ಮತ ಎಣಿಕೆ ದಿನದಂದು ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಜಿಲ್ಲಾ ವ್ಯಾಪ್ತಿಯಲ್ಲಿ ಸಿ.ಆರ್.ಪಿ.ಸಿ. ಕಲಂ 144ರನ್ವಯ ಮೇ.10 ರಿಂದ ಮೇ.14 ರ ಮಧ್ಯರಾತ್ರಿ 12.00 ಗಂಟೆಯವರೆಗೆ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.
ಮೆರವಣಿಗೆ ಮಾಡುವುದನ್ನು, ಯಾವುದೇ ರೀತಿಯ ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದನ್ನು, ಸಿಡಿಮದ್ದು, ಪಟಾಕಿ ಸೇರಿದಂತೆ ಸ್ಫೋಟಕ ವಸ್ತುಗಳನ್ನು ಉಪಯೋಗಿಸುವುದನ್ನು ನಿಷೇಧಿಸಿ, ಭಾರತೀಯ ದಂಡ ಸಂಹಿತೆ ಕಲಂ 144 ರನ್ವಯ ಮತ ಎಣಿಕೆ ಕೇಂದ್ರದ ಸುತ್ತಲು ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಲಾಗಿದೆ.
ಮತ ಎಣಿಕೆ ಕಾರ್ಯ ಶಾಂತಿಯುತವಾಗಿ ನಡೆಯಲು ಮತ ಎಣಿಕೆ ಕೇಂದ್ರದ ಸುತ್ತ ಹಾಗೂ ಮತ ಎಣಿಕೆ ಕೇಂದ್ರದ ಒಳಗೆ 2 ಎಸಿಪಿ, 9 ಇನ್ಸ್ಪೆಕ್ಟರ್ 29 ಜನ ಪಿಎಸ್ಐ ಹಾಗೂ 250 ಪೊಲೀಸ್ ಸಿಬ್ಬಂದಿಗಳನ್ನು ಹಾಗೂ 3 ಕೆಎಸ್ ಆರ್ ಪಿ ತುಕಡಿ ಮತ್ತು 2 ಕಂಪನಿ ಬಿಎಸ್ಎಫ್ ನ್ನು ನಿಯೋಜಿಸಲಾಗಿದೆ.
ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿದ್ದೇವೆ ಎಂದು ಬೆಂಗಳೂರು ಈಶಾನ್ಯ ವಿಭಾಗದ ಡಿಸಿಪಿ ಲಕ್ಷ್ಮಿ ಪ್ರಸಾದ್ ಅವರು ತಿಳಿಸಿದ್ದಾರೆ.
ಜೊತೆಗೆ ಮೇ.13 ರಂದು ಮತ ಎಣಿಕೆ ನಡೆಯಲಿರುವ ಹಿನ್ನೆಲೆ, ಮುಕ್ತ, ಶಾಂತಿಯುತ ಮತ್ತು ನ್ಯಾಯಸಮ್ಮತ ಮತ ಎಣಿಕೆ ನಡೆಸಲು ಜಿಲ್ಲೆಯಾದ್ಯಂತ ಮದ್ಯ ಸಾಗಾಣಿಕೆ, ವಿತರಣೆ ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ.
ಈ ಕುರಿತಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ಆದೇಶದ ಮೇರೆಗೆ, ಮೇ.13 ರಂದು ಬೆಳಗ್ಗೆ 6.00 ಗಂಟೆಯಿಂದ ಮೇ 14ರ ಬೆಳಿಗ್ಗೆ 6.00 ಗಂಟೆಯವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಮದ್ಯ ಸಾಗಾಣಿಕೆ, ವಿತರಣೆ ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ.
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…