Categories: Crime

ಮದುವೆ ವಿಷಯ ಮುಚ್ಚಿಟ್ಟು ಮೋಸ! ಲಿವ್-ಇನ್ ಗೆಳತಿಯನ್ನು ವೈಯರ್‌ನಿಂದ ಕೊಂದ ವಿವಾಹಿತ.!

ಬೆಂಗಳೂರು: ಸಿಲಿಕಾನ್ ಸಿಟಿಯ ವರ್ತೂರಿನಲ್ಲಿ ಭಯಾನಕ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪ್ರೀತಿಯ ಹೆಸರಿನಲ್ಲಿ ಮದುವೆಯ ಸತ್ಯವನ್ನು ಮುಚ್ಚಿಟ್ಟು, ಲಿವ್-ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವತಿಯನ್ನು ಆಕೆಯ ಗೆಳೆಯನೇ ಅತ್ಯಂತ ಕ್ರೂರವಾಗಿ ಹತ್ಯೆ ಮಾಡಿದ್ದಾನೆ. ಕೊಡಗು ಮೂಲದ 23 ವರ್ಷದ ರಂಜಿತಾ ಈ ಘಟನೆಯಲ್ಲಿ ಮೃತಪಟ್ಟ ದುರ್ದೈವಿ.

ಪ್ರೀತಿಯ ಹೆಸರಿನಲ್ಲಿ ವಂಚನೆ

ಕೊಡಗಿನಿಂದ ಕೆಲಸ ಅರಸಿ ಬೆಂಗಳೂರಿಗೆ ಬಂದಿದ್ದ ರಂಜಿತಾಳಿಗೆ, ಅಯ್ಯಪ್ಪ ಎಂಬಾತ ಪರಿಚಯವಾಗಿತ್ತು. ಬಳಿಕ ಇಬ್ಬರ ಪ್ರೀತಿಯಾಗಿತ್ತು. ಕಳೆದ ಕೆಲವು ಸಮಯದಿಂದ ಇವರಿಬ್ಬರು ವರ್ತೂರಿನ ಬಾಡಿಗೆ ಮನೆಯೊಂದರಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದರು. ಅಯ್ಯಪ್ಪ ತನ್ನನ್ನು ಮದುವೆಯಾಗುತ್ತಾನೆ ಎಂದು ರಂಜಿತಾ ನಂಬಿದ್ದರು. ಆದರೆ ಅಯ್ಯಪ್ಪನಿಗೆ ಈಗಾಗಲೇ ಮದುವೆಯಾಗಿತ್ತು ಎಂಬ ಸತ್ಯ ರಂಜಿತಾಳಿಗೆ ತಿಳಿದಿರಲಿಲ್ಲ.

ಅಯ್ಯಪ್ಪನಿಗೆ ಈ ಮೊದಲೇ ಮದುವೆಯಾಗಿರುವ ವಿಷಯ ರಂಜಿತಾಳಿಗೆ ಇತ್ತೀಚೆಗೆ ತಿಳಿದುಬಂದಿದೆ. ಈ ವಿಚಾರವಾಗಿ ಇಬ್ಬರ ನಡುವೆ ಮನೆಯಲ್ಲಿ ದೊಡ್ಡ ಮಟ್ಟದ ಗಲಾಟೆ ನಡೆದಿದೆ. ನನಗೆ ಮೋಸ ಮಾಡಿ ಯಾಕೆ ನನ್ನ ಜೊತೆ ಇದ್ದೀಯಾ ? ಎಂದು ರಂಜಿತಾ ಪ್ರಶ್ನಿಸಿದಾಗ ಇಬ್ಬರ ನಡುವಿನ ವಾಗ್ವಾದ ತಾರಕಕ್ಕೇರಿದೆ.

ಕತ್ತು ಬಿಗಿದು ಭೀಕರ ಹತ್ಯೆ

ಜಗಳ ವಿಕೋಪಕ್ಕೆ ಹೋದಾಗ ಆಕ್ರೋಶಗೊಂಡ ಅಯ್ಯಪ್ಪ, ಮನೆಯಲ್ಲಿದ್ದ ಎಲೆಕ್ಟ್ರಿಕಲ್ ವೈಯರ್‌ನಿಂದ ರಂಜಿತಾಳ ಕತ್ತನ್ನು ಬಿಗಿದಿದ್ದಾನೆ. ಯುವತಿ ಪ್ರಾಣ ಉಳಿಸಿಕೊಳ್ಳಲು ಒದ್ದಾಡಿದರೂ ಆರೋಪಿ ವೈಯರ್ ಬಿಗಿದು ಆಕೆಯನ್ನ ಕ್ರೂರವಾಗಿ ಕೊಲೆ ಮಾಡಿದ್ದಾನೆ. ಘಟನೆ ನಡೆದ ನಂತರ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾನೆ.

ಘಟನೆಯ ಬಗ್ಗೆ ಮಾಹಿತಿ ತಿಳಿದ ಕೂಡಲೇ ವರ್ತೂರು ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತ ರಂಜಿತಾಳ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಸದ್ಯ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿ ಅಯ್ಯಪ್ಪನನ್ನು ಬಂಧಿಸಿದ್ದಾರೆ.

Ramesh Babu

Journalist

Recent Posts

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

6 hours ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

8 hours ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

14 hours ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

15 hours ago

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

1 day ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ : ಪಿಡಿಒ ರಂಜಿತ

ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

1 day ago