Categories: Crime

ಮದುವೆಯಾದ 45 ದಿನಕ್ಕೆ ಲವರ್​​ ಜೊತೆ ಯುವತಿ ಎಸ್ಕೇಪ್​​: ಪತಿ, ಸೋದರ ಮಾವ ಸೂಸೈಡ್

 

ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು ಡೆತ್ ನೋಟ್ ಬರೆದಿದ್ದಾರೆ. ಇತ್ತ, ಸೊಸೆ ಬೇರೊಬ್ಬನ ಜೊತೆ ಓಡಿಹೋದ ಅವಮಾನ ತಾಳಲಾರದೆ ಮುಂದೆ ನಿಂತು ಮದುವೆ ಮಾಡಿಸಿದ್ದ ಆಕೆಯ ಸಹೋದರ ಮಾವ ರುದ್ರೇಶ್ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ.

ದಾವಣಗೆರೆ, ಜನವರಿ 27: ಮದುವೆಯಾದ 45 ದಿನಕ್ಕೆ ನವವಿವಾಹಿತ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ದಾವಣಗೆರೆ ತಾಲೂಕಿನ ಗುಮ್ಮನೂರಿನಲ್ಲಿ ನಡೆದಿದೆ. ಹರೀಶ್(30) ಮೃತ ದುರ್ದೈವಿಯಾಗಿದ್ದು, ನನ್ನ ಸಾವಿಗೆ ಪತ್ನಿಯ ವರ್ತನೆಯ ಕಾರಣ ಎಂದು 2 ಪುಟಗಳ ಡೆತ್​ನೋಟ್​ ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ. ದುರ್ದೈವ ಅಂದರೆ ಹರೀಶ್​ ಸಾವಿನ ಬೆನ್ನಲ್ಲೇ ಮುಂದೆ ನಿಂತು ಮದುವೆ ಮಾಡಿಸಿದ ತಪ್ಪಿಗೆ ಯುವತಿಯ ಸೋದರ ಮಾವ ರುದ್ರೇಶ್ ಸಹ ಅತ್ಮಹತ್ಯೆಗೆ ಶರಣಾಗಿದ್ದಾರೆ.

ಹರೀಶ್​​ ಡೆತ್​​ನೋಟ್​​ನಲ್ಲಿ ಏನಿದೆ..?

ಪತ್ನಿ ಅನಗತ್ಯ ಕಿರುಕುಳ ನೀಡುತ್ತಿದ್ದಾಳೆ. ಬೇರೆ ಯುವಕನೊಂದಿಗೆ ಓಡಿ ಹೋಗಿ ನಾನು ಹಿಂಸೆ ನೀಡುತ್ತಿರುವೆ ಎಂದು ಆರೋಪಿಸಿದ್ದಾಳೆ. ಪತ್ನಿ ಹಾಗೂ ಸಂಬಂಧಿಕರಿಂದ ತನಗೆ ಜೀವ ಬೆದರಿಕೆ ಇತ್ತು. ಇದೇ ಕಾರಣಕ್ಕೆ ಬೇಸತ್ತು ಆತ್ಮಹತ್ಯೆ ಶರಣಾಗುತ್ತಿದ್ದೇನೆ ಎಂದು ಡೆತ್ ನೋಟ್​​ನಲ್ಲಿ ಹರೀಶ್​​ ಉಲ್ಲೇಖಿಸಿದ್ದಾರೆ.

ಪತ್ನಿ ಹಾಗೂ ಆಕೆ ತಂದೆ, ತಾಯಿ, ಚಿಕ್ಕಪ್ಪನಿಗೆ ಜೀವಾವಧಿ ಶಿಕ್ಷೆ ಆಗಬೇಕು. ಆಸ್ತಿಗಿಂತ ಮಾನ ಮುಖ್ಯವಾಗಿರುವ ಕಾರಣ ಈ ನಿರ್ಧಾರ ಕೈಗೊಳ್ಳುತ್ತಿದ್ದೇನೆ. ತನ್ನನ್ನು ಕ್ಷಮಿಸಿ ಎಂದು ಕುಟುಂಬ ಸದಸ್ಯರಿಗೆ ಹರೀಶ್​​ ಕ್ಷಮೆಯನ್ನೂ ಕೇಳಿದ್ದು, ಪತ್ನಿಯ ಕಡೆಯವರು ನೀಡಿದ ಹಿಂಸೆಗೆ ತನ್ನ ತಂದೆ ತಾಯಿ ಮನೆ ಬಿಡುವ ಯೋಚನೆ ಕೂಡ ಮಾಡಿದ್ದರು ಎಂದು ಆರೋಪಿಸಿದ್ದಾರೆ. ಸ್ಥಳಕ್ಕೆ ದಾವಣಗೆರೆ ಗ್ರಾಮಾಂತರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಇನ್ನು ಇತ್ತ ಹರೀಶ್​​ ಆತ್ಮಹತ್ಯೆಗೆ ಶರಣಾದ ವಿಚಾರ ತಿಳಿಯುತ್ತಿದ್ದಂತೆ ಮುಂದೆ ನಿಂತು ಇವರ ಮದುವೆ ಮಾಡಿಸಿದ್ದ ಯುವತಿಯ ಸಹೋದರ ಮಾವ ರುದ್ರೇಶ್ ಕೂಡ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ರುದ್ರೇಶ್​​ ದಾವಣಗೆರೆಯ ಅನೆಕೊಂಡದ ನಿವಾಸಿಯಾಗಿದ್ದು, 4 ದಿನದ ಹಿಂದೆ ಕುಮಾರ್​ ಎಂಬಾತನ ಜತೆ ಹರೀಶ್ ಪತ್ನಿ ಓಡಿಹೋಗಿದ್ದಳು. ಇದರಿಂದ ಅವಮಾನ ತಾಳಲಾರದೆ ರುದ್ರೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಒಟ್ಟಿನಲ್ಲಿ ಯುವತಿಯ ಹುಚ್ಚಾಟಕ್ಕೆ ಇಬ್ಬರ ಪ್ರಾಣ ಹೋಗಿದೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

5 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

6 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

1 day ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 days ago