ಮತ ಎಣಿಕೆ ದಿನದಂದು ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಜಿಲ್ಲಾ ವ್ಯಾಪ್ತಿಯಲ್ಲಿ ಸಿ.ಆರ್.ಪಿ.ಸಿ. ಕಲಂ 144ರನ್ವಯ ಮೇ.10 ರಿಂದ ಮೇ.14 ರ ಮಧ್ಯರಾತ್ರಿ 12.00 ಗಂಟೆಯವರೆಗೆ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.
ಮೆರವಣಿಗೆ ಮಾಡುವುದನ್ನು, ಯಾವುದೇ ರೀತಿಯ ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದನ್ನು, ಸಿಡಿಮದ್ದು, ಪಟಾಕಿ ಸೇರಿದಂತೆ ಸ್ಫೋಟಕ ವಸ್ತುಗಳನ್ನು ಉಪಯೋಗಿಸುವುದನ್ನು ನಿಷೇಧಿಸಿ, ಭಾರತೀಯ ದಂಡ ಸಂಹಿತೆ ಕಲಂ 144 ರನ್ವಯ ಮತ ಎಣಿಕೆ ಕೇಂದ್ರದ ಸುತ್ತಲು ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಲಾಗಿದೆ.
ಮತ ಎಣಿಕೆ ಕಾರ್ಯ ಶಾಂತಿಯುತವಾಗಿ ನಡೆಯಲು ಮತ ಎಣಿಕೆ ಕೇಂದ್ರದ ಸುತ್ತ ಹಾಗೂ ಮತ ಎಣಿಕೆ ಕೇಂದ್ರದ ಒಳಗೆ 2 ಎಸಿಪಿ, 9 ಇನ್ಸ್ಪೆಕ್ಟರ್ 29 ಜನ ಪಿಎಸ್ಐ ಹಾಗೂ 250 ಪೊಲೀಸ್ ಸಿಬ್ಬಂದಿಗಳನ್ನು ಹಾಗೂ 3 ಕೆಎಸ್ ಆರ್ ಪಿ ತುಕಡಿ ಮತ್ತು 2 ಕಂಪನಿ ಬಿಎಸ್ಎಫ್ ನ್ನು ನಿಯೋಜಿಸಲಾಗಿದೆ.
ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿದ್ದೇವೆ ಎಂದು ಬೆಂಗಳೂರು ಈಶಾನ್ಯ ವಿಭಾಗದ ಡಿಸಿಪಿ ಲಕ್ಷ್ಮಿ ಪ್ರಸಾದ್ ಅವರು ತಿಳಿಸಿದ್ದಾರೆ.
ಜೊತೆಗೆ ಮೇ.13 ರಂದು ಮತ ಎಣಿಕೆ ನಡೆಯಲಿರುವ ಹಿನ್ನೆಲೆ, ಮುಕ್ತ, ಶಾಂತಿಯುತ ಮತ್ತು ನ್ಯಾಯಸಮ್ಮತ ಮತ ಎಣಿಕೆ ನಡೆಸಲು ಜಿಲ್ಲೆಯಾದ್ಯಂತ ಮದ್ಯ ಸಾಗಾಣಿಕೆ, ವಿತರಣೆ ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ.
ಈ ಕುರಿತಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ಆದೇಶದ ಮೇರೆಗೆ, ಮೇ.13 ರಂದು ಬೆಳಗ್ಗೆ 6.00 ಗಂಟೆಯಿಂದ ಮೇ 14ರ ಬೆಳಿಗ್ಗೆ 6.00 ಗಂಟೆಯವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಮದ್ಯ ಸಾಗಾಣಿಕೆ, ವಿತರಣೆ ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…