Categories: ರಾಜ್ಯ

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸಂಭವಿಸಿವೆ.

ಮದುವೆ ಸಂಬಂಧಗಳು ಕೂಡಿಬರುತ್ತಿಲ್ಲ ಎಂಬ ಹತಾಶೆಯಿಂದ ರಾಜ್ಯದ ಇಬ್ಬರು ಯುವಕರು ನೇಣಿಗೆ ಶರಣಾಗಿದ್ದಾರೆ. ಚಿಕ್ಕಮಗಳೂರಿನ ಕಡೂರಿನಲ್ಲಿ ಶಿರಾ ಮೂಲದ ಕುಮಾರ್ (26) ಹಾಗೂ ವಿಜಯಪುರದ ನಿಡಗುಂದಿಯಲ್ಲಿ ಶಂಕರ್ ತಳವಾರ್ (25) ಎಂಬುವವರು ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳಾಗಿದ್ದಾರೆ.

ಪೋಷಕರು ಎಷ್ಟು ಹುಡುಕಿದರೂ ಸಂಬಂಧಗಳು ನಿಶ್ಚಯವಾಗದಿದ್ದಕ್ಕೆ ಮನನೊಂದ ಇಬ್ಬರು ಯುವಕರು ಮರಕ್ಕೆ ನೇಣು ಬಿಗಿದುಕೊಂಡು ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ…

ಘಟನೆ 1: ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ಕುಮಾರ್ (26). ಸಾವು. ಈತ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬ್ರಹ್ಮಸಂದ್ರ ಗ್ರಾಮದ ನಿವಾಸಿ.

ವಿವರ: ವೃತ್ತಿಯಲ್ಲಿ ಕುರಿಗಾಹಿಯಾಗಿದ್ದ ಕುಮಾರ್‌ಗೆ ಪೋಷಕರು ಕಳೆದ ಕೆಲವು ದಿನಗಳಿಂದ ಹೆಣ್ಣು ಹುಡುಕುತ್ತಿದ್ದರು. ಆದರೆ ಸತತ ಪ್ರಯತ್ನದ ಹೊರತಾಗಿಯೂ ಯಾವುದೇ ಸಂಬಂಧಗಳು ಕುದುರುತ್ತಿರಲಿಲ್ಲ. ಇದರಿಂದ ಮಾನಸಿಕವಾಗಿ ಕುಗ್ಗಿದ್ದ ಕುಮಾರ್, ಕಡೂರು ತಾಲೂಕಿನ ಬೋರಗಾನಹಳ್ಳಿ ಬಳಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಯಗಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆ 2: ವಿಜಯಪುರ ಜಿಲ್ಲೆಯ ನಿಡಗುಂದಿಯಲ್ಲಿ ಶಂಕರ್ ತಳವಾರ್ (25) ಸಾವು. ನಿಡಗುಂದಿ ತಾಲೂಕಿನ ಚಿಮ್ಮಲಗಿ ಗ್ರಾಮದ ನಿವಾಸಿ.

ವಿವರ: ಶಂಕರ್‌ಗೆ ಎರಡು ವರ್ಷಗಳ ಹಿಂದೆಯೇ ಮದುವೆ ನಿಶ್ಚಯವಾಗಿತ್ತು, ಆದರೆ ಕಾರಣಾಂತರಗಳಿಂದ ಆ ಸಂಬಂಧ ಮುರಿದುಬಿದ್ದಿತ್ತು. ಆನಂತರ ಎಷ್ಟೇ ಹುಡುಕಿದರೂ ಮದುವೆಗೆ ಹೆಣ್ಣು ಸಿಗುತ್ತಿರಲಿಲ್ಲ. ಜೀವನದಲ್ಲಿ ಜಿಗುಪ್ಸೆ ಹೊಂದಿದ್ದ ಈತ ಕುರಿ ಮೇಯಿಸಲು ಹೋದ ಸಂದರ್ಭದಲ್ಲಿ ಜಮೀನಿನ ಮರಕ್ಕೆ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾನೆ. ನಿಡಗುಂದಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

11 hours ago

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

12 hours ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

13 hours ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

18 hours ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

19 hours ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

1 day ago