Journalist

Recent Posts

ಜೂ.05 ರಿಂದ ಮೂರು ದಿನಗಳ ಕಾಲ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…

1 hour ago

ಟಿವಿಎಸ್ ಎಕ್ಸ್‌ಎಲ್-100 ಕಳವು: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್‌ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…

5 hours ago

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

20 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

20 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

21 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

22 hours ago