Categories: ರಾಜ್ಯ

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸಂಭವಿಸಿವೆ.

ಮದುವೆ ಸಂಬಂಧಗಳು ಕೂಡಿಬರುತ್ತಿಲ್ಲ ಎಂಬ ಹತಾಶೆಯಿಂದ ರಾಜ್ಯದ ಇಬ್ಬರು ಯುವಕರು ನೇಣಿಗೆ ಶರಣಾಗಿದ್ದಾರೆ. ಚಿಕ್ಕಮಗಳೂರಿನ ಕಡೂರಿನಲ್ಲಿ ಶಿರಾ ಮೂಲದ ಕುಮಾರ್ (26) ಹಾಗೂ ವಿಜಯಪುರದ ನಿಡಗುಂದಿಯಲ್ಲಿ ಶಂಕರ್ ತಳವಾರ್ (25) ಎಂಬುವವರು ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳಾಗಿದ್ದಾರೆ.

ಪೋಷಕರು ಎಷ್ಟು ಹುಡುಕಿದರೂ ಸಂಬಂಧಗಳು ನಿಶ್ಚಯವಾಗದಿದ್ದಕ್ಕೆ ಮನನೊಂದ ಇಬ್ಬರು ಯುವಕರು ಮರಕ್ಕೆ ನೇಣು ಬಿಗಿದುಕೊಂಡು ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ…

ಘಟನೆ 1: ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ಕುಮಾರ್ (26). ಸಾವು. ಈತ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬ್ರಹ್ಮಸಂದ್ರ ಗ್ರಾಮದ ನಿವಾಸಿ.

ವಿವರ: ವೃತ್ತಿಯಲ್ಲಿ ಕುರಿಗಾಹಿಯಾಗಿದ್ದ ಕುಮಾರ್‌ಗೆ ಪೋಷಕರು ಕಳೆದ ಕೆಲವು ದಿನಗಳಿಂದ ಹೆಣ್ಣು ಹುಡುಕುತ್ತಿದ್ದರು. ಆದರೆ ಸತತ ಪ್ರಯತ್ನದ ಹೊರತಾಗಿಯೂ ಯಾವುದೇ ಸಂಬಂಧಗಳು ಕುದುರುತ್ತಿರಲಿಲ್ಲ. ಇದರಿಂದ ಮಾನಸಿಕವಾಗಿ ಕುಗ್ಗಿದ್ದ ಕುಮಾರ್, ಕಡೂರು ತಾಲೂಕಿನ ಬೋರಗಾನಹಳ್ಳಿ ಬಳಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಯಗಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆ 2: ವಿಜಯಪುರ ಜಿಲ್ಲೆಯ ನಿಡಗುಂದಿಯಲ್ಲಿ ಶಂಕರ್ ತಳವಾರ್ (25) ಸಾವು. ನಿಡಗುಂದಿ ತಾಲೂಕಿನ ಚಿಮ್ಮಲಗಿ ಗ್ರಾಮದ ನಿವಾಸಿ.

ವಿವರ: ಶಂಕರ್‌ಗೆ ಎರಡು ವರ್ಷಗಳ ಹಿಂದೆಯೇ ಮದುವೆ ನಿಶ್ಚಯವಾಗಿತ್ತು, ಆದರೆ ಕಾರಣಾಂತರಗಳಿಂದ ಆ ಸಂಬಂಧ ಮುರಿದುಬಿದ್ದಿತ್ತು. ಆನಂತರ ಎಷ್ಟೇ ಹುಡುಕಿದರೂ ಮದುವೆಗೆ ಹೆಣ್ಣು ಸಿಗುತ್ತಿರಲಿಲ್ಲ. ಜೀವನದಲ್ಲಿ ಜಿಗುಪ್ಸೆ ಹೊಂದಿದ್ದ ಈತ ಕುರಿ ಮೇಯಿಸಲು ಹೋದ ಸಂದರ್ಭದಲ್ಲಿ ಜಮೀನಿನ ಮರಕ್ಕೆ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾನೆ. ನಿಡಗುಂದಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Ramesh Babu

Journalist

Recent Posts

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

3 hours ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

10 hours ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

20 hours ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

ನೇಪಾಳ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ

ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ…

1 day ago

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

2 days ago