Categories: ಕೋಲಾರ

ಮತ ಕಳ್ಳತನ: ಬಿಜೆಪಿ, ಆಯೋಗ ಶಾಮೀಲು- ಶಾಸಕ ಕೊತ್ತೂರು ಮಂಜುನಾಥ್ ಆರೋಪ

ಕೋಲಾರ: ಒಂದೇ ಮನೆಯಲ್ಲಿ ಸುಮಾರು 10 ಸಾವಿರ ಜನರ ಇದ್ದಾರೆ ಅಂತ ವಿಳಾಸ ತೋರಿಸ್ತಿದ್ದಾರೆ. ಇದು ಹೇಗೆ ಸಾಧ್ಯ? ಮತಗಳ್ಳತನ ನಡೆದಿರುವುದು ಇದರಿಂದಲೇ ತಿಳಿಯುತ್ತದೆ ಮತಗಳ್ಳತನದ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಕೊತ್ತೂರು ಮಂಜುನಾಥ್ ಆಗ್ರಹಿಸಿದರು.

ನಗರದ ಹೊಸ ಬಸ್ ನಿಲ್ದಾಣ ಬಳಿ
ಬಿಜೆಪಿ ಸರ್ಕಾರದ ಏಜೆಂಟ್ ನಂತೆ ವರ್ತಿಸುತ್ತಿರುವ ಚುನಾವಣಾ ಆಯೋಗದ ಮತ ಕಳ್ಳತನ ವಿರುದ್ಧ ಪ್ರತಿಭಟನೆ ಮಾಡಿ ಸಹಿ ಸಂಗ್ರಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಅಂಬೇಡ್ಕರ್ ಕೊಟ್ಟಿರುವ ಸಂವಿಧಾನವನ್ನು ಬಿಜೆಪಿ ಅನುಸರಿಸಿದ್ದಾರಾ ದೇಶದಲ್ಲಿ ಬಿಜೆಪಿಯವರು ಮತಗಳ್ಳತನದ ಮೂಲಕ ಗೆದ್ದಿದ್ದಾರೆ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಚುನಾವಣಾ ಆಯೋಗಕ್ಕೆ ಮತಗಳ್ಳತನ ಆಗಿದೆ ಎಂದು ದೂರು ನೀಡಿದರೆ, ಮತಗಳ್ಳತನ ಆಗಿಲ್ಲ ಕ್ಷಮಾಪಣೆ ಕೇಳಬೇಕು ಅಂತಾರೆ. ಇಂತಹ ಅನ್ಯಾಯಗಳು ನಮ್ಮ ದೇಶದಲ್ಲಿ ನಡೆಯುತ್ತಿವೆ. ಮತಗಳ್ಳತನ ಮಾಡಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಳ್ಳಿ ಹಳ್ಳಿಗೂ ಹೋಗಿ ಮತಗಳ್ಳತನದ ಬಗ್ಗೆ ಮಾಹಿತಿ ನೀಡಬೇಕು ಎಂದರು.

ಚುನಾವಣಾ ಆಯೋಗ ಬಿಜೆಪಿಯ ಅಂಗಸಂಸ್ಥೆಯಂತೆ ಕೆಲಸ ಮಾಡುತ್ತಿದೆ. ಪರಿಣಾಮ ಇಡೀ ದೇಶದ ಚುನಾವಣಾ ಪ್ರಕ್ರಿಯೆಯೇ ಬುಡಮೇಲಾಗಿದೆ. ಚುನಾವಣಾ ವ್ಯವಸ್ಥೆಯಲ್ಲೇ ಅಕ್ರಮ ಎಸಗಿಬಿಟ್ಟರೆ ಬಿಜೆಪಿಯ ಗೆಲುವು ಸುಲಭ. ಹೀಗಾಗಿ ಚುನಾವಣಾ ಆಯೋಗ ಮತ್ತು ಬಿಜೆಪಿ ಜಂಟಿಯಾಗಿಯೇ ಈ ಅಕ್ರಮದಲ್ಲಿ ಶಾಮೀಲಾಗಿದೆ ಮತದಾರರ ಪಟ್ಟಿ ನಿರ್ವಹಣೆಯಲ್ಲಿ ಅಕ್ರಮವಾಗದಂತೆ ನೋಡಿಕೊಳ್ಳುವುದು ಆಯೋಗದ ಮೊದಲ ಕರ್ತವ್ಯ. ಆದರೆ ಮಹದೇವಪುರ ಕ್ಷೇತ್ರದ ಮತದಾರರ ಪಟ್ಟಿಯಲ್ಲೇ ಚುನಾವಣಾ ಆಯೋಗ ಎಷ್ಟು ಅಕ್ರಮ ಎಸಗಿದೆ ಎಂಬುದು ಗೊತ್ತಾಗುತ್ತದೆ ಎಂದರು

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಒಂದು ಮತಕ್ಕೆ 80 ರೂಪಾಯಿ ಕೊಟ್ಟು 6000 ಸಾವಿರ ಮತಗಳನ್ನು ಖರೀದಿ ಮಾಡಿರುವ ಸತ್ಯ ತನಿಖೆಯಿಂದ ಹೊರಬಂದಿದೆ. ಚುನಾವಣಾ ಆಯೋಗ ಪಕ್ಷಾತೀತವಾಗಿ ಕೆಲಸ ಮಾಡಬೇಕು. ಒಂದು ಪಕ್ಷದ ಏಜೆಂಟ್ ರೀತಿ ಕೆಲಸ ಮಾಡಬಾರದು ಯಾವುದೋ ಒಂದು ಸರ್ಕಾರದ ಪರ ಕೆಲಸ ಮಾಡುವುದಲ್ಲ ಸಿಬಿಐ, ಇಡಿ, ಚುನಾವಣಾ ಆಯೋಗ ಸೇರಿ ಎಲ್ಲದರಲ್ಲೂ ರಾಜಕೀಯಕರಣಗೊಳಿಸಿದ್ದಾರೆ ಜೊತೆಗೆ ಸುಪ್ರೀಂಕೋರ್ಟ್ ಅನ್ನು ಸಹ ಬೇರೆ ದೃಷ್ಟಿಯಲ್ಲಿ ನೋಡುವ ಹಾಗೆ ಇಟ್ಟಿದ್ದಾರೆ. ಈ ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯಬೇಕಾದರೆ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕು ಎಂದರು.

ಈ ಸಂದರ್ಭದಲ್ಲಿ ಮಾಜಿ ಸಭಾಪತಿ ವಿ.ಆರ್ ಸುದರ್ಶನ್, ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೌತಮ್, ಜಿಲ್ಲಾಧ್ಯಕ್ಷ ಲಕ್ಷ್ಮೀನಾರಾಯಣ್, ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್, ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ನಗರ ಬ್ಲಾಕ್ ಅಧ್ಯಕ್ಷ ಸೈಯದ್ ಅಫ್ಸರ್, ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಉಪಾಧ್ಯಕ್ಷೆ ಸಂಗೀತ, ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

17 hours ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

1 day ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

2 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

2 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

3 days ago