Categories: ಕೋಲಾರ

ಮತ ಕಳ್ಳತನ: ಬಿಜೆಪಿ, ಆಯೋಗ ಶಾಮೀಲು- ಶಾಸಕ ಕೊತ್ತೂರು ಮಂಜುನಾಥ್ ಆರೋಪ

ಕೋಲಾರ: ಒಂದೇ ಮನೆಯಲ್ಲಿ ಸುಮಾರು 10 ಸಾವಿರ ಜನರ ಇದ್ದಾರೆ ಅಂತ ವಿಳಾಸ ತೋರಿಸ್ತಿದ್ದಾರೆ. ಇದು ಹೇಗೆ ಸಾಧ್ಯ? ಮತಗಳ್ಳತನ ನಡೆದಿರುವುದು ಇದರಿಂದಲೇ ತಿಳಿಯುತ್ತದೆ ಮತಗಳ್ಳತನದ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಕೊತ್ತೂರು ಮಂಜುನಾಥ್ ಆಗ್ರಹಿಸಿದರು.

ನಗರದ ಹೊಸ ಬಸ್ ನಿಲ್ದಾಣ ಬಳಿ
ಬಿಜೆಪಿ ಸರ್ಕಾರದ ಏಜೆಂಟ್ ನಂತೆ ವರ್ತಿಸುತ್ತಿರುವ ಚುನಾವಣಾ ಆಯೋಗದ ಮತ ಕಳ್ಳತನ ವಿರುದ್ಧ ಪ್ರತಿಭಟನೆ ಮಾಡಿ ಸಹಿ ಸಂಗ್ರಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಅಂಬೇಡ್ಕರ್ ಕೊಟ್ಟಿರುವ ಸಂವಿಧಾನವನ್ನು ಬಿಜೆಪಿ ಅನುಸರಿಸಿದ್ದಾರಾ ದೇಶದಲ್ಲಿ ಬಿಜೆಪಿಯವರು ಮತಗಳ್ಳತನದ ಮೂಲಕ ಗೆದ್ದಿದ್ದಾರೆ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಚುನಾವಣಾ ಆಯೋಗಕ್ಕೆ ಮತಗಳ್ಳತನ ಆಗಿದೆ ಎಂದು ದೂರು ನೀಡಿದರೆ, ಮತಗಳ್ಳತನ ಆಗಿಲ್ಲ ಕ್ಷಮಾಪಣೆ ಕೇಳಬೇಕು ಅಂತಾರೆ. ಇಂತಹ ಅನ್ಯಾಯಗಳು ನಮ್ಮ ದೇಶದಲ್ಲಿ ನಡೆಯುತ್ತಿವೆ. ಮತಗಳ್ಳತನ ಮಾಡಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಳ್ಳಿ ಹಳ್ಳಿಗೂ ಹೋಗಿ ಮತಗಳ್ಳತನದ ಬಗ್ಗೆ ಮಾಹಿತಿ ನೀಡಬೇಕು ಎಂದರು.

ಚುನಾವಣಾ ಆಯೋಗ ಬಿಜೆಪಿಯ ಅಂಗಸಂಸ್ಥೆಯಂತೆ ಕೆಲಸ ಮಾಡುತ್ತಿದೆ. ಪರಿಣಾಮ ಇಡೀ ದೇಶದ ಚುನಾವಣಾ ಪ್ರಕ್ರಿಯೆಯೇ ಬುಡಮೇಲಾಗಿದೆ. ಚುನಾವಣಾ ವ್ಯವಸ್ಥೆಯಲ್ಲೇ ಅಕ್ರಮ ಎಸಗಿಬಿಟ್ಟರೆ ಬಿಜೆಪಿಯ ಗೆಲುವು ಸುಲಭ. ಹೀಗಾಗಿ ಚುನಾವಣಾ ಆಯೋಗ ಮತ್ತು ಬಿಜೆಪಿ ಜಂಟಿಯಾಗಿಯೇ ಈ ಅಕ್ರಮದಲ್ಲಿ ಶಾಮೀಲಾಗಿದೆ ಮತದಾರರ ಪಟ್ಟಿ ನಿರ್ವಹಣೆಯಲ್ಲಿ ಅಕ್ರಮವಾಗದಂತೆ ನೋಡಿಕೊಳ್ಳುವುದು ಆಯೋಗದ ಮೊದಲ ಕರ್ತವ್ಯ. ಆದರೆ ಮಹದೇವಪುರ ಕ್ಷೇತ್ರದ ಮತದಾರರ ಪಟ್ಟಿಯಲ್ಲೇ ಚುನಾವಣಾ ಆಯೋಗ ಎಷ್ಟು ಅಕ್ರಮ ಎಸಗಿದೆ ಎಂಬುದು ಗೊತ್ತಾಗುತ್ತದೆ ಎಂದರು

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಒಂದು ಮತಕ್ಕೆ 80 ರೂಪಾಯಿ ಕೊಟ್ಟು 6000 ಸಾವಿರ ಮತಗಳನ್ನು ಖರೀದಿ ಮಾಡಿರುವ ಸತ್ಯ ತನಿಖೆಯಿಂದ ಹೊರಬಂದಿದೆ. ಚುನಾವಣಾ ಆಯೋಗ ಪಕ್ಷಾತೀತವಾಗಿ ಕೆಲಸ ಮಾಡಬೇಕು. ಒಂದು ಪಕ್ಷದ ಏಜೆಂಟ್ ರೀತಿ ಕೆಲಸ ಮಾಡಬಾರದು ಯಾವುದೋ ಒಂದು ಸರ್ಕಾರದ ಪರ ಕೆಲಸ ಮಾಡುವುದಲ್ಲ ಸಿಬಿಐ, ಇಡಿ, ಚುನಾವಣಾ ಆಯೋಗ ಸೇರಿ ಎಲ್ಲದರಲ್ಲೂ ರಾಜಕೀಯಕರಣಗೊಳಿಸಿದ್ದಾರೆ ಜೊತೆಗೆ ಸುಪ್ರೀಂಕೋರ್ಟ್ ಅನ್ನು ಸಹ ಬೇರೆ ದೃಷ್ಟಿಯಲ್ಲಿ ನೋಡುವ ಹಾಗೆ ಇಟ್ಟಿದ್ದಾರೆ. ಈ ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯಬೇಕಾದರೆ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕು ಎಂದರು.

ಈ ಸಂದರ್ಭದಲ್ಲಿ ಮಾಜಿ ಸಭಾಪತಿ ವಿ.ಆರ್ ಸುದರ್ಶನ್, ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೌತಮ್, ಜಿಲ್ಲಾಧ್ಯಕ್ಷ ಲಕ್ಷ್ಮೀನಾರಾಯಣ್, ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್, ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ನಗರ ಬ್ಲಾಕ್ ಅಧ್ಯಕ್ಷ ಸೈಯದ್ ಅಫ್ಸರ್, ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಉಪಾಧ್ಯಕ್ಷೆ ಸಂಗೀತ, ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

1 hour ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

7 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

21 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

22 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

23 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

23 hours ago