ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ.
ಗಂಗಮ್ಮ (65), ಕೊಲೆಯಾದ ಮಹಿಳೆ.
ಉಮಾಶಂಕರ (40) ತಾಯಿಯನ್ನು ಬರ್ಬರವಾಗಿ ಕೊಲೆ ಮಾಡಿದ ಪಾಪಿ ಪುತ್ರ.
ಉಮಾಶಂಕರ ಕಳೆದ ಎರಡು ವರ್ಷದ ಹಿಂದೆ ಅಪಘಾತವಾಗಿ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ. ಕಳೆದ ಒಂದು ವರ್ಷದ ಹಿಂದೆ ಕುಂಭಮೇಳಕ್ಕೆ ತೆರಳಿ ವಾಪಾಸ್ ಆಗುವಾಗ ಅಪಘಾತದಲ್ಲಿ ಉಮಾಶಂಕರ್ ತಲೆಗೆ ಪೆಟ್ಟು ಬಿದ್ದಿತ್ತು. ಒಮ್ಮೊಮ್ಮೆ ಬುದ್ಧಿ ಭ್ರಮಣೆಯಾದವನಂತೆ ವರ್ತಿಸುತ್ತಿದ್ದ.
ಜೊತೆಗೆ ಪದೇ ಪದೇ ಮದುವೆ ಮಾಡಿಸುವಂತೆ ತಾಯಿ ಜೊತೆ ಜಗಳವಾಡುತ್ತಿದ್ದ. ಮಾ.26 ರಂದು ಮನೆಯಲ್ಲಿ ತಾಯಿ ಗಂಗಮ್ಮನ ಜೊತೆ ಮದುವೆ ವಿಚಾರಕ್ಕೆ ಜಗಳ ತೆಗೆದಿದ್ದನಂತೆ. ಮೊದಲು ಕೈಯಿಂದ ತಾಯಿ ಗಂಗಮ್ಮನ ತಲೆಗೆ ಬಲವಾಗಿ ಹೊಡೆದಿದ್ದಾನೆ. ಹೊಡೆತ ತಾಳಲಾರದೆ ತಾಯಿ ಗಂಗಮ್ಮ ಮನೆಯಲ್ಲಿಯೇ ಕುಸಿದು ಬಿದ್ದಿದ್ದಾರೆ. ನಂತರ ತಲೆ ಮೇಲೆ ಕಲ್ಲು ಎತ್ತಿಹಾಕಿದ್ದಾನೆ.
ತೀವ್ರವಾಗಿ ಗಾಯಗೊಂಡು ಹಿಮ್ಸ್ನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಗಮ್ಮ, ಚಿಕಿತ್ಸೆ ಫಲಕಾರಿಯಾಗದೆ ಮಾ.30ರ ಮಧ್ಯರಾತ್ರಿ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.
ಶ್ರವಣಬೆಳಗೊಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…