Categories: ಕೋಲಾರ

ಮದ್ಯದಂಗಡಿ ಮುಚ್ಚಿಸಲು ಆಗ್ರಹಿಸಿ ಮತದಾನ ಬಹಿಷ್ಕಾರ

ಕೋಲಾರ: ತಾಲ್ಲೂಕಿನ ಬೆಗ್ಲಿಬೆಣಜೇನಹಳ್ಳಿ ಗ್ರಾಮದಲ್ಲಿರುವ ಎಂಎಸ್ಐಎಲ್ ಮದ್ಯದಂಗಡಿಯನ್ನು ಮುಚ್ಚಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಮತದಾನ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.

ಗ್ರಾಮದ ಪ್ರವೇಶ ದ್ವಾರದಲ್ಲೇ ಮದ್ಯದಂಗಡಿ ನಿರ್ಮಿಸಿದ್ದು, ಊರಿನ ಯುವಕರು ಕುಡಿದು ಬರುತ್ತಾರೆ. ವಿದ್ಯಾರ್ಥಿಗಳು, ಮಹಿಳೆಯರು ಆ ರಸ್ತೆಯಲ್ಲಿ ಓಡಾಡುವುದೇ ಕಷ್ಟವಾಗಿದೆ ಮಹಿಳೆಯರು, ವಯೋವೃದ್ಧರು ನ್ಯಾಯಬೇಕು ಎಂದು ಆಗ್ರಹಿಸಿ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ನಮ್ಮ ಗ್ರಾಮದಲ್ಲಿರುವ ಮದ್ಯದಂಗಡಿ ಮುಚ್ಚಿಸುವವರೆಗೆ ನಾವು ಮತದಾನ ಮಾಡುವುದಿಲ್ಲ ಎಂದು ಪಟ್ಟು ಹಿಡಿದರು. ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಸ್ಥಳಕ್ಕೆ ಬಂದು ಕೂಡಲೇ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಕೋಲಾರ ಗ್ರಾಮಾಂತರ ಇನ್ ಸ್ಪೆಕ್ಟರ್ ಕಾಂತರಾಜ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಬಂದು ಪ್ರತಿಭಟನಕಾರರನ್ನು ಚದುರಿಸಿದರು.

ಮೊದಲು ಮತ ಹಾಕುವಂತೆ ಅಧಿಕಾರಿಗಳು ಮನವಿ ಮಾಡಿದರು.‌ ಮಧ್ಯಾಹ್ನದವರೆಗೆ ಮತದಾನ ಮಾಡಿರಲಿಲ್ಲ ಬಳಿಕ ಸಂಸದ ಎಸ್. ಮುನಿಸ್ವಾಮಿ ಎಂಎಲ್ಸಿ ಇಂಚರ ಗೋವಿಂದರಾಜು, ಮೈತ್ರಿ ಅಭ್ಯರ್ಥಿ ಮಲ್ಲೇಶ್ ಬಾಬು, ಜೆಡಿಎಸ್‌ ಮುಖಂಡ ಸಿಎಂಆರ್ ಶ್ರೀನಾಥ್ ಹಾಗೂ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಮನವಿ ಆಲಿಸಿದರು.

ಚುನಾವಣೆ ಮುಗಿದ ನಂತರ ಅತಿ ಶೀಘ್ರದಲ್ಲಿ ಮಧ್ಯದ ಅಂಗಡಿಯನ್ನು ತೆರವುಗೊಳಿಸುವುದಾಗಿ ಗ್ರಾಮಸ್ಥರಿಗೆ ಸಂಸದರು ಭರವಸೆ ನೀಡಿದರು. ಕ್ರಮದ ಬಗ್ಗೆ ಭರವಸೆ‌ ನೀಡಿ ಮನವೊಲಿಸಿದ ಮೇಲೆ ಮತಗಟ್ಟೆಗೆ ತೆರಳಿ ಮತದಾರರು ತಮ್ಮ ಹಕ್ಕು ಚಲಾಯಿಸಿದರು.

ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಕೃಷ್ಣಮ್ಮ, ಚಂದ್ರೇಗೌಡ, ಚನ್ನಪ್ಪ, ಮುನಿಯಪ್ಪ, ಬಿ.ಆರ್.ಮಂಜುನಾಥ್, ಅವಿನಾಶ್, ವಿಶ್ವನಾಥ್, ರಘು, ಅರುಣ್ ಕುಮಾರ್, ಶಿವರಾಜ್, ರಾಘವೇಂದ್ರ, ಮುಂತಾದವರು ಇದ್ದರು

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

6 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

8 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

16 hours ago

ದೊಡ್ಡಬಳ್ಳಾಪುರದಲ್ಲಿ ಅದ್ಧೂರಿ ಶ್ರೀರಾಮೋತ್ಸವ‌:‌ ಹೆಲಿಕಾಪ್ಟರ್‌ನಿಂದ ಪುಷ್ಪಾರ್ಚನೆ: ಶ್ರೀರಾಮ ನಾಮದಲ್ಲಿ ಮಿಂದೆದ್ದ ಸಹಸ್ರಾರು ಜನ

ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…

21 hours ago

ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಮಕ್ಕಳು ದಾರುಣ ಸಾವು

ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…

24 hours ago

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್…!!?: ಪ್ರಸಾದ ತಿಂದ ಬಹುತೇಕ ಜನ ಆಸ್ಪತ್ರೆ ಪಾಲು….!

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…

1 day ago