ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲವೆಂದು ಹೈಟೆನ್ಷನ್ ವಿದ್ಯುತ್​ ಕಂಬ ಏರಿ ಪ್ರಾಣ ಬಿಟ್ಟ ಯುವಕ

ಮದುವೆಯಾಗಲು ಹೆಣ್ಣು ಸಿಕ್ಕಿಲ್ಲವೆಂದು ಕುಡಿದ ಮತ್ತಿನಲ್ಲಿ ಮಸಣಶೆಟ್ಟಿ ಎಂಬ ಯುವಕ ಹೈಟೆನ್ಷನ್ ವಿದ್ಯುತ್​ ಕಂಬ ಏರಿ ಪ್ರಾಣಬಿಟ್ಟ ದಾರುಣ ಘಟನೆ ಚಾಮರಾಜನಗರ ಕೊಳ್ಳೇಗಾಲ ತಾಲೂಕಿನ ಟಿ.ಸಿ.ಹುಂಡಿ ಬಳಿ ನಡೆದಿದೆ.

ವಿದ್ಯುತ್ ಕಂಬದಿಂದ ಇಳಿಯುವಾಗ ತಂತಿ ತಗುಲಿ ಮಸಣಶೆಟ್ಟಿ ಸಾವಿಗೀಡಾಗಿದ್ದಾನೆ. ವಿದ್ಯುತ್ ಕಂಬ ಏರಿದ್ದನ್ನು ನೋಡಿ ಅಲ್ಲಿಗೆ ಧಾವಿಸಿದ್ದ ಸ್ಥಳೀಯರು ಕಂಬದಿಂದ ಕೆಳಗಿಳಿಯುವಂತೆ ಒತ್ತಾಯಿಸಿದ್ದಾರೆ. ಆಗ ಯುವಕ ಇಳಿಯಲು ಮುಂದಾಗಿದ್ದು, ಈ ವೇಳೆ ವಿದ್ಯುತ್ ತಂತಿ ತಗುಲಿ ಕಂಬದಲ್ಲೇ ಪ್ರಾಣಬಿಟ್ಟಿದ್ದಾನೆ.

ಮೃತ ಮಸಣಶೆಟ್ಟಿಯದ್ದು ಸಣ್ಣ ಮನೆ ಹಾಗೂ ಆಸ್ತಿ ಜಮೀನು ಇಲ್ಲ ಎಂಬ ಕಾರಣ ಎರಡು ಬಾರಿ ನೋಡಿ ಬಂದ ಹೆಣ್ಣಿನ ಕಡೆಯವರು ತಿರಸ್ಕರಿಸಿದ್ದರು. ಇದರಿಂದ ಮಾನಸಿಕ ಖಿನ್ನತೆಗೆ ಒಳಾಗಿದ್ದ ಮಸಣಶೆಟ್ಟಿ ಕುಡಿತದ ದಾಸನಾಗಿದ್ದ ಎನ್ನಲಾಗಿದೆ. ಇಂದು ಬೆಳಗ್ಗೆ ಹೈಟೆನ್ಷನ್ ಕಂಬ ಏರಿ ತಾಯಿಯ ಕಣ್ಣೆದುರೇ ದಾರುಣವಾಗಿ ಮೃತಪಟ್ಟಿದ್ದಾನೆ.

Ramesh Babu

Journalist

Recent Posts

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

2 days ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

2 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

3 days ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

3 days ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

3 days ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

3 days ago