ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲವೆಂದು ಹೈಟೆನ್ಷನ್ ವಿದ್ಯುತ್​ ಕಂಬ ಏರಿ ಪ್ರಾಣ ಬಿಟ್ಟ ಯುವಕ

ಮದುವೆಯಾಗಲು ಹೆಣ್ಣು ಸಿಕ್ಕಿಲ್ಲವೆಂದು ಕುಡಿದ ಮತ್ತಿನಲ್ಲಿ ಮಸಣಶೆಟ್ಟಿ ಎಂಬ ಯುವಕ ಹೈಟೆನ್ಷನ್ ವಿದ್ಯುತ್​ ಕಂಬ ಏರಿ ಪ್ರಾಣಬಿಟ್ಟ ದಾರುಣ ಘಟನೆ ಚಾಮರಾಜನಗರ ಕೊಳ್ಳೇಗಾಲ ತಾಲೂಕಿನ ಟಿ.ಸಿ.ಹುಂಡಿ ಬಳಿ ನಡೆದಿದೆ.

ವಿದ್ಯುತ್ ಕಂಬದಿಂದ ಇಳಿಯುವಾಗ ತಂತಿ ತಗುಲಿ ಮಸಣಶೆಟ್ಟಿ ಸಾವಿಗೀಡಾಗಿದ್ದಾನೆ. ವಿದ್ಯುತ್ ಕಂಬ ಏರಿದ್ದನ್ನು ನೋಡಿ ಅಲ್ಲಿಗೆ ಧಾವಿಸಿದ್ದ ಸ್ಥಳೀಯರು ಕಂಬದಿಂದ ಕೆಳಗಿಳಿಯುವಂತೆ ಒತ್ತಾಯಿಸಿದ್ದಾರೆ. ಆಗ ಯುವಕ ಇಳಿಯಲು ಮುಂದಾಗಿದ್ದು, ಈ ವೇಳೆ ವಿದ್ಯುತ್ ತಂತಿ ತಗುಲಿ ಕಂಬದಲ್ಲೇ ಪ್ರಾಣಬಿಟ್ಟಿದ್ದಾನೆ.

ಮೃತ ಮಸಣಶೆಟ್ಟಿಯದ್ದು ಸಣ್ಣ ಮನೆ ಹಾಗೂ ಆಸ್ತಿ ಜಮೀನು ಇಲ್ಲ ಎಂಬ ಕಾರಣ ಎರಡು ಬಾರಿ ನೋಡಿ ಬಂದ ಹೆಣ್ಣಿನ ಕಡೆಯವರು ತಿರಸ್ಕರಿಸಿದ್ದರು. ಇದರಿಂದ ಮಾನಸಿಕ ಖಿನ್ನತೆಗೆ ಒಳಾಗಿದ್ದ ಮಸಣಶೆಟ್ಟಿ ಕುಡಿತದ ದಾಸನಾಗಿದ್ದ ಎನ್ನಲಾಗಿದೆ. ಇಂದು ಬೆಳಗ್ಗೆ ಹೈಟೆನ್ಷನ್ ಕಂಬ ಏರಿ ತಾಯಿಯ ಕಣ್ಣೆದುರೇ ದಾರುಣವಾಗಿ ಮೃತಪಟ್ಟಿದ್ದಾನೆ.

Ramesh Babu

Journalist

Recent Posts

ಬೆಳೆ ವಿಮೆ ಮಾಡಿಸಲು ಆ.14 ಕೊನೆಯ ದಿನ: ರೈತರು ತಪ್ಪದೇ ಬೆಳೆ ವಿಮೆ ಮಾಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…

12 hours ago

ಬರದ ನಡುವೆಯೂ ರಾಗಿ ರೈತರಿಗೆ ಆಸರೆ: ಫಸಲ್ ಬಿಮಾ ಪ್ರೀಮಿಯಂ ಭರಿಸುವುದಾಗಿ ಶಾಸಕ ಧೀರಜ್ ಮುನಿರಾಜ್ ಘೋಷಣೆ

ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…

15 hours ago

ಕೋಳಿ ವಿಚಾರದ ಜಗಳಕ್ಕೆ ಹೊಸ ಟ್ವಿಸ್ಟ್: ಎರಡೂ ಕಡೆಯಿಂದ ಹಲ್ಲೆ ಆರೋಪ, ಆಸ್ಪತ್ರೆಯಲ್ಲೂ ಗಲಾಟೆ

ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…

16 hours ago

” ಕ್ಷಮೆ” ಎಂಬ ಭಾವದ ಸುತ್ತ……

ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…

1 day ago

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

1 day ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

1 day ago