Categories: Crime

ಮದುವೆಯಾದ 45 ದಿನಕ್ಕೆ ಲವರ್​​ ಜೊತೆ ಯುವತಿ ಎಸ್ಕೇಪ್​​: ಪತಿ, ಸೋದರ ಮಾವ ಸೂಸೈಡ್

 

ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು ಡೆತ್ ನೋಟ್ ಬರೆದಿದ್ದಾರೆ. ಇತ್ತ, ಸೊಸೆ ಬೇರೊಬ್ಬನ ಜೊತೆ ಓಡಿಹೋದ ಅವಮಾನ ತಾಳಲಾರದೆ ಮುಂದೆ ನಿಂತು ಮದುವೆ ಮಾಡಿಸಿದ್ದ ಆಕೆಯ ಸಹೋದರ ಮಾವ ರುದ್ರೇಶ್ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ.

ದಾವಣಗೆರೆ, ಜನವರಿ 27: ಮದುವೆಯಾದ 45 ದಿನಕ್ಕೆ ನವವಿವಾಹಿತ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ದಾವಣಗೆರೆ ತಾಲೂಕಿನ ಗುಮ್ಮನೂರಿನಲ್ಲಿ ನಡೆದಿದೆ. ಹರೀಶ್(30) ಮೃತ ದುರ್ದೈವಿಯಾಗಿದ್ದು, ನನ್ನ ಸಾವಿಗೆ ಪತ್ನಿಯ ವರ್ತನೆಯ ಕಾರಣ ಎಂದು 2 ಪುಟಗಳ ಡೆತ್​ನೋಟ್​ ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ. ದುರ್ದೈವ ಅಂದರೆ ಹರೀಶ್​ ಸಾವಿನ ಬೆನ್ನಲ್ಲೇ ಮುಂದೆ ನಿಂತು ಮದುವೆ ಮಾಡಿಸಿದ ತಪ್ಪಿಗೆ ಯುವತಿಯ ಸೋದರ ಮಾವ ರುದ್ರೇಶ್ ಸಹ ಅತ್ಮಹತ್ಯೆಗೆ ಶರಣಾಗಿದ್ದಾರೆ.

ಹರೀಶ್​​ ಡೆತ್​​ನೋಟ್​​ನಲ್ಲಿ ಏನಿದೆ..?

ಪತ್ನಿ ಅನಗತ್ಯ ಕಿರುಕುಳ ನೀಡುತ್ತಿದ್ದಾಳೆ. ಬೇರೆ ಯುವಕನೊಂದಿಗೆ ಓಡಿ ಹೋಗಿ ನಾನು ಹಿಂಸೆ ನೀಡುತ್ತಿರುವೆ ಎಂದು ಆರೋಪಿಸಿದ್ದಾಳೆ. ಪತ್ನಿ ಹಾಗೂ ಸಂಬಂಧಿಕರಿಂದ ತನಗೆ ಜೀವ ಬೆದರಿಕೆ ಇತ್ತು. ಇದೇ ಕಾರಣಕ್ಕೆ ಬೇಸತ್ತು ಆತ್ಮಹತ್ಯೆ ಶರಣಾಗುತ್ತಿದ್ದೇನೆ ಎಂದು ಡೆತ್ ನೋಟ್​​ನಲ್ಲಿ ಹರೀಶ್​​ ಉಲ್ಲೇಖಿಸಿದ್ದಾರೆ.

ಪತ್ನಿ ಹಾಗೂ ಆಕೆ ತಂದೆ, ತಾಯಿ, ಚಿಕ್ಕಪ್ಪನಿಗೆ ಜೀವಾವಧಿ ಶಿಕ್ಷೆ ಆಗಬೇಕು. ಆಸ್ತಿಗಿಂತ ಮಾನ ಮುಖ್ಯವಾಗಿರುವ ಕಾರಣ ಈ ನಿರ್ಧಾರ ಕೈಗೊಳ್ಳುತ್ತಿದ್ದೇನೆ. ತನ್ನನ್ನು ಕ್ಷಮಿಸಿ ಎಂದು ಕುಟುಂಬ ಸದಸ್ಯರಿಗೆ ಹರೀಶ್​​ ಕ್ಷಮೆಯನ್ನೂ ಕೇಳಿದ್ದು, ಪತ್ನಿಯ ಕಡೆಯವರು ನೀಡಿದ ಹಿಂಸೆಗೆ ತನ್ನ ತಂದೆ ತಾಯಿ ಮನೆ ಬಿಡುವ ಯೋಚನೆ ಕೂಡ ಮಾಡಿದ್ದರು ಎಂದು ಆರೋಪಿಸಿದ್ದಾರೆ. ಸ್ಥಳಕ್ಕೆ ದಾವಣಗೆರೆ ಗ್ರಾಮಾಂತರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಇನ್ನು ಇತ್ತ ಹರೀಶ್​​ ಆತ್ಮಹತ್ಯೆಗೆ ಶರಣಾದ ವಿಚಾರ ತಿಳಿಯುತ್ತಿದ್ದಂತೆ ಮುಂದೆ ನಿಂತು ಇವರ ಮದುವೆ ಮಾಡಿಸಿದ್ದ ಯುವತಿಯ ಸಹೋದರ ಮಾವ ರುದ್ರೇಶ್ ಕೂಡ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ರುದ್ರೇಶ್​​ ದಾವಣಗೆರೆಯ ಅನೆಕೊಂಡದ ನಿವಾಸಿಯಾಗಿದ್ದು, 4 ದಿನದ ಹಿಂದೆ ಕುಮಾರ್​ ಎಂಬಾತನ ಜತೆ ಹರೀಶ್ ಪತ್ನಿ ಓಡಿಹೋಗಿದ್ದಳು. ಇದರಿಂದ ಅವಮಾನ ತಾಳಲಾರದೆ ರುದ್ರೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಒಟ್ಟಿನಲ್ಲಿ ಯುವತಿಯ ಹುಚ್ಚಾಟಕ್ಕೆ ಇಬ್ಬರ ಪ್ರಾಣ ಹೋಗಿದೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ.

Ramesh Babu

Journalist

Recent Posts

ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು…..

ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…

43 minutes ago

“ದೊಡ್ಡಬಳ್ಳಾಪುರ ಸ್ಯಾರಿ ಸಂತೆ” ರಘು ದೀಕ್ಷಿತ್ ಸಂಗೀತದೊಂದಿಗೆ ತೆರೆ: ಮಹಿಳೆಯರ ಮನ ಗೆದ್ದ ಸ್ಯಾರಿ ಸಂತೆ: 2 ಕೋಟಿಗೂ ಅಧಿಕ ವಹಿವಾಟು

ಕಳೆದ ಮೂರು ದಿನಗಳಿಂದ ನಡೆದ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ"ಗೆ ಭಾನುವಾರ ಅದ್ಧೂರಿಯಾಗಿ ತೆರೆ ಕಂಡಿತು. ಮೂರು ದಿನಗಳ ಕಾಲ ಲಕ್ಷಾಂತರ…

12 hours ago

ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿ ಮಾರಾಟ ಮಾಡುತ್ತಿದ್ದ ದಂಪತಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ.!

ಉತ್ತರಪ್ರದೇಶ : ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ…

18 hours ago

ಲೋಕಸೇವಾನಿರತ ಡಿ. ಕೊಂಗಾಡಿಯಪ್ಪ ದೊಡ್ಡಬಳ್ಳಾಪುರ ನಗರದ ಸಮಗ್ರ ಅಭಿವೃದ್ಧಿಯ ಹರಿಕಾರ- ಡಿ.ಪಿ.ಆಂಜನೇಯ

ಪ್ರಾಥಮಿಕ ಶಾಲಾ ಶಿಕ್ಷಕರಾಗಿದ್ದ ಲೋಕಸೇವಾನಿರತ ಡಿ.ಕೊಂಗಾಡಿಯಪ್ಪ ಅವರು ತಮ್ಮ ಸೇವಾ ಮನೋಭಾವದಿಂದ ಸರ್ವಜನ ಮಾನ್ಯರಾಗಿದ್ದರು ಎಂದು ಕನ್ನಡ ಜಾಗೃತ ಪರಿಷತ್ತು…

20 hours ago

ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ‘ಅನ್ನಭಾಗ್ಯ’ ಯೋಜನೆಯ ಅಕ್ಕಿ ಜಪ್ತಿ

ಕುಮಟಾ: ಬಡವರ ಹಸಿವು ನೀಗಿಸಲು ಸರ್ಕಾರ ನೀಡುವ 'ಅನ್ನಭಾಗ್ಯ' ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗೋಡೌನ್ ಮೇಲೆ ಕುಮಟಾ ತಹಶೀಲ್ದಾರ್…

20 hours ago

ವಿರೋಧ ಲೆಕ್ಕಿಸದೆ ಪ್ರೀತಿಸಿ ಮದುವೆಯಾದ ಯುವತಿ…ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ…

ಮನೆಯವರ ವಿರೋಧ ಲೆಕ್ಕಿಸದೆ ಪ್ರೀತಿಸಿದ ಯುವಕನ ಮದುವೆ ಆದ ಹಿನ್ನಲೆ ಸಿಡಿದೆದ್ದ ಯುವತಿ ತಂದೆ ಅಳಿಯನ ಮನೆಗೆ ಬೆಂಕಿ ಹಚ್ಚಿ…

21 hours ago