ತಾಲ್ಲೂಕಿನ ಮದಗೊಂಡನಹಳ್ಳಿ ಗ್ರಾಮದ ಸರಹದ್ದಿನ ಅರಣ್ಯದ ಅಂಚಿನಲ್ಲಿ ಭಾನುವಾರ ಸಂಜೆ ಚಿರತೆ ಕಾಣಿಸಿಕೊಂಡಿದೆ. ಮದಗೊಂಡನಹಳ್ಳಿ ಗ್ರಾಮದ ಚಂದ್ರಪ್ಪ ಎಂಬುವವರಿಗೆ ಸೇರಿದ್ದ ಮೇಕೆ ಹಿಂಡಿನ ಮೇಲೆ ದಾಳಿ ನಡೆಸಿ ಒಂದು ಮೇಕೆಯನ್ನು ಹೊತ್ತೊಯ್ದಿದೆ. ಇದರಿಂದಾಗಿ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.
ಇದರಿಂದಾಗಿ ಸಂಜೆ ವೇಳೆ ರೈತರು ತೋಟಗಳ ಕಡೆಗೆ ಹೋಗಲು ಭಯಪಡುವಂತಾಗಿದೆ ಎಂದು ಮದಗೊಂಡನಹಳ್ಳಿ ಗ್ರಾಮದ ರೈತ ಮಂಜುನಾಥ್ ತಿಳಿಸಿದ್ದಾರೆ.
ಮದಗೊಂಡನಹಳ್ಳಿ ಗ್ರಾಮಕ್ಕೆ ಎರಡು ಕಿ.ಮೀ ದೂರದ ನರಸಯ್ಯನ ಅಗ್ರಹಾರ ಗ್ರಾಮದಲ್ಲಿ ಮೂರು ದಿನಗಳ ಹಿಂದೆಯಷ್ಟೇ ಚಿರತೆಯು ಮೇಕೆ ಹಿಂಡಿನ ಮೇಲೆ ದಾಳಿ ನಡೆಸಿ ಎರಡು ಮೇಕೆಗಳನ್ನು ಬಲಿಪಡೆದಿತ್ತು.
ಈಗ ಮದಗೊಂಡನಹಳ್ಳಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿರುವುದರಿಂದ ಚಿರತೆ ಈ ಭಾಗದಲ್ಲಿಯೇ ಸಂಚರಿಸುತ್ತಿದೆ ಆದ್ದರಿಂದ ಅರಣ್ಯ ಇಲಾಖೆ ಚಿರತೆಯನ್ನು ಸೆರೆ ಹಿಡಿಯಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಆಕೆ ತಂದೆ ತಾಯಿಗೆ ಇದ್ದ ಏಕೈಕ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ. ಮಗಳು ಚೆನ್ನಾಗಿ…
ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…
ಸಬ್ ಇನ್ಸ್ಪೆಕ್ಟರ್ ಡ್ರೆಸ್ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…