Categories: Crime

ಮದುವೆಯಾದ 45 ದಿನಕ್ಕೆ ಲವರ್​​ ಜೊತೆ ಯುವತಿ ಎಸ್ಕೇಪ್​​: ಪತಿ, ಸೋದರ ಮಾವ ಸೂಸೈಡ್

 

ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು ಡೆತ್ ನೋಟ್ ಬರೆದಿದ್ದಾರೆ. ಇತ್ತ, ಸೊಸೆ ಬೇರೊಬ್ಬನ ಜೊತೆ ಓಡಿಹೋದ ಅವಮಾನ ತಾಳಲಾರದೆ ಮುಂದೆ ನಿಂತು ಮದುವೆ ಮಾಡಿಸಿದ್ದ ಆಕೆಯ ಸಹೋದರ ಮಾವ ರುದ್ರೇಶ್ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ.

ದಾವಣಗೆರೆ, ಜನವರಿ 27: ಮದುವೆಯಾದ 45 ದಿನಕ್ಕೆ ನವವಿವಾಹಿತ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ದಾವಣಗೆರೆ ತಾಲೂಕಿನ ಗುಮ್ಮನೂರಿನಲ್ಲಿ ನಡೆದಿದೆ. ಹರೀಶ್(30) ಮೃತ ದುರ್ದೈವಿಯಾಗಿದ್ದು, ನನ್ನ ಸಾವಿಗೆ ಪತ್ನಿಯ ವರ್ತನೆಯ ಕಾರಣ ಎಂದು 2 ಪುಟಗಳ ಡೆತ್​ನೋಟ್​ ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ. ದುರ್ದೈವ ಅಂದರೆ ಹರೀಶ್​ ಸಾವಿನ ಬೆನ್ನಲ್ಲೇ ಮುಂದೆ ನಿಂತು ಮದುವೆ ಮಾಡಿಸಿದ ತಪ್ಪಿಗೆ ಯುವತಿಯ ಸೋದರ ಮಾವ ರುದ್ರೇಶ್ ಸಹ ಅತ್ಮಹತ್ಯೆಗೆ ಶರಣಾಗಿದ್ದಾರೆ.

ಹರೀಶ್​​ ಡೆತ್​​ನೋಟ್​​ನಲ್ಲಿ ಏನಿದೆ..?

ಪತ್ನಿ ಅನಗತ್ಯ ಕಿರುಕುಳ ನೀಡುತ್ತಿದ್ದಾಳೆ. ಬೇರೆ ಯುವಕನೊಂದಿಗೆ ಓಡಿ ಹೋಗಿ ನಾನು ಹಿಂಸೆ ನೀಡುತ್ತಿರುವೆ ಎಂದು ಆರೋಪಿಸಿದ್ದಾಳೆ. ಪತ್ನಿ ಹಾಗೂ ಸಂಬಂಧಿಕರಿಂದ ತನಗೆ ಜೀವ ಬೆದರಿಕೆ ಇತ್ತು. ಇದೇ ಕಾರಣಕ್ಕೆ ಬೇಸತ್ತು ಆತ್ಮಹತ್ಯೆ ಶರಣಾಗುತ್ತಿದ್ದೇನೆ ಎಂದು ಡೆತ್ ನೋಟ್​​ನಲ್ಲಿ ಹರೀಶ್​​ ಉಲ್ಲೇಖಿಸಿದ್ದಾರೆ.

ಪತ್ನಿ ಹಾಗೂ ಆಕೆ ತಂದೆ, ತಾಯಿ, ಚಿಕ್ಕಪ್ಪನಿಗೆ ಜೀವಾವಧಿ ಶಿಕ್ಷೆ ಆಗಬೇಕು. ಆಸ್ತಿಗಿಂತ ಮಾನ ಮುಖ್ಯವಾಗಿರುವ ಕಾರಣ ಈ ನಿರ್ಧಾರ ಕೈಗೊಳ್ಳುತ್ತಿದ್ದೇನೆ. ತನ್ನನ್ನು ಕ್ಷಮಿಸಿ ಎಂದು ಕುಟುಂಬ ಸದಸ್ಯರಿಗೆ ಹರೀಶ್​​ ಕ್ಷಮೆಯನ್ನೂ ಕೇಳಿದ್ದು, ಪತ್ನಿಯ ಕಡೆಯವರು ನೀಡಿದ ಹಿಂಸೆಗೆ ತನ್ನ ತಂದೆ ತಾಯಿ ಮನೆ ಬಿಡುವ ಯೋಚನೆ ಕೂಡ ಮಾಡಿದ್ದರು ಎಂದು ಆರೋಪಿಸಿದ್ದಾರೆ. ಸ್ಥಳಕ್ಕೆ ದಾವಣಗೆರೆ ಗ್ರಾಮಾಂತರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಇನ್ನು ಇತ್ತ ಹರೀಶ್​​ ಆತ್ಮಹತ್ಯೆಗೆ ಶರಣಾದ ವಿಚಾರ ತಿಳಿಯುತ್ತಿದ್ದಂತೆ ಮುಂದೆ ನಿಂತು ಇವರ ಮದುವೆ ಮಾಡಿಸಿದ್ದ ಯುವತಿಯ ಸಹೋದರ ಮಾವ ರುದ್ರೇಶ್ ಕೂಡ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ರುದ್ರೇಶ್​​ ದಾವಣಗೆರೆಯ ಅನೆಕೊಂಡದ ನಿವಾಸಿಯಾಗಿದ್ದು, 4 ದಿನದ ಹಿಂದೆ ಕುಮಾರ್​ ಎಂಬಾತನ ಜತೆ ಹರೀಶ್ ಪತ್ನಿ ಓಡಿಹೋಗಿದ್ದಳು. ಇದರಿಂದ ಅವಮಾನ ತಾಳಲಾರದೆ ರುದ್ರೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಒಟ್ಟಿನಲ್ಲಿ ಯುವತಿಯ ಹುಚ್ಚಾಟಕ್ಕೆ ಇಬ್ಬರ ಪ್ರಾಣ ಹೋಗಿದೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ.

Ramesh Babu

Journalist

Recent Posts

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

23 hours ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

4 days ago