ಮತ ಎಣಿಕೆ ದಿನದಂದು ಶಾಂತಿ ಸುವ್ಯವಸ್ಥೆ ಕಾಪಾಡಲು ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ: ಜೊತೆಗೆ ಮದ್ಯ ಮಾರಾಟ ನಿಷೇಧ

ಮತ ಎಣಿಕೆ ದಿನದಂದು ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಜಿಲ್ಲಾ ವ್ಯಾಪ್ತಿಯಲ್ಲಿ ಸಿ.ಆರ್.ಪಿ.ಸಿ. ಕಲಂ 144ರನ್ವಯ ಮೇ.10 ರಿಂದ ಮೇ.14 ರ ಮಧ್ಯರಾತ್ರಿ 12.00 ಗಂಟೆಯವರೆಗೆ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.

ಮೆರವಣಿಗೆ ಮಾಡುವುದನ್ನು, ಯಾವುದೇ ರೀತಿಯ ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದನ್ನು, ಸಿಡಿಮದ್ದು, ಪಟಾಕಿ ಸೇರಿದಂತೆ ಸ್ಫೋಟಕ ವಸ್ತುಗಳನ್ನು ಉಪಯೋಗಿಸುವುದನ್ನು ನಿಷೇಧಿಸಿ, ಭಾರತೀಯ ದಂಡ ಸಂಹಿತೆ ಕಲಂ 144 ರನ್ವಯ ಮತ ಎಣಿಕೆ ಕೇಂದ್ರದ ಸುತ್ತಲು ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಲಾಗಿದೆ.

ಮತ ಎಣಿಕೆ ಕಾರ್ಯ ಶಾಂತಿಯುತವಾಗಿ ನಡೆಯಲು ಮತ ಎಣಿಕೆ ಕೇಂದ್ರದ ಸುತ್ತ ಹಾಗೂ ಮತ ಎಣಿಕೆ ಕೇಂದ್ರದ ಒಳಗೆ 2 ಎಸಿಪಿ, 9 ಇನ್ಸ್‌ಪೆಕ್ಟರ್ 29 ಜನ ಪಿಎಸ್ಐ ಹಾಗೂ 250 ಪೊಲೀಸ್ ಸಿಬ್ಬಂದಿಗಳನ್ನು ಹಾಗೂ 3 ಕೆಎಸ್ ಆರ್ ಪಿ ತುಕಡಿ ಮತ್ತು 2 ಕಂಪನಿ ಬಿಎಸ್ಎಫ್ ನ್ನು ನಿಯೋಜಿಸಲಾಗಿದೆ.

ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿದ್ದೇವೆ ಎಂದು ಬೆಂಗಳೂರು ಈಶಾನ್ಯ ವಿಭಾಗದ ಡಿಸಿಪಿ ಲಕ್ಷ್ಮಿ ಪ್ರಸಾದ್ ಅವರು ತಿಳಿಸಿದ್ದಾರೆ.

ಜೊತೆಗೆ ಮೇ.13 ರಂದು ಮತ ಎಣಿಕೆ ನಡೆಯಲಿರುವ ಹಿನ್ನೆಲೆ, ಮುಕ್ತ, ಶಾಂತಿಯುತ ಮತ್ತು ನ್ಯಾಯಸಮ್ಮತ ಮತ ಎಣಿಕೆ ನಡೆಸಲು ಜಿಲ್ಲೆಯಾದ್ಯಂತ ಮದ್ಯ ಸಾಗಾಣಿಕೆ, ವಿತರಣೆ ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ.

ಈ ಕುರಿತಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ಆದೇಶದ ಮೇರೆಗೆ, ಮೇ.13 ರಂದು ಬೆಳಗ್ಗೆ 6.00 ಗಂಟೆಯಿಂದ ಮೇ 14ರ ಬೆಳಿಗ್ಗೆ 6.00 ಗಂಟೆಯವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಮದ್ಯ ಸಾಗಾಣಿಕೆ, ವಿತರಣೆ ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ.

Ramesh Babu

Journalist

Recent Posts

ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ…..?

ಪಟಾಕಿ ದುರಂತಕ್ಕೆ ಯಾರು ಹೊಣೆ.... ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ..... ಲೇಸರ್…

1 hour ago

ನಾಳೆ (ಏ.23ರಂದು) ವಿವಿಧ ಊರುಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.23 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F09-Rajaghatta, F03-Thalagavara, F12-Heggadihalli, F17- Nandi…

2 hours ago

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

14 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

16 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

16 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

17 hours ago