Categories: ಕೋಲಾರ

ಮತ ಕಳ್ಳತನ: ಬಿಜೆಪಿ, ಆಯೋಗ ಶಾಮೀಲು- ಶಾಸಕ ಕೊತ್ತೂರು ಮಂಜುನಾಥ್ ಆರೋಪ

ಕೋಲಾರ: ಒಂದೇ ಮನೆಯಲ್ಲಿ ಸುಮಾರು 10 ಸಾವಿರ ಜನರ ಇದ್ದಾರೆ ಅಂತ ವಿಳಾಸ ತೋರಿಸ್ತಿದ್ದಾರೆ. ಇದು ಹೇಗೆ ಸಾಧ್ಯ? ಮತಗಳ್ಳತನ ನಡೆದಿರುವುದು ಇದರಿಂದಲೇ ತಿಳಿಯುತ್ತದೆ ಮತಗಳ್ಳತನದ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಕೊತ್ತೂರು ಮಂಜುನಾಥ್ ಆಗ್ರಹಿಸಿದರು.

ನಗರದ ಹೊಸ ಬಸ್ ನಿಲ್ದಾಣ ಬಳಿ
ಬಿಜೆಪಿ ಸರ್ಕಾರದ ಏಜೆಂಟ್ ನಂತೆ ವರ್ತಿಸುತ್ತಿರುವ ಚುನಾವಣಾ ಆಯೋಗದ ಮತ ಕಳ್ಳತನ ವಿರುದ್ಧ ಪ್ರತಿಭಟನೆ ಮಾಡಿ ಸಹಿ ಸಂಗ್ರಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಅಂಬೇಡ್ಕರ್ ಕೊಟ್ಟಿರುವ ಸಂವಿಧಾನವನ್ನು ಬಿಜೆಪಿ ಅನುಸರಿಸಿದ್ದಾರಾ ದೇಶದಲ್ಲಿ ಬಿಜೆಪಿಯವರು ಮತಗಳ್ಳತನದ ಮೂಲಕ ಗೆದ್ದಿದ್ದಾರೆ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಚುನಾವಣಾ ಆಯೋಗಕ್ಕೆ ಮತಗಳ್ಳತನ ಆಗಿದೆ ಎಂದು ದೂರು ನೀಡಿದರೆ, ಮತಗಳ್ಳತನ ಆಗಿಲ್ಲ ಕ್ಷಮಾಪಣೆ ಕೇಳಬೇಕು ಅಂತಾರೆ. ಇಂತಹ ಅನ್ಯಾಯಗಳು ನಮ್ಮ ದೇಶದಲ್ಲಿ ನಡೆಯುತ್ತಿವೆ. ಮತಗಳ್ಳತನ ಮಾಡಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಳ್ಳಿ ಹಳ್ಳಿಗೂ ಹೋಗಿ ಮತಗಳ್ಳತನದ ಬಗ್ಗೆ ಮಾಹಿತಿ ನೀಡಬೇಕು ಎಂದರು.

ಚುನಾವಣಾ ಆಯೋಗ ಬಿಜೆಪಿಯ ಅಂಗಸಂಸ್ಥೆಯಂತೆ ಕೆಲಸ ಮಾಡುತ್ತಿದೆ. ಪರಿಣಾಮ ಇಡೀ ದೇಶದ ಚುನಾವಣಾ ಪ್ರಕ್ರಿಯೆಯೇ ಬುಡಮೇಲಾಗಿದೆ. ಚುನಾವಣಾ ವ್ಯವಸ್ಥೆಯಲ್ಲೇ ಅಕ್ರಮ ಎಸಗಿಬಿಟ್ಟರೆ ಬಿಜೆಪಿಯ ಗೆಲುವು ಸುಲಭ. ಹೀಗಾಗಿ ಚುನಾವಣಾ ಆಯೋಗ ಮತ್ತು ಬಿಜೆಪಿ ಜಂಟಿಯಾಗಿಯೇ ಈ ಅಕ್ರಮದಲ್ಲಿ ಶಾಮೀಲಾಗಿದೆ ಮತದಾರರ ಪಟ್ಟಿ ನಿರ್ವಹಣೆಯಲ್ಲಿ ಅಕ್ರಮವಾಗದಂತೆ ನೋಡಿಕೊಳ್ಳುವುದು ಆಯೋಗದ ಮೊದಲ ಕರ್ತವ್ಯ. ಆದರೆ ಮಹದೇವಪುರ ಕ್ಷೇತ್ರದ ಮತದಾರರ ಪಟ್ಟಿಯಲ್ಲೇ ಚುನಾವಣಾ ಆಯೋಗ ಎಷ್ಟು ಅಕ್ರಮ ಎಸಗಿದೆ ಎಂಬುದು ಗೊತ್ತಾಗುತ್ತದೆ ಎಂದರು

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಒಂದು ಮತಕ್ಕೆ 80 ರೂಪಾಯಿ ಕೊಟ್ಟು 6000 ಸಾವಿರ ಮತಗಳನ್ನು ಖರೀದಿ ಮಾಡಿರುವ ಸತ್ಯ ತನಿಖೆಯಿಂದ ಹೊರಬಂದಿದೆ. ಚುನಾವಣಾ ಆಯೋಗ ಪಕ್ಷಾತೀತವಾಗಿ ಕೆಲಸ ಮಾಡಬೇಕು. ಒಂದು ಪಕ್ಷದ ಏಜೆಂಟ್ ರೀತಿ ಕೆಲಸ ಮಾಡಬಾರದು ಯಾವುದೋ ಒಂದು ಸರ್ಕಾರದ ಪರ ಕೆಲಸ ಮಾಡುವುದಲ್ಲ ಸಿಬಿಐ, ಇಡಿ, ಚುನಾವಣಾ ಆಯೋಗ ಸೇರಿ ಎಲ್ಲದರಲ್ಲೂ ರಾಜಕೀಯಕರಣಗೊಳಿಸಿದ್ದಾರೆ ಜೊತೆಗೆ ಸುಪ್ರೀಂಕೋರ್ಟ್ ಅನ್ನು ಸಹ ಬೇರೆ ದೃಷ್ಟಿಯಲ್ಲಿ ನೋಡುವ ಹಾಗೆ ಇಟ್ಟಿದ್ದಾರೆ. ಈ ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯಬೇಕಾದರೆ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕು ಎಂದರು.

ಈ ಸಂದರ್ಭದಲ್ಲಿ ಮಾಜಿ ಸಭಾಪತಿ ವಿ.ಆರ್ ಸುದರ್ಶನ್, ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೌತಮ್, ಜಿಲ್ಲಾಧ್ಯಕ್ಷ ಲಕ್ಷ್ಮೀನಾರಾಯಣ್, ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್, ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ನಗರ ಬ್ಲಾಕ್ ಅಧ್ಯಕ್ಷ ಸೈಯದ್ ಅಫ್ಸರ್, ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಉಪಾಧ್ಯಕ್ಷೆ ಸಂಗೀತ, ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

17 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

22 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

2 days ago