ಮದಗೊಂಡನಹಳ್ಳಿ ಗ್ರಾಮದಲ್ಲಿ ಬೀದಿ ನಾಯಿಗಳ ಕಾಟ: ಬೇಸತ್ತ ಜನ: ಕ್ಯಾರೇ ಎನ್ನದ ಗ್ರಾಮ ಪಂಚಾಯಿತಿ

ಮದಗೊಂಡನಹಳ್ಳಿ ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರಲ್ಲಿ ಗುಂಪು ಗುಂಪಾಗಿ ಸಂಚರಿಸುವ ಶ್ವಾನಗಳನ್ನು ಕಂಡು ಭಯದಿಂದ ಓಡಾಟ ನಡೆಸುವ ಆತಂಕ ಎದುರಾಗಿದೆ.

ಹಗಲು ರಾತ್ರಿ ಎನ್ನದೆ ಬೊಗಳುತ್ತವೆ. ದ್ವಿಚಕ್ರ ವಾಹನ ಚಾಲಕರು, ವಿದ್ಯಾರ್ಥಿಗಳು ಹಾಗೂ ಮಕ್ಕಳು ದಾರಿಯಲ್ಲಿ ಸಂಚರಿಸುವಾಗ ಕಚ್ಚಲು ಬರುತ್ತಿರುವುದರಿಂದ ಜನತೆ ಭಯದಿಂದ ಓಡಾಡುವಂತಾಗಿದೆ.

ನಾಯಿ ಭಯದಿಂದ ಮಕ್ಕಳು ಶಾಲೆಗೆ ಹೋಗಲು ಹೆದರುತ್ತಿದ್ದಾರೆ. ಬೆಳಗ್ಗೆ ಹಾಗೂ ಸಾಯಂಕಾಲ ಹಾಲಿನ ಡೈರಿಗೆ ಹಾಲು ಹಾಕುವ ರೈತರು ಜೀವ ಭಯದಿಂದ ಬರುತ್ತಾರೆ. ನಾಯಿಗಳ ಹಾವಳಿ ತಪ್ಪಿಸುವಂತೆ ಗ್ರಾಮ ಪಂಚಾಯಿತಿಗೆ ಹಲವು ಬಾರಿ ಮನವಿ ಮಾಡಿದರೂ ಕ್ಯಾರೇ ಎನ್ನದ ಗ್ರಾಪಂನವರು, ಇನ್ನಾದರೂ ಕ್ರಮ ಕೈಗೊಂಡು ನಾಯಿ ಕಾಟದಿಂದ ಮುಕ್ತಿ ಕೊಡಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Ramesh Babu

Journalist

Recent Posts

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು: ವಾರಸುದಾರರ ಪತ್ತೆಗೆ ರೈಲ್ವೆ ಪೊಲೀಸರ ಮನವಿ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯ ಒಡ್ಡರಹಳ್ಳಿ ಮತ್ತು ಮಾಕಳೀದುರ್ಗ ರೈಲು ನಿಲ್ದಾಣಗಳ ನಡುವಿನ ಮಾಕಳಿ ಗೋಶಾಲೆ ಸಮೀಪದ…

13 hours ago

ಪತ್ನಿಯ ಶೀಲ ಶಂಕಿಸಿ ಗೃಹಿಣಿಯ ಕೊಲೆ: ಪತಿ ಬಂಧನಕ್ಕೆ ಬಲೆ

ಚಿಕ್ಕಬಳ್ಳಾಪುರ: ಪತ್ನಿಯ ಶೀಲದ ಬಗ್ಗೆ ಅನುಮಾನ ಹಾಗೂ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಕುಟುಂಬ ಕಲಹದ ಹಿನ್ನೆಲೆಯಲ್ಲಿ ಗೃಹಿಣಿಯನ್ನು ಪತಿಯೇ ಕೊಲೆ…

13 hours ago

ಕೌಟುಂಬಿಕ ಕಲಹ ಡಬಲ್ ಮರ್ಡರ್: ಅಕ್ಕ-ತಂಗಿಯ ಹತ್ಯೆ, ಆರೋಪಿ ಪೊಲೀಸರಿಗೆ ಶರಣು

ಚಿಂತಾಮಣಿ: ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಕೌಟುಂಬಿಕ ಕಲಹ ಕೊನೆಗೆ ಭೀಕರ ತಿರುವು ಪಡೆದು, ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ…

13 hours ago

ಪ್ರತಿ ಲೀಟರ್ ಹಾಲಿಗೆ 10‌ ರೂ. ಪ್ರೋತ್ಸಾಹಧನ ಹೆಚ್ಚಳಕ್ಕೆ ಆಗ್ರಹ: ಜು.9ರಂದು ಸಿಎಂಗೆ ಮನವಿ ಸಲ್ಲಿಕೆ

ದೊಡ್ಡಬಳ್ಳಾಪುರ: ಹೈನುಗಾರಿಕೆಗೆ ಅಗತ್ಯವಾದ ಹಿಂಡಿ, ಬೂಸ, ಮೇವು ಸೇರಿದಂತೆ ಕಚ್ಚಾ ವಸ್ತುಗಳ ಬೆಲೆ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರ ಸಂಕಷ್ಟವನ್ನು…

18 hours ago

ಜು.7 ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…

24 hours ago

ಬ್ಲಾಕ್‌ಸ್ಪಾಟ್‌ಗಳೀಗ ಸುಂದರ ತಾಣ: ಕಸ ಸುರಿಯುತ್ತಿದ್ದ ಪ್ರದೇಶಗಳಿಗೆ ಸುಣ್ಣ ಬಣ್ಣ ಬಳಿದು ಅಲಂಕಾರ: ಹೊಸ ಪ್ರಯೋಗಕ್ಕೆ ಮುಂದಾದ ನಗರಸಭೆ

ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…

1 day ago