ತಾಲ್ಲೂಕಿನ ಮದಗೊಂಡನಹಳ್ಳಿ ಗ್ರಾಮದ ಸರಹದ್ದಿನ ಅರಣ್ಯದ ಅಂಚಿನಲ್ಲಿ ಭಾನುವಾರ ಸಂಜೆ ಚಿರತೆ ಕಾಣಿಸಿಕೊಂಡಿದೆ. ಮದಗೊಂಡನಹಳ್ಳಿ ಗ್ರಾಮದ ಚಂದ್ರಪ್ಪ ಎಂಬುವವರಿಗೆ ಸೇರಿದ್ದ ಮೇಕೆ ಹಿಂಡಿನ ಮೇಲೆ ದಾಳಿ ನಡೆಸಿ ಒಂದು ಮೇಕೆಯನ್ನು ಹೊತ್ತೊಯ್ದಿದೆ. ಇದರಿಂದಾಗಿ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.
ಇದರಿಂದಾಗಿ ಸಂಜೆ ವೇಳೆ ರೈತರು ತೋಟಗಳ ಕಡೆಗೆ ಹೋಗಲು ಭಯಪಡುವಂತಾಗಿದೆ ಎಂದು ಮದಗೊಂಡನಹಳ್ಳಿ ಗ್ರಾಮದ ರೈತ ಮಂಜುನಾಥ್ ತಿಳಿಸಿದ್ದಾರೆ.
ಮದಗೊಂಡನಹಳ್ಳಿ ಗ್ರಾಮಕ್ಕೆ ಎರಡು ಕಿ.ಮೀ ದೂರದ ನರಸಯ್ಯನ ಅಗ್ರಹಾರ ಗ್ರಾಮದಲ್ಲಿ ಮೂರು ದಿನಗಳ ಹಿಂದೆಯಷ್ಟೇ ಚಿರತೆಯು ಮೇಕೆ ಹಿಂಡಿನ ಮೇಲೆ ದಾಳಿ ನಡೆಸಿ ಎರಡು ಮೇಕೆಗಳನ್ನು ಬಲಿಪಡೆದಿತ್ತು.
ಈಗ ಮದಗೊಂಡನಹಳ್ಳಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿರುವುದರಿಂದ ಚಿರತೆ ಈ ಭಾಗದಲ್ಲಿಯೇ ಸಂಚರಿಸುತ್ತಿದೆ ಆದ್ದರಿಂದ ಅರಣ್ಯ ಇಲಾಖೆ ಚಿರತೆಯನ್ನು ಸೆರೆ ಹಿಡಿಯಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…