Categories: ಕೋಲಾರ

ಮದ್ಯದಂಗಡಿ ಮುಚ್ಚಿಸಲು ಆಗ್ರಹಿಸಿ ಮತದಾನ ಬಹಿಷ್ಕಾರ

ಕೋಲಾರ: ತಾಲ್ಲೂಕಿನ ಬೆಗ್ಲಿಬೆಣಜೇನಹಳ್ಳಿ ಗ್ರಾಮದಲ್ಲಿರುವ ಎಂಎಸ್ಐಎಲ್ ಮದ್ಯದಂಗಡಿಯನ್ನು ಮುಚ್ಚಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಮತದಾನ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.

ಗ್ರಾಮದ ಪ್ರವೇಶ ದ್ವಾರದಲ್ಲೇ ಮದ್ಯದಂಗಡಿ ನಿರ್ಮಿಸಿದ್ದು, ಊರಿನ ಯುವಕರು ಕುಡಿದು ಬರುತ್ತಾರೆ. ವಿದ್ಯಾರ್ಥಿಗಳು, ಮಹಿಳೆಯರು ಆ ರಸ್ತೆಯಲ್ಲಿ ಓಡಾಡುವುದೇ ಕಷ್ಟವಾಗಿದೆ ಮಹಿಳೆಯರು, ವಯೋವೃದ್ಧರು ನ್ಯಾಯಬೇಕು ಎಂದು ಆಗ್ರಹಿಸಿ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ನಮ್ಮ ಗ್ರಾಮದಲ್ಲಿರುವ ಮದ್ಯದಂಗಡಿ ಮುಚ್ಚಿಸುವವರೆಗೆ ನಾವು ಮತದಾನ ಮಾಡುವುದಿಲ್ಲ ಎಂದು ಪಟ್ಟು ಹಿಡಿದರು. ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಸ್ಥಳಕ್ಕೆ ಬಂದು ಕೂಡಲೇ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಕೋಲಾರ ಗ್ರಾಮಾಂತರ ಇನ್ ಸ್ಪೆಕ್ಟರ್ ಕಾಂತರಾಜ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಬಂದು ಪ್ರತಿಭಟನಕಾರರನ್ನು ಚದುರಿಸಿದರು.

ಮೊದಲು ಮತ ಹಾಕುವಂತೆ ಅಧಿಕಾರಿಗಳು ಮನವಿ ಮಾಡಿದರು.‌ ಮಧ್ಯಾಹ್ನದವರೆಗೆ ಮತದಾನ ಮಾಡಿರಲಿಲ್ಲ ಬಳಿಕ ಸಂಸದ ಎಸ್. ಮುನಿಸ್ವಾಮಿ ಎಂಎಲ್ಸಿ ಇಂಚರ ಗೋವಿಂದರಾಜು, ಮೈತ್ರಿ ಅಭ್ಯರ್ಥಿ ಮಲ್ಲೇಶ್ ಬಾಬು, ಜೆಡಿಎಸ್‌ ಮುಖಂಡ ಸಿಎಂಆರ್ ಶ್ರೀನಾಥ್ ಹಾಗೂ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಮನವಿ ಆಲಿಸಿದರು.

ಚುನಾವಣೆ ಮುಗಿದ ನಂತರ ಅತಿ ಶೀಘ್ರದಲ್ಲಿ ಮಧ್ಯದ ಅಂಗಡಿಯನ್ನು ತೆರವುಗೊಳಿಸುವುದಾಗಿ ಗ್ರಾಮಸ್ಥರಿಗೆ ಸಂಸದರು ಭರವಸೆ ನೀಡಿದರು. ಕ್ರಮದ ಬಗ್ಗೆ ಭರವಸೆ‌ ನೀಡಿ ಮನವೊಲಿಸಿದ ಮೇಲೆ ಮತಗಟ್ಟೆಗೆ ತೆರಳಿ ಮತದಾರರು ತಮ್ಮ ಹಕ್ಕು ಚಲಾಯಿಸಿದರು.

ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಕೃಷ್ಣಮ್ಮ, ಚಂದ್ರೇಗೌಡ, ಚನ್ನಪ್ಪ, ಮುನಿಯಪ್ಪ, ಬಿ.ಆರ್.ಮಂಜುನಾಥ್, ಅವಿನಾಶ್, ವಿಶ್ವನಾಥ್, ರಘು, ಅರುಣ್ ಕುಮಾರ್, ಶಿವರಾಜ್, ರಾಘವೇಂದ್ರ, ಮುಂತಾದವರು ಇದ್ದರು

Ramesh Babu

Journalist

Recent Posts

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

4 minutes ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

19 minutes ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

4 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

6 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

9 hours ago

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…

13 hours ago