Categories: ಕೋಲಾರ

ಮದ್ಯದಂಗಡಿ ಮುಚ್ಚಿಸಲು ಆಗ್ರಹಿಸಿ ಮತದಾನ ಬಹಿಷ್ಕಾರ

ಕೋಲಾರ: ತಾಲ್ಲೂಕಿನ ಬೆಗ್ಲಿಬೆಣಜೇನಹಳ್ಳಿ ಗ್ರಾಮದಲ್ಲಿರುವ ಎಂಎಸ್ಐಎಲ್ ಮದ್ಯದಂಗಡಿಯನ್ನು ಮುಚ್ಚಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಮತದಾನ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.

ಗ್ರಾಮದ ಪ್ರವೇಶ ದ್ವಾರದಲ್ಲೇ ಮದ್ಯದಂಗಡಿ ನಿರ್ಮಿಸಿದ್ದು, ಊರಿನ ಯುವಕರು ಕುಡಿದು ಬರುತ್ತಾರೆ. ವಿದ್ಯಾರ್ಥಿಗಳು, ಮಹಿಳೆಯರು ಆ ರಸ್ತೆಯಲ್ಲಿ ಓಡಾಡುವುದೇ ಕಷ್ಟವಾಗಿದೆ ಮಹಿಳೆಯರು, ವಯೋವೃದ್ಧರು ನ್ಯಾಯಬೇಕು ಎಂದು ಆಗ್ರಹಿಸಿ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ನಮ್ಮ ಗ್ರಾಮದಲ್ಲಿರುವ ಮದ್ಯದಂಗಡಿ ಮುಚ್ಚಿಸುವವರೆಗೆ ನಾವು ಮತದಾನ ಮಾಡುವುದಿಲ್ಲ ಎಂದು ಪಟ್ಟು ಹಿಡಿದರು. ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಸ್ಥಳಕ್ಕೆ ಬಂದು ಕೂಡಲೇ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಕೋಲಾರ ಗ್ರಾಮಾಂತರ ಇನ್ ಸ್ಪೆಕ್ಟರ್ ಕಾಂತರಾಜ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಬಂದು ಪ್ರತಿಭಟನಕಾರರನ್ನು ಚದುರಿಸಿದರು.

ಮೊದಲು ಮತ ಹಾಕುವಂತೆ ಅಧಿಕಾರಿಗಳು ಮನವಿ ಮಾಡಿದರು.‌ ಮಧ್ಯಾಹ್ನದವರೆಗೆ ಮತದಾನ ಮಾಡಿರಲಿಲ್ಲ ಬಳಿಕ ಸಂಸದ ಎಸ್. ಮುನಿಸ್ವಾಮಿ ಎಂಎಲ್ಸಿ ಇಂಚರ ಗೋವಿಂದರಾಜು, ಮೈತ್ರಿ ಅಭ್ಯರ್ಥಿ ಮಲ್ಲೇಶ್ ಬಾಬು, ಜೆಡಿಎಸ್‌ ಮುಖಂಡ ಸಿಎಂಆರ್ ಶ್ರೀನಾಥ್ ಹಾಗೂ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಮನವಿ ಆಲಿಸಿದರು.

ಚುನಾವಣೆ ಮುಗಿದ ನಂತರ ಅತಿ ಶೀಘ್ರದಲ್ಲಿ ಮಧ್ಯದ ಅಂಗಡಿಯನ್ನು ತೆರವುಗೊಳಿಸುವುದಾಗಿ ಗ್ರಾಮಸ್ಥರಿಗೆ ಸಂಸದರು ಭರವಸೆ ನೀಡಿದರು. ಕ್ರಮದ ಬಗ್ಗೆ ಭರವಸೆ‌ ನೀಡಿ ಮನವೊಲಿಸಿದ ಮೇಲೆ ಮತಗಟ್ಟೆಗೆ ತೆರಳಿ ಮತದಾರರು ತಮ್ಮ ಹಕ್ಕು ಚಲಾಯಿಸಿದರು.

ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಕೃಷ್ಣಮ್ಮ, ಚಂದ್ರೇಗೌಡ, ಚನ್ನಪ್ಪ, ಮುನಿಯಪ್ಪ, ಬಿ.ಆರ್.ಮಂಜುನಾಥ್, ಅವಿನಾಶ್, ವಿಶ್ವನಾಥ್, ರಘು, ಅರುಣ್ ಕುಮಾರ್, ಶಿವರಾಜ್, ರಾಘವೇಂದ್ರ, ಮುಂತಾದವರು ಇದ್ದರು

Ramesh Babu

Journalist

Recent Posts

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

6 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

2 days ago