ದೊಡ್ಡಬಳ್ಳಾಪುರ ತಾಲೂಕಿನ ಮದಗೊಂಡನಹಳ್ಳಿ ಗ್ರಾಮದ ಖ್ಯಾತ ಶಿಕ್ಷಣ ತಜ್ಞ ಸಿ.ರಾಮಯ್ಯ(75) ಅವರು ನಿಧನರಾಗಿದ್ದಾರೆ.
ಸಿ.ರಾಮಯ್ಯ ಅವರು ದೊಡ್ಡಬಳ್ಳಾಪುರ ನಗರದ ಶಾರದ ಪ್ರೌಢಶಾಲೆಯ ಶಿಕ್ಷಕರಾಗಿ, ಚೇತನ ಶಿಕ್ಷಣ ಸಂಸ್ಥೆಯನ್ನು ಆರಂಭಿಸಿ, ಅರವಿಂದ ಶಾಲೆಯ ನಿರ್ದೇಶಕರಾಗಿ, ಮಾರಸಂದ್ರದ ಪಿಕೆಬಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರಾಗಿ, ಪ್ರಸ್ತುತ ವಿನಯಶ್ರೀ ವಿದ್ಯಾ ಸಂಸ್ಥೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.
ಶಿಕ್ಷಣ ಕ್ಷೇತ್ರದ ಸೇವೆಯಲ್ಲಿ ಅನೇಕರಿಗೆ ಉದ್ಯೋಗ ಅವಕಾಶ ನೀಡಿರುವ ರಾಮಯ್ಯ ಅವರಿಗೆ ಕರ್ನಾಟಕ ರಾಜ್ಯ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ದೊರೆತಿವೆ. ರಾಮಯ್ಯ ಅವರ ಶಿಷ್ಯರು ಬೆಂಗಳೂರಿನ ವಿವಿಧೆಡೆ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿದ್ದಾರೆ.
ಮೃತರು ಮಡದಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದು, ಮದಗೊಂಡನಹಳ್ಳಿಯಲ್ಲಿ ಅಂತಿಮ ಸಂಸ್ಕಾರಕ್ಕೆ ಸಿದ್ಧತೆ ನಡೆಸಲಾಗಿದೆ, ವಿದೇಶದಲ್ಲಿರುವ ಮಕ್ಕಳ ಬರುವಿಕೆಗೆ ನಿರೀಕ್ಷಿಸಲಾಗುತ್ತಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…