Categories: ಕೋಲಾರ

ಮದ್ಯದಂಗಡಿ ಮುಚ್ಚಿಸಲು ಆಗ್ರಹಿಸಿ ಮತದಾನ ಬಹಿಷ್ಕಾರ

ಕೋಲಾರ: ತಾಲ್ಲೂಕಿನ ಬೆಗ್ಲಿಬೆಣಜೇನಹಳ್ಳಿ ಗ್ರಾಮದಲ್ಲಿರುವ ಎಂಎಸ್ಐಎಲ್ ಮದ್ಯದಂಗಡಿಯನ್ನು ಮುಚ್ಚಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಮತದಾನ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.

ಗ್ರಾಮದ ಪ್ರವೇಶ ದ್ವಾರದಲ್ಲೇ ಮದ್ಯದಂಗಡಿ ನಿರ್ಮಿಸಿದ್ದು, ಊರಿನ ಯುವಕರು ಕುಡಿದು ಬರುತ್ತಾರೆ. ವಿದ್ಯಾರ್ಥಿಗಳು, ಮಹಿಳೆಯರು ಆ ರಸ್ತೆಯಲ್ಲಿ ಓಡಾಡುವುದೇ ಕಷ್ಟವಾಗಿದೆ ಮಹಿಳೆಯರು, ವಯೋವೃದ್ಧರು ನ್ಯಾಯಬೇಕು ಎಂದು ಆಗ್ರಹಿಸಿ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ನಮ್ಮ ಗ್ರಾಮದಲ್ಲಿರುವ ಮದ್ಯದಂಗಡಿ ಮುಚ್ಚಿಸುವವರೆಗೆ ನಾವು ಮತದಾನ ಮಾಡುವುದಿಲ್ಲ ಎಂದು ಪಟ್ಟು ಹಿಡಿದರು. ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಸ್ಥಳಕ್ಕೆ ಬಂದು ಕೂಡಲೇ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಕೋಲಾರ ಗ್ರಾಮಾಂತರ ಇನ್ ಸ್ಪೆಕ್ಟರ್ ಕಾಂತರಾಜ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಬಂದು ಪ್ರತಿಭಟನಕಾರರನ್ನು ಚದುರಿಸಿದರು.

ಮೊದಲು ಮತ ಹಾಕುವಂತೆ ಅಧಿಕಾರಿಗಳು ಮನವಿ ಮಾಡಿದರು.‌ ಮಧ್ಯಾಹ್ನದವರೆಗೆ ಮತದಾನ ಮಾಡಿರಲಿಲ್ಲ ಬಳಿಕ ಸಂಸದ ಎಸ್. ಮುನಿಸ್ವಾಮಿ ಎಂಎಲ್ಸಿ ಇಂಚರ ಗೋವಿಂದರಾಜು, ಮೈತ್ರಿ ಅಭ್ಯರ್ಥಿ ಮಲ್ಲೇಶ್ ಬಾಬು, ಜೆಡಿಎಸ್‌ ಮುಖಂಡ ಸಿಎಂಆರ್ ಶ್ರೀನಾಥ್ ಹಾಗೂ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಮನವಿ ಆಲಿಸಿದರು.

ಚುನಾವಣೆ ಮುಗಿದ ನಂತರ ಅತಿ ಶೀಘ್ರದಲ್ಲಿ ಮಧ್ಯದ ಅಂಗಡಿಯನ್ನು ತೆರವುಗೊಳಿಸುವುದಾಗಿ ಗ್ರಾಮಸ್ಥರಿಗೆ ಸಂಸದರು ಭರವಸೆ ನೀಡಿದರು. ಕ್ರಮದ ಬಗ್ಗೆ ಭರವಸೆ‌ ನೀಡಿ ಮನವೊಲಿಸಿದ ಮೇಲೆ ಮತಗಟ್ಟೆಗೆ ತೆರಳಿ ಮತದಾರರು ತಮ್ಮ ಹಕ್ಕು ಚಲಾಯಿಸಿದರು.

ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಕೃಷ್ಣಮ್ಮ, ಚಂದ್ರೇಗೌಡ, ಚನ್ನಪ್ಪ, ಮುನಿಯಪ್ಪ, ಬಿ.ಆರ್.ಮಂಜುನಾಥ್, ಅವಿನಾಶ್, ವಿಶ್ವನಾಥ್, ರಘು, ಅರುಣ್ ಕುಮಾರ್, ಶಿವರಾಜ್, ರಾಘವೇಂದ್ರ, ಮುಂತಾದವರು ಇದ್ದರು

Ramesh Babu

Journalist

Recent Posts

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

3 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

4 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

23 hours ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

1 day ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

1 day ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

1 day ago