ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ.
ಗಂಗಮ್ಮ (65), ಕೊಲೆಯಾದ ಮಹಿಳೆ.
ಉಮಾಶಂಕರ (40) ತಾಯಿಯನ್ನು ಬರ್ಬರವಾಗಿ ಕೊಲೆ ಮಾಡಿದ ಪಾಪಿ ಪುತ್ರ.
ಉಮಾಶಂಕರ ಕಳೆದ ಎರಡು ವರ್ಷದ ಹಿಂದೆ ಅಪಘಾತವಾಗಿ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ. ಕಳೆದ ಒಂದು ವರ್ಷದ ಹಿಂದೆ ಕುಂಭಮೇಳಕ್ಕೆ ತೆರಳಿ ವಾಪಾಸ್ ಆಗುವಾಗ ಅಪಘಾತದಲ್ಲಿ ಉಮಾಶಂಕರ್ ತಲೆಗೆ ಪೆಟ್ಟು ಬಿದ್ದಿತ್ತು. ಒಮ್ಮೊಮ್ಮೆ ಬುದ್ಧಿ ಭ್ರಮಣೆಯಾದವನಂತೆ ವರ್ತಿಸುತ್ತಿದ್ದ.
ಜೊತೆಗೆ ಪದೇ ಪದೇ ಮದುವೆ ಮಾಡಿಸುವಂತೆ ತಾಯಿ ಜೊತೆ ಜಗಳವಾಡುತ್ತಿದ್ದ. ಮಾ.26 ರಂದು ಮನೆಯಲ್ಲಿ ತಾಯಿ ಗಂಗಮ್ಮನ ಜೊತೆ ಮದುವೆ ವಿಚಾರಕ್ಕೆ ಜಗಳ ತೆಗೆದಿದ್ದನಂತೆ. ಮೊದಲು ಕೈಯಿಂದ ತಾಯಿ ಗಂಗಮ್ಮನ ತಲೆಗೆ ಬಲವಾಗಿ ಹೊಡೆದಿದ್ದಾನೆ. ಹೊಡೆತ ತಾಳಲಾರದೆ ತಾಯಿ ಗಂಗಮ್ಮ ಮನೆಯಲ್ಲಿಯೇ ಕುಸಿದು ಬಿದ್ದಿದ್ದಾರೆ. ನಂತರ ತಲೆ ಮೇಲೆ ಕಲ್ಲು ಎತ್ತಿಹಾಕಿದ್ದಾನೆ.
ತೀವ್ರವಾಗಿ ಗಾಯಗೊಂಡು ಹಿಮ್ಸ್ನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಗಮ್ಮ, ಚಿಕಿತ್ಸೆ ಫಲಕಾರಿಯಾಗದೆ ಮಾ.30ರ ಮಧ್ಯರಾತ್ರಿ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.
ಶ್ರವಣಬೆಳಗೊಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…