Categories: Crime

ಮದುವೆಯಾದ 45 ದಿನಕ್ಕೆ ಲವರ್​​ ಜೊತೆ ಯುವತಿ ಎಸ್ಕೇಪ್​​: ಪತಿ, ಸೋದರ ಮಾವ ಸೂಸೈಡ್

 

ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು ಡೆತ್ ನೋಟ್ ಬರೆದಿದ್ದಾರೆ. ಇತ್ತ, ಸೊಸೆ ಬೇರೊಬ್ಬನ ಜೊತೆ ಓಡಿಹೋದ ಅವಮಾನ ತಾಳಲಾರದೆ ಮುಂದೆ ನಿಂತು ಮದುವೆ ಮಾಡಿಸಿದ್ದ ಆಕೆಯ ಸಹೋದರ ಮಾವ ರುದ್ರೇಶ್ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ.

ದಾವಣಗೆರೆ, ಜನವರಿ 27: ಮದುವೆಯಾದ 45 ದಿನಕ್ಕೆ ನವವಿವಾಹಿತ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ದಾವಣಗೆರೆ ತಾಲೂಕಿನ ಗುಮ್ಮನೂರಿನಲ್ಲಿ ನಡೆದಿದೆ. ಹರೀಶ್(30) ಮೃತ ದುರ್ದೈವಿಯಾಗಿದ್ದು, ನನ್ನ ಸಾವಿಗೆ ಪತ್ನಿಯ ವರ್ತನೆಯ ಕಾರಣ ಎಂದು 2 ಪುಟಗಳ ಡೆತ್​ನೋಟ್​ ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ. ದುರ್ದೈವ ಅಂದರೆ ಹರೀಶ್​ ಸಾವಿನ ಬೆನ್ನಲ್ಲೇ ಮುಂದೆ ನಿಂತು ಮದುವೆ ಮಾಡಿಸಿದ ತಪ್ಪಿಗೆ ಯುವತಿಯ ಸೋದರ ಮಾವ ರುದ್ರೇಶ್ ಸಹ ಅತ್ಮಹತ್ಯೆಗೆ ಶರಣಾಗಿದ್ದಾರೆ.

ಹರೀಶ್​​ ಡೆತ್​​ನೋಟ್​​ನಲ್ಲಿ ಏನಿದೆ..?

ಪತ್ನಿ ಅನಗತ್ಯ ಕಿರುಕುಳ ನೀಡುತ್ತಿದ್ದಾಳೆ. ಬೇರೆ ಯುವಕನೊಂದಿಗೆ ಓಡಿ ಹೋಗಿ ನಾನು ಹಿಂಸೆ ನೀಡುತ್ತಿರುವೆ ಎಂದು ಆರೋಪಿಸಿದ್ದಾಳೆ. ಪತ್ನಿ ಹಾಗೂ ಸಂಬಂಧಿಕರಿಂದ ತನಗೆ ಜೀವ ಬೆದರಿಕೆ ಇತ್ತು. ಇದೇ ಕಾರಣಕ್ಕೆ ಬೇಸತ್ತು ಆತ್ಮಹತ್ಯೆ ಶರಣಾಗುತ್ತಿದ್ದೇನೆ ಎಂದು ಡೆತ್ ನೋಟ್​​ನಲ್ಲಿ ಹರೀಶ್​​ ಉಲ್ಲೇಖಿಸಿದ್ದಾರೆ.

ಪತ್ನಿ ಹಾಗೂ ಆಕೆ ತಂದೆ, ತಾಯಿ, ಚಿಕ್ಕಪ್ಪನಿಗೆ ಜೀವಾವಧಿ ಶಿಕ್ಷೆ ಆಗಬೇಕು. ಆಸ್ತಿಗಿಂತ ಮಾನ ಮುಖ್ಯವಾಗಿರುವ ಕಾರಣ ಈ ನಿರ್ಧಾರ ಕೈಗೊಳ್ಳುತ್ತಿದ್ದೇನೆ. ತನ್ನನ್ನು ಕ್ಷಮಿಸಿ ಎಂದು ಕುಟುಂಬ ಸದಸ್ಯರಿಗೆ ಹರೀಶ್​​ ಕ್ಷಮೆಯನ್ನೂ ಕೇಳಿದ್ದು, ಪತ್ನಿಯ ಕಡೆಯವರು ನೀಡಿದ ಹಿಂಸೆಗೆ ತನ್ನ ತಂದೆ ತಾಯಿ ಮನೆ ಬಿಡುವ ಯೋಚನೆ ಕೂಡ ಮಾಡಿದ್ದರು ಎಂದು ಆರೋಪಿಸಿದ್ದಾರೆ. ಸ್ಥಳಕ್ಕೆ ದಾವಣಗೆರೆ ಗ್ರಾಮಾಂತರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಇನ್ನು ಇತ್ತ ಹರೀಶ್​​ ಆತ್ಮಹತ್ಯೆಗೆ ಶರಣಾದ ವಿಚಾರ ತಿಳಿಯುತ್ತಿದ್ದಂತೆ ಮುಂದೆ ನಿಂತು ಇವರ ಮದುವೆ ಮಾಡಿಸಿದ್ದ ಯುವತಿಯ ಸಹೋದರ ಮಾವ ರುದ್ರೇಶ್ ಕೂಡ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ರುದ್ರೇಶ್​​ ದಾವಣಗೆರೆಯ ಅನೆಕೊಂಡದ ನಿವಾಸಿಯಾಗಿದ್ದು, 4 ದಿನದ ಹಿಂದೆ ಕುಮಾರ್​ ಎಂಬಾತನ ಜತೆ ಹರೀಶ್ ಪತ್ನಿ ಓಡಿಹೋಗಿದ್ದಳು. ಇದರಿಂದ ಅವಮಾನ ತಾಳಲಾರದೆ ರುದ್ರೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಒಟ್ಟಿನಲ್ಲಿ ಯುವತಿಯ ಹುಚ್ಚಾಟಕ್ಕೆ ಇಬ್ಬರ ಪ್ರಾಣ ಹೋಗಿದೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

5 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

6 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

7 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

7 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

11 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

13 hours ago