ದೊಡ್ಡಬಳ್ಳಾಪುರ ತಾಲೂಕಿನ ಮದಗೊಂಡನಹಳ್ಳಿ ಗ್ರಾಮದ ಖ್ಯಾತ ಶಿಕ್ಷಣ ತಜ್ಞ ಸಿ.ರಾಮಯ್ಯ(75) ಅವರು ನಿಧನರಾಗಿದ್ದಾರೆ.
ಸಿ.ರಾಮಯ್ಯ ಅವರು ದೊಡ್ಡಬಳ್ಳಾಪುರ ನಗರದ ಶಾರದ ಪ್ರೌಢಶಾಲೆಯ ಶಿಕ್ಷಕರಾಗಿ, ಚೇತನ ಶಿಕ್ಷಣ ಸಂಸ್ಥೆಯನ್ನು ಆರಂಭಿಸಿ, ಅರವಿಂದ ಶಾಲೆಯ ನಿರ್ದೇಶಕರಾಗಿ, ಮಾರಸಂದ್ರದ ಪಿಕೆಬಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರಾಗಿ, ಪ್ರಸ್ತುತ ವಿನಯಶ್ರೀ ವಿದ್ಯಾ ಸಂಸ್ಥೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.
ಶಿಕ್ಷಣ ಕ್ಷೇತ್ರದ ಸೇವೆಯಲ್ಲಿ ಅನೇಕರಿಗೆ ಉದ್ಯೋಗ ಅವಕಾಶ ನೀಡಿರುವ ರಾಮಯ್ಯ ಅವರಿಗೆ ಕರ್ನಾಟಕ ರಾಜ್ಯ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ದೊರೆತಿವೆ. ರಾಮಯ್ಯ ಅವರ ಶಿಷ್ಯರು ಬೆಂಗಳೂರಿನ ವಿವಿಧೆಡೆ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿದ್ದಾರೆ.
ಮೃತರು ಮಡದಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದು, ಮದಗೊಂಡನಹಳ್ಳಿಯಲ್ಲಿ ಅಂತಿಮ ಸಂಸ್ಕಾರಕ್ಕೆ ಸಿದ್ಧತೆ ನಡೆಸಲಾಗಿದೆ, ವಿದೇಶದಲ್ಲಿರುವ ಮಕ್ಕಳ ಬರುವಿಕೆಗೆ ನಿರೀಕ್ಷಿಸಲಾಗುತ್ತಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…
" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…
ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…
ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…