ಮತ ಎಣಿಕೆ ಕಾರ್ಯಕ್ಕೆ ಸಕಲ ಸಿದ್ಧತೆ: ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ 2023ರ ಮೇ.10 ರಂದು ಮತದಾನ ಪ್ರಕ್ರಿಯೆ ನಡೆದಿದ್ದು, ಮೇ.13 ರಂದು ದೇವನಹಳ್ಳಿಯ ಪ್ರಸನ್ನಹಳ್ಳಿಯಲ್ಲಿರುವ ಆಕಾಶ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ, ನಡೆಯಲಿರುವ ಮತ ಎಣಿಕೆ ಕಾರ್ಯಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ  ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದರು.

2023ರ ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಮೇ.10ರಂದು ನಡೆದ ಮತದಾನದಲ್ಲಿ ಶೇಕಡ 85.06 ರಷ್ಟು ಮತ ಚಲಾವಣೆಯಾಗಿರುತ್ತದೆ.

ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯಲ್ಲಿ ಒಟ್ಟಾರೆ 8,77,890 ಮತದಾರರಿದ್ದು, ಅದರಲ್ಲಿ  4,35,835 ಪುರುಷ ಮತದಾರರು, 4,41,907 ಮಹಿಳಾ ಮತದಾರರು ಹಾಗೂ 148 ಇತರೆ ಮತದಾರರಿದ್ದಾರೆ.

ಒಟ್ಟು 7,46,873(ಶೇ.85.08) ಮತದಾರರು ಮತ ಚಲಾಯಿಸಿದ್ದಾರೆ. ಅದರಲ್ಲಿ 3,74,588 ಪುರುಷ ಮತದಾರರು, 3,72,230 ಮಹಿಳಾ ಮತದಾರರು, 55 ಇತರೆ ಮತದಾರರು ಮತದಾನ ಮಾಡಿದ್ದಾರೆ.

ಮತದಾನ ನಡೆದ 1,137 ಮತಗಟ್ಟೆಗಳ ಇವಿಎಂ ಹಾಗೂ ವಿವಿಪ್ಯಾಟ್ ಯಂತ್ರಗಳನ್ನು ಮತ ಎಣಿಕೆ ಕೇಂದ್ರದ ಭದ್ರತಾ ಕೊಠಡಿಯಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ನಲ್ಲಿ ಇರಿಸಲಾಗಿದೆ.

ಮತ ಎಣಿಕೆ ಕಾರ್ಯವನ್ನು ಮೇ.13ರಂದು ಬೆಳಿಗ್ಗೆ 8 ಗಂಟೆಗೆ ಪ್ರಾರಂಭಿಸಲಾಗುವುದು ಹಾಗೂ ನಾಲ್ಕು ಕೊಠಡಿಯಲ್ಲಿ ನಡೆಸಲಾಗುವುದು. ಮತ ಎಣಿಕೆ ಕಾರ್ಯಗಳು 21 ಹಾಗೂ 20 ಸುತ್ತುಗಳು ನಡೆಯಲಿವೆ.

ಪ್ರತಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯಕ್ಕಾಗಿ 14 ಟೇಬಲ್ ಗಳನ್ನು ನಿಗದಿಪಡಿಸಲಾಗಿದ್ದು, ಪ್ರತಿ ಟೇಬಲ್ ಗೆ ಒಬ್ಬ ಎಣಿಕೆ ಮೇಲ್ವಿಚಾರಕರು, ಎಣಿಕೆ ಸಹಾಯಕರು ಮತ್ತು ಮೈಕ್ರೋ ಅಬ್ಸರ್ವರ್‌ಅನ್ನು ನೇಮಕ ಮಾಡಲಾಗಿದೆ.

ಅಂಚೆ ಮತ ಎಣಿಕೆ ಕಾರ್ಯಕ್ಕಾಗಿ 1 ಪ್ರತ್ಯೇಕ ಟೇಬಲ್ ನ್ನು ನಿಗದಿಪಡಿಸಲಾಗಿದ್ದು, ಸದರಿ ಟೇಬಲ್ ಗೆ ಒಬ್ಬ ಎಣಿಕೆ ಮೇಲ್ವಿಚಾರಕರು, ಎಣಿಕೆ ಸಹಾಯಕರು ಮತ್ತು ಮೈಕ್ರೋ ಅಬ್ಸರ್ವರ್‌ಅನ್ನು ನೇಮಕ ಮಾಡಲಾಗಿದೆ.

130 ಸೇವಾ ಮತದಾರರಿಗೆ ಅಂಚೆ ಮತ ಪತ್ರವನ್ನ ಇಟಿಪಿಬಿಎಸ್ ತಂತ್ರಾಂಶ ಮುಖಾಂತರ ರವಾನಿಸಲಾಗಿದ್ದು, ಸದರಿ ಮತಪತ್ರಗಳ ಎಣಿಕೆ ಕಾರ್ಯವನ್ನು ಮೊದಲು  ಕೈಗೊಳ್ಳಲಾಗುವುದು.

74 ಸಾಮಾನ್ಯ ಮತದಾರರಿಗೆ (ಕರ್ತವ್ಯ ನಿರತ ಚುನಾವಣಾ ಸಿಬ್ಬಂದಿಗೆ) ಅಂಚೆ ಮತ ಪತ್ರವನ್ನು ವಿತರಿಸಲಾಗಿದ್ದು, ಈವರೆಗೆ 74 ಅಂಚೆ ಮತ ಪತ್ರಗಳು ಸ್ವೀಕೃತವಾಗಿವೆ. ಇವಿಯಂ ಯಂತ್ರಗಳ ಮತ ಎಣಿಕೆ ಮುಗಿದ ನಂತರ 5 ಮತಗಟ್ಟೆಗಳ ವಿವಿಪ್ಯಾಟ್ ಯಂತ್ರದಲ್ಲಿರುವ ಸ್ಲಿಪ್‌ಗಳ ಎಣಿಕೆ ಕಾರ್ಯವನ್ನು ನಡೆಸಲಾಗುವುದು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 56 ಅಭ್ಯರ್ಥಿಗಳಿದ್ದು ಮತ ಎಣಿಕೆ ಕಾರ್ಯ ನಡೆಯಲಿದೆ.

ಮತ ಎಣಿಕೆ ಕೇಂದ್ರದಲ್ಲಿ ಚುನಾವಣಾ ವೀಕ್ಷಕರು, ಮಾಧ್ಯಮ ಪ್ರತಿನಿಧಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ.

ಮತ ಎಣಿಕೆ ಕಾರ್ಯವು ಎಂಕೋರ್ ತಂತ್ರಾಂಶ ಮುಖಾಂತರ ನಡೆಯಲಿದ್ದು, ಮತ ಎಣಿಕೆ ಕೇಂದ್ರದಲ್ಲಿ ಸೂಕ್ತ ಮೂಲಭೂತ ಸೌಕರ್ಯಗಳ ಏರ್ಪಾಟು ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಮಾಹಿತಿ ನೀಡಿದ್ದಾರೆ.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

44 minutes ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

8 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

9 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

24 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago