Categories: Crime

ಮದುವೆ ವಿಷಯ ಮುಚ್ಚಿಟ್ಟು ಮೋಸ! ಲಿವ್-ಇನ್ ಗೆಳತಿಯನ್ನು ವೈಯರ್‌ನಿಂದ ಕೊಂದ ವಿವಾಹಿತ.!

ಬೆಂಗಳೂರು: ಸಿಲಿಕಾನ್ ಸಿಟಿಯ ವರ್ತೂರಿನಲ್ಲಿ ಭಯಾನಕ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪ್ರೀತಿಯ ಹೆಸರಿನಲ್ಲಿ ಮದುವೆಯ ಸತ್ಯವನ್ನು ಮುಚ್ಚಿಟ್ಟು, ಲಿವ್-ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವತಿಯನ್ನು ಆಕೆಯ ಗೆಳೆಯನೇ ಅತ್ಯಂತ ಕ್ರೂರವಾಗಿ ಹತ್ಯೆ ಮಾಡಿದ್ದಾನೆ. ಕೊಡಗು ಮೂಲದ 23 ವರ್ಷದ ರಂಜಿತಾ ಈ ಘಟನೆಯಲ್ಲಿ ಮೃತಪಟ್ಟ ದುರ್ದೈವಿ.

ಪ್ರೀತಿಯ ಹೆಸರಿನಲ್ಲಿ ವಂಚನೆ

ಕೊಡಗಿನಿಂದ ಕೆಲಸ ಅರಸಿ ಬೆಂಗಳೂರಿಗೆ ಬಂದಿದ್ದ ರಂಜಿತಾಳಿಗೆ, ಅಯ್ಯಪ್ಪ ಎಂಬಾತ ಪರಿಚಯವಾಗಿತ್ತು. ಬಳಿಕ ಇಬ್ಬರ ಪ್ರೀತಿಯಾಗಿತ್ತು. ಕಳೆದ ಕೆಲವು ಸಮಯದಿಂದ ಇವರಿಬ್ಬರು ವರ್ತೂರಿನ ಬಾಡಿಗೆ ಮನೆಯೊಂದರಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದರು. ಅಯ್ಯಪ್ಪ ತನ್ನನ್ನು ಮದುವೆಯಾಗುತ್ತಾನೆ ಎಂದು ರಂಜಿತಾ ನಂಬಿದ್ದರು. ಆದರೆ ಅಯ್ಯಪ್ಪನಿಗೆ ಈಗಾಗಲೇ ಮದುವೆಯಾಗಿತ್ತು ಎಂಬ ಸತ್ಯ ರಂಜಿತಾಳಿಗೆ ತಿಳಿದಿರಲಿಲ್ಲ.

ಅಯ್ಯಪ್ಪನಿಗೆ ಈ ಮೊದಲೇ ಮದುವೆಯಾಗಿರುವ ವಿಷಯ ರಂಜಿತಾಳಿಗೆ ಇತ್ತೀಚೆಗೆ ತಿಳಿದುಬಂದಿದೆ. ಈ ವಿಚಾರವಾಗಿ ಇಬ್ಬರ ನಡುವೆ ಮನೆಯಲ್ಲಿ ದೊಡ್ಡ ಮಟ್ಟದ ಗಲಾಟೆ ನಡೆದಿದೆ. ನನಗೆ ಮೋಸ ಮಾಡಿ ಯಾಕೆ ನನ್ನ ಜೊತೆ ಇದ್ದೀಯಾ ? ಎಂದು ರಂಜಿತಾ ಪ್ರಶ್ನಿಸಿದಾಗ ಇಬ್ಬರ ನಡುವಿನ ವಾಗ್ವಾದ ತಾರಕಕ್ಕೇರಿದೆ.

ಕತ್ತು ಬಿಗಿದು ಭೀಕರ ಹತ್ಯೆ

ಜಗಳ ವಿಕೋಪಕ್ಕೆ ಹೋದಾಗ ಆಕ್ರೋಶಗೊಂಡ ಅಯ್ಯಪ್ಪ, ಮನೆಯಲ್ಲಿದ್ದ ಎಲೆಕ್ಟ್ರಿಕಲ್ ವೈಯರ್‌ನಿಂದ ರಂಜಿತಾಳ ಕತ್ತನ್ನು ಬಿಗಿದಿದ್ದಾನೆ. ಯುವತಿ ಪ್ರಾಣ ಉಳಿಸಿಕೊಳ್ಳಲು ಒದ್ದಾಡಿದರೂ ಆರೋಪಿ ವೈಯರ್ ಬಿಗಿದು ಆಕೆಯನ್ನ ಕ್ರೂರವಾಗಿ ಕೊಲೆ ಮಾಡಿದ್ದಾನೆ. ಘಟನೆ ನಡೆದ ನಂತರ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾನೆ.

ಘಟನೆಯ ಬಗ್ಗೆ ಮಾಹಿತಿ ತಿಳಿದ ಕೂಡಲೇ ವರ್ತೂರು ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತ ರಂಜಿತಾಳ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಸದ್ಯ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿ ಅಯ್ಯಪ್ಪನನ್ನು ಬಂಧಿಸಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

23 hours ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

2 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

3 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

4 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

4 days ago